ಪ್ರತ್ಯೇಕ ಲಾಂಛನ: ಗ್ರಾ. ಪಂ. ಜನಪ್ರತಿನಿಧಿಗಳ ಬೇಡಿಕೆ  


Team Udayavani, Sep 9, 2022, 8:10 AM IST

ಪ್ರತ್ಯೇಕ ಲಾಂಛನ: ಗ್ರಾ. ಪಂ. ಜನಪ್ರತಿನಿಧಿಗಳ ಬೇಡಿಕೆ  

ಸಾಂದರ್ಭಿಕ ಚಿತ್ರ

ಬೆಂಗಳೂರು: ರಾಜ್ಯ ಸರಕಾರ ಹೊಂದಿರುವಂತೆ ಸ್ಥಳೀಯ ಸ್ವತಂತ್ರ ಸರಕಾರಗಳಾದ ಗ್ರಾಮ ಪಂಚಾಯತ್‌ಗಳಿಗೂ ಪ್ರತ್ಯೇಕ ಲಾಂಛನ ನೀಡುವಂತೆ ಗ್ರಾಮ ಪಂಚಾಯತ್‌ಗಳ ಚುನಾಯಿತ ಜನಪ್ರತಿನಿಧಿಗಳಿಂದ ಆಗ್ರಹ ಕೇಳಿ ಬಂದಿದೆ.

ರಾಜ್ಯ ಸರಕಾರದ ಲಾಂಛನ ಬಳಸಲು ಗ್ರಾ. ಪಂ. ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಸದಸ್ಯರಿಗೆ ಅವಕಾಶವಿಲ್ಲ ಎಂದಾದ ಮೇಲೆ ನಮಗೆ ಪ್ರತ್ಯೇಕ ಲಾಂಛನ ಬೇಕು. ದೇಶ ಸ್ವಾತಂತ್ರ್ಯದ ಅಮೃತ ಮಹೋತ್ಸವ ಆಚರಿಸುತ್ತಿರುವ ಈ ವಿಶೇಷ ಸಂದರ್ಭದಲ್ಲಿ ಸ್ಥಳೀಯ ಸ್ವಯಂ ಸರಕಾರಗಳಿಗೆ ಲಾಂಛನವನ್ನು ಕೊಡುಗೆಯಾಗಿ ನೀಡಬೇಕೆಂಬ ಬೇಡಿಕೆಯನ್ನು ಸರಕಾರದ ಮುಂದಿಡಲಾಗಿದೆ.

ರಾಜ್ಯದ ಗ್ರಾಮ ಪಂಚಾಯತ್‌ಗಳ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು ಹಾಗೂ ಪಂಚಾಯತ್‌ರಾಜ್‌ ಸಂಸ್ಥೆಗಳು ತಮ್ಮ ಲೆಟರ್‌ ಹೆಡ್‌, ವಿಸಿಟಿಂಗ್‌ ಕಾರ್ಡ್‌ ಹಾಗೂ ತಮ್ಮ ವ್ಯವಹಾರಗಳಲ್ಲಿ ಸರಕಾರದ ಲಾಂಛನ ಬಳಸುವ ಕುರಿತು ಸ್ಪಷ್ಟನೆ ಕೋರಿ ಕರ್ನಾಟಕ ರಾಜ್ಯ ಗ್ರಾಮ ಪಂಚಾಯತ್‌ ಸದಸ್ಯರ ಮಹಾ ಒಕ್ಕೂಟ ಇತ್ತೀಚೆಗೆ ಸರಕಾರಕ್ಕೆ ಪತ್ರ ಬರೆದಿತ್ತು.

ಅದಕ್ಕೆ ಹಿಂಬರಹ ಕೊಟ್ಟಿರುವ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್‌ರಾಜ್‌ ಇಲಾಖೆ  ಭಾರತದ ರಾಜ್ಯ ಲಾಂಛನಗಳ (ಬಳಕೆಯ ನಿಯಂತ್ರಣ) ನಿಯಮಗಳು-2007ರ ಪ್ರಕಾರ ಹಾಗೂ 2007ರ ಅ.4ರ ಕೇಂದ್ರ ಸರಕಾರದ ಗೃಹ ಸಚಿವಾಲಯದ ಅಧಿಸೂಚನೆ ಅನ್ವಯ ಗ್ರಾಮ ಪಂಚಾಯತ್‌ಗಳ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು ತಮ್ಮ ಲೆಟರ್‌ಹೆಡ್‌, ವಿಸಿಟಿಂಗ್‌ ಕಾರ್ಡ್‌ಗಳಲ್ಲಿ ಕರ್ನಾಟಕ ಸರಕಾರದ ಲಾಂಛನ ಬಳಸುವಂತಿಲ್ಲ ಎಂದು ತಿಳಿಸಿತ್ತು.

ಹಾಗಾಗಿ ನಮಗೆ ಪ್ರತ್ಯೇಕ ಲಾಂಛನ ಕೊಟ್ಟು ಬಿಡಿ. ಹೇಗಿದ್ದರೂ ಪಂಚಾಯತ್‌ಗಳನ್ನು ಸ್ಥಳೀಯ ಸ್ವತಂತ್ರ ಸರಕಾರಗಳೆಂದು ಸಂವಿಧಾನದಲ್ಲೇ ಹೇಳಲಾಗಿದೆ. ಅಂದ ಮೇಲೆ ರಾಜ್ಯ ಸರಕಾರಕ್ಕೆ ಇರುವಂತೆ ಪಂಚಾಯತ್‌ಗಳಿಗೂ ತಮ್ಮದೇ ಆದ ಪ್ರತ್ಯೇಕ ಲಾಂಛನ ಇರಬೇಕು ಅನ್ನುವುದು ನ್ಯಾಯೋಚಿತ ಎಂಬುದು ಪಂಚಾಯತ್‌ ಜನಪ್ರತಿನಿಧಿಗಳ ವಾದವಾಗಿದೆ.

 ಯಾರೆಲ್ಲ ಲಾಂಛನ ಬಳಸುವಂತಿಲ್ಲ? :

ಭಾರತದ ರಾಜ್ಯ ಲಾಂಛನಗಳ (ಬಳಕೆಯ ನಿಯಂತ್ರಣ) ನಿಯಮಗಳು-2007 ಪ್ರಕಾರ ಗ್ರಾಮ ಪಂಚಾಯತ್‌ಗಳ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು ಹಾಗೂ ಪಂಚಾಯತ್‌ರಾಜ್‌ ಸಂಸ್ಥೆಗಳು ತಮ್ಮ ಲೆಟರ್‌ ಹೆಡ್‌, ವಿಸಿಟಿಂಗ್‌ ಕಾರ್ಡ್‌ ಹಾಗೂ ತಮ್ಮ ವ್ಯವಹಾರಗಳಲ್ಲಿ ರಾಜ್ಯ ಸರಕಾರದ ಲಾಂಛನ ಬಳಸುವಂತಿಲ್ಲ. ಅದೇ ರೀತಿ ಮಾಜಿ ಸಂಸತ್‌ ಸದಸ್ಯರು, ಮಾಜಿ ಶಾಸಕರು, ಮಾಜಿ ನ್ಯಾಯಾಧೀಶರು, ಮಾಜಿ ಅಧಿಕಾರಿಗಳೂ  ಬಳಸುವಂತಿಲ್ಲ. ಜತೆಗೆ ಆಯೋಗಗಳು, ಸಮಿತಿಗಳು, ಸರಕಾರಿ ಸ್ವಾಮ್ಯದ ಸಂಸ್ಥೆಗಳು, ಬ್ಯಾಂಕುಗಳು, ಪೌರ ನಿಗಮಗಳು, ಪಂಚಾಯತ್‌ರಾಜ್‌ ಸಂಸ್ಥೆಗಳಿಗೂ ಲಾಂಛನ ಬಳಸಲು ಅವಕಾಶವಿಲ್ಲ.

ಸರಕಾರಿ ಲಾಂಛನವನ್ನು ಪಂಚಾಯತ್‌ ಬಳಸುವಂತಿಲ್ಲ ಎಂದು ಸರಕಾರವೇ ಸ್ಪಷ್ಟಪಡಿಸಿರುವುದರಿಂದ ಸ್ಥಳೀಯ ಸರಕಾರಗಳಾದ ಪಂಚಾಯತ್‌ಗಳಿಗೆ ಪ್ರತ್ಯೇಕ ಲಾಂಛನ ನೀಡಲು  ಸರಕಾರಕ್ಕೆ ಮನವಿ ಸಲ್ಲಿಸಲಾಗಿದೆ. ಕೆ.ಎಸ್‌. ಸತೀಶ್‌, ರಾಜ್ಯಾಧ್ಯಕ್ಷರು,ರಾಜ್ಯ ಗ್ರಾ.ಪಂ. ಸದಸ್ಯ ಮಹಾ ಒಕ್ಕೂಟ.

ಟಾಪ್ ನ್ಯೂಸ್

1-qqwewqeeqwe

Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ

1-qqewewqe

Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ

1-qweqwqe

Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

7-modi

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ

1-wqe-qweq

Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qqwewqeeqwe

Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ

1-qqewewqe

Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ

1-qweqwqe

Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.