ರಾಜ್ಯಕ್ಕಾಗೇ ಪ್ರತ್ಯೇಕ ವಾಹನ ವಿನ್ಯಾಸ?


Team Udayavani, Oct 25, 2017, 7:40 AM IST

25-4.jpg

ಬೆಂಗಳೂರು: ರಾಜ್ಯ ಸರ್ಕಾರ 100 ಸಿಸಿಗಿಂತ ಕಡಿಮೆ ಇರುವ ದ್ವಿಚಕ್ರ ವಾಹನಗಳಲ್ಲಿ ಹಿಂಬದಿ ಸವಾರರಿಗೆ ಅವಕಾಶವಿಲ್ಲ ಎಂದು ಆದೇಶ ಹೊರಡಿಸಿರುವ ಹಿನ್ನೆಲೆಯಲ್ಲಿ ಇದೀಗ ದ್ವಿಚಕ್ರ ವಾಹನ ತಯಾರಿಕಾ ಕಂಪನಿಗಳಿಗೆ ಕರ್ನಾಟಕಕ್ಕಾಗಿಯೇ ಪ್ರತ್ಯೇಕವಾಗಿ ವಾಹನಗಳನ್ನು ವಿನ್ಯಾಸಗೊಳಿಸಬೇಕಾದ ಅನಿವಾರ್ಯತೆ ಎದುರಾಗಿದೆ. 100 ಸಿಸಿಗಿಂತ ಕಡಿಮೆ ಸಾಮರ್ಥ್ಯದ ಸಿಂಗಲ್‌ ಸೀಟು ಇರುವ ದ್ವಿಚಕ್ರ ವಾಹನಗಳ ನೋಂದಣಿಗೆ ನಿಯಮದಲ್ಲಿ ಅವಕಾಶ ಕಲ್ಪಿಸಲಾಗಿದೆ. ಹೀಗಾಗಿ, ಇನ್ಮುಂದೆ ದ್ವಿಚಕ್ರ ವಾಹನಗಳ ತಯಾರಿಕಾ ಕಂಪೆನಿಗಳು ಪ್ರತ್ಯೇಕವಾಗಿ ವಿನ್ಯಾಸಗೊಳಿಸಿ ಮಾರುಕಟ್ಟೆಗೆ ಬಿಡುಗಡೆ ಮಾಡಬೇಕಿದೆ. ಸಾರಿಗೆ ಇಲಾಖೆ
ಮೂಲಗಳ ಪ್ರಕಾರ ಬೇರೆ ರಾಜ್ಯಗಳಲ್ಲಿ 100 ಸಿಸಿಗಿಂತ ಕಡಿಮೆ ಸಾಮರ್ಥ್ಯ ಇರುವ ವಾಹನಗಳ ಹಿಂಬದಿ ಸವಾರರಿಗೆ ನಿಷೇಧಿಸಿದ ಉದಾಹರಣೆಗಳು ಇಲ್ಲ. ರಾಜ್ಯದಲ್ಲಿ ಮಾತ್ರ ನಿಯಮ ಜಾರಿಗೊಳಿಸಲಾಗಿದೆ.

65 ಪ್ರಕಾರ; 6 ಲಕ್ಷ ವಾಹನಗಳು: ಈ ಮಧ್ಯೆ ಮಾರುಕಟ್ಟೆಯಲ್ಲಿ 6,075ಕ್ಕೂ ಅಧಿಕ ಪ್ರಕಾರದ ದ್ವಿಚಕ್ರ ವಾಹನಗಳಿದ್ದು, ಈ ಪೈಕಿ ಟಿವಿಎಸ್‌- 50, ಸ್ಕೂಟಿ, ಲೂನಾ ಸೇರಿದಂತೆ 100 ಸಿಸಿಗಿಂತ ಕಡಿಮೆ ಸಾಮರ್ಥ್ಯ ಹೊಂದಿರುವ ಅಂದಾಜು 65ಕ್ಕೂ ಅಧಿಕ ಪ್ರಕಾರದ ವಾಹನಗಳಿವೆ. ರಾಜ್ಯದಲ್ಲಿ ಈ ಮಾದರಿಯ ಸುಮಾರು 6 ಲಕ್ಷ ದ್ವಿಚಕ್ರ ವಾಹನಗಳಿವೆ. ಆದರೆ, ಪ್ರತಿ ವರ್ಷ ಸಾವಿರಾರು ವಾಹನಗಳು ಬೆಂಗಳೂರಿನಲ್ಲಿ ರಸ್ತೆಗಿಳಿಯುತ್ತವೆ ಎಂದು ಸಾರಿಗೆ ಇಲಾಖೆ ಅಧಿಕಾರಿಗಳು ಮಾಹಿತಿ ನೀಡುತ್ತಾರೆ.

ಸಾಮಾನ್ಯವಾಗಿ ಕಡಿಮೆ ಸಿಸಿ ಇರುವ ದ್ವಿಚಕ್ರ ವಾಹನಗಳು ಹೆಚ್ಚು ಮೈಲೇಜ್‌ ಕೊಡುತ್ತವೆ. ಇದಕ್ಕಾಗಿ ಜನ ಈ ಮಾದರಿಯ ವಾಹನಗಳನ್ನು ಖರೀದಿಸುತ್ತಾರೆ. ಇದಲ್ಲದೆ, ಲಗೇಜು ಸಾಗಿಸಲು, ಹಗುರವಾಗಿರುವುದರಿಂದ ಮಹಿಳೆಯರು ಈ ಪ್ರಕಾರದ ವಾಹನಗಳನ್ನು ಇಷ್ಟಪಡುತ್ತಾರೆ. 100ಸಿಸಿಗಿಂತ ಕಡಿಮೆ ಸಾಮರ್ಥ್ಯದ ಸುಮಾರು 30 ದ್ವಿಚಕ್ರ ವಾಹನಗಳು ಪ್ರತಿ ತಿಂಗಳು ಮಾರಾಟ ಆಗುತ್ತವೆ ಎಂದು ಬೊಮ್ಮನಹಳ್ಳಿಯ ಅರುಣಗಿರಿ ಮೋಟಾರ್ ಮಾರುಕಟ್ಟೆ ವ್ಯವಸ್ಥಾಪಕ ಮಿತ್ರ ತಿಳಿಸುತ್ತಾರೆ. 

ಅಗತ್ಯಬಿದ್ದರೆ ಪರಿಶೀಲನೆ: ಸದ್ಯಕ್ಕಂತೂ ನ್ಯಾಯಾಲ ಯದ ಆದೇಶದಂತೆ ಈ ಮಾದರಿಯ ವಾಹನಗಳ ನೋಂದಣಿ ಸ್ಥಗಿತಗೊಳಿಸಲಾಗಿದೆ. ಮುಂದಿನ ದಿನಗಳಲ್ಲಿ ಜನರ ಸ್ಪಂದನೆ ನೋಡಿಕೊಂಡು, ನಿಯಮವನ್ನು ಪರಿಶೀಲನೆಗೊಳಪಡಿಸುವ ಅಗತ್ಯಬಿದ್ದರೆ, ಆ ನಿಟ್ಟಿನಲ್ಲೂ ಕ್ರಮ ಕೈಗೊಳ್ಳಲಾಗುವುದು ಎಂದು ಸಾರಿಗೆ ಇಲಾಖೆ ಕಾರ್ಯದರ್ಶಿ ಬಸವರಾಜು
“ಉದಯವಾಣಿ’ಗೆ ಸ್ಪಷ್ಟಪಡಿಸಿದರು.

ಜನ ಬಯಸಿದರೆ ತಿದ್ದುಪಡಿಗೆ ಸಿದ್ಧ
ಬೆಂಗಳೂರು: ಹೈಕೋರ್ಟ್‌ ಆದೇಶದಂತೆ 100 ಸಿಸಿಗಿಂತ ಕಡಿಮೆ ಸಾಮರ್ಥಯದ ದ್ವಿಚಕ್ರ ವಾಹನಗಳಲ್ಲಿ ಹಿಂಬದಿ ಸವಾರಿಯನ್ನು ನಿಷೇಧಿಸಲಾಗಿದೆ. ಆದರೆ, ಈ ವಿಚಾರದ ಬಗ್ಗೆ ಸಾರ್ವಜನಿಕರಲ್ಲಿ ಚರ್ಚೆ ಆಗಬೇಕು. ಒಂದೊಮ್ಮೆ ಜನ ಬಯಸಿದರೆ “ಕರ್ನಾಟಕ ಮೋಟಾರು ವಾಹನ ಕಾಯ್ದೆ-1989ರ ನಿಯಮ 143 (3)’ ಗೆ ತಿದ್ದುಪಡಿ ತರಲು ಸರ್ಕಾರ ಮುಂದಾಗಲಿದೆ ಎಂದು ಸಾರಿಗೆ ಸಚಿವ ಎಚ್‌.ಎಂ. ರೇವಣ್ಣ ತಿಳಿಸಿದ್ದಾರೆ. ವಿಕಾಸೌಧದಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, 100 ಸಿಸಿಗಿಂತ ಕಡಿಮೆ
ಸಾಮರ್ಥಯದ ಇಂಜಿನ್‌ಗಳನ್ನು ಹೊಂದಿರುವ ದ್ವಿಚಕ್ರ ವಾಹನಗಳಲ್ಲಿ ಹಿಂಬದಿ ಸವಾರಿ ನಿಷೇಧಕ್ಕೆ ಸಂಬಂಧಿಸಿದಂತೆ ಸರ್ಕಾರ ಹೈಕೋರ್ಟ್‌ ಆದೇಶ ಪಾಲನೆ ಮಾಡಿದೆಯಷ್ಟೇ. ಇದು ಸಾರಿಗೆ ಇಲಾಖೆಯ ತೀರ್ಮಾನವೂ ಅಲ್ಲ, ಯಾವುದೇ ಹಸ್ತಕ್ಷೇಪವೂ ಇಲ್ಲ ಎಂದರು. 

ಟಾಪ್ ನ್ಯೂಸ್

Rain ಕರಾವಳಿ ಸಹಿತ ರಾಜ್ಯದ ವಿವಿಧೆಡೆ ಉತ್ತಮ ಮಳೆ, ನಾಲ್ಕು ಜೀವಹಾನಿ

Rain ಕರಾವಳಿ ಸಹಿತ ರಾಜ್ಯದ ವಿವಿಧೆಡೆ ಉತ್ತಮ ಮಳೆ, ನಾಲ್ಕು ಜೀವಹಾನಿ

Ambedkar ಇಲ್ಲದಿದ್ದರೆ ನೆಹರೂ ಮೀಸಲು ನೀಡುತ್ತಿರಲಿಲ್ಲ : ಮೋದಿ

Ambedkar ಇಲ್ಲದಿದ್ದರೆ ನೆಹರೂ ಮೀಸಲು ನೀಡುತ್ತಿರಲಿಲ್ಲ : ಮೋದಿ

ocon

ಲೀಡ್‌ ಕೊಡಿಸದಿದ್ದರೆ ಅಧಿಕಾರವೂ ಸಿಗದು; ಹುದ್ದೆ ಬಯಸುವ ಕಾರ್ಯಕರ್ತರಿಗೆ ಡಿಕೆಶಿ ಚಾಟಿ

Puttur ಅಂಗಳದಲ್ಲಿದ್ದ ವ್ಯಕ್ತಿ ಸಾವು ಸಿಡಿಲಾಘಾತ / ಹೃದಯಾಘಾತ ಶಂಕೆ

Puttur ಅಂಗಳದಲ್ಲಿದ್ದ ವ್ಯಕ್ತಿ ಸಾವು ಸಿಡಿಲಾಘಾತ / ಹೃದಯಾಘಾತ ಶಂಕೆ

Singapore Airlines; 3 ನಿಮಿಷಗಳಲ್ಲಿ 6 ಸಾವಿರ ಅಡಿ ಕುಸಿದ ವಿಮಾನ: 1 ಸಾವು

Singapore Airlines; 3 ನಿಮಿಷಗಳಲ್ಲಿ 6 ಸಾವಿರ ಅಡಿ ಕುಸಿದ ವಿಮಾನ: 1 ಸಾವು

ಚಲಿಸುತ್ತಿದ್ದ ಕಾರಿನ ಮೇಲೆ ಮರ ಬಿದ್ದು ಇಬ್ಬರಿಗೆ ಗಾಯ

Vitla ಚಲಿಸುತ್ತಿದ್ದ ಕಾರಿನ ಮೇಲೆ ಮರ ಬಿದ್ದು ಇಬ್ಬರಿಗೆ ಗಾಯ

Heavy Rain ಕರಾವಳಿ, ಕೊಡಗು ಜಿಲ್ಲೆಯಲ್ಲಿ ಗುಡುಗು ಸಹಿತ ಬಿರುಸಿನ ಮಳೆ

Heavy Rain ಕರಾವಳಿ, ಕೊಡಗು ಜಿಲ್ಲೆಯಲ್ಲಿ ಗುಡುಗು ಸಹಿತ ಬಿರುಸಿನ ಮಳೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Rain ಕರಾವಳಿ ಸಹಿತ ರಾಜ್ಯದ ವಿವಿಧೆಡೆ ಉತ್ತಮ ಮಳೆ, ನಾಲ್ಕು ಜೀವಹಾನಿ

Rain ಕರಾವಳಿ ಸಹಿತ ರಾಜ್ಯದ ವಿವಿಧೆಡೆ ಉತ್ತಮ ಮಳೆ, ನಾಲ್ಕು ಜೀವಹಾನಿ

ocon

ಲೀಡ್‌ ಕೊಡಿಸದಿದ್ದರೆ ಅಧಿಕಾರವೂ ಸಿಗದು; ಹುದ್ದೆ ಬಯಸುವ ಕಾರ್ಯಕರ್ತರಿಗೆ ಡಿಕೆಶಿ ಚಾಟಿ

puPU ಪರೀಕ್ಷೆ-2: ವಿಜ್ಞಾನ ವಿದ್ಯಾರ್ಥಿಗಳದ್ದೇ ಸಿಂಹಪಾಲು

PU ಪರೀಕ್ಷೆ-2: ವಿಜ್ಞಾನ ವಿದ್ಯಾರ್ಥಿಗಳದ್ದೇ ಸಿಂಹಪಾಲು

bjpMLC Elections: ಬಿಜೆಪಿಯಲ್ಲಿ 3 ಸ್ಥಾನಕ್ಕೆ 30 ಆಕಾಂಕ್ಷಿಗಳು

MLC Elections: ಬಿಜೆಪಿಯಲ್ಲಿ 3 ಸ್ಥಾನಕ್ಕೆ 30 ಆಕಾಂಕ್ಷಿಗಳು

DK Shivakumar ರಕ್ಷಿಸಿದರೆ ಮುಂದೆ ಬೆಲೆ ತೆರಬೇಕಾಗುತ್ತದೆ: ಎಚ್‌ಡಿಕೆ ಎಚ್ಚರಿಕೆ

DK Shivakumar ರಕ್ಷಿಸಿದರೆ ಮುಂದೆ ಬೆಲೆ ತೆರಬೇಕಾಗುತ್ತದೆ: ಎಚ್‌ಡಿಕೆ ಎಚ್ಚರಿಕೆ

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

Balagopal

Kerala; ಕೇಂದ್ರದ ಸವಾಲು ನಡುವೆ ರಾಜ್ಯದ ಆದಾಯ ಹೆಚ್ಚಳ: ಕೇರಳ ಸಚಿವ

Rain ಕರಾವಳಿ ಸಹಿತ ರಾಜ್ಯದ ವಿವಿಧೆಡೆ ಉತ್ತಮ ಮಳೆ, ನಾಲ್ಕು ಜೀವಹಾನಿ

Rain ಕರಾವಳಿ ಸಹಿತ ರಾಜ್ಯದ ವಿವಿಧೆಡೆ ಉತ್ತಮ ಮಳೆ, ನಾಲ್ಕು ಜೀವಹಾನಿ

Ambedkar ಇಲ್ಲದಿದ್ದರೆ ನೆಹರೂ ಮೀಸಲು ನೀಡುತ್ತಿರಲಿಲ್ಲ : ಮೋದಿ

Ambedkar ಇಲ್ಲದಿದ್ದರೆ ನೆಹರೂ ಮೀಸಲು ನೀಡುತ್ತಿರಲಿಲ್ಲ : ಮೋದಿ

ocon

ಲೀಡ್‌ ಕೊಡಿಸದಿದ್ದರೆ ಅಧಿಕಾರವೂ ಸಿಗದು; ಹುದ್ದೆ ಬಯಸುವ ಕಾರ್ಯಕರ್ತರಿಗೆ ಡಿಕೆಶಿ ಚಾಟಿ

Puttur ಅಂಗಳದಲ್ಲಿದ್ದ ವ್ಯಕ್ತಿ ಸಾವು ಸಿಡಿಲಾಘಾತ / ಹೃದಯಾಘಾತ ಶಂಕೆ

Puttur ಅಂಗಳದಲ್ಲಿದ್ದ ವ್ಯಕ್ತಿ ಸಾವು ಸಿಡಿಲಾಘಾತ / ಹೃದಯಾಘಾತ ಶಂಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.