Karnataka ಧೂಮಪಾನ ಮುಕ್ತ ರಾಜ್ಯ? ಕೋಟ್ಪಾ ಕಾಯ್ದೆ ತಿದ್ದುಪಡಿಗೆ ಆರೋಗ್ಯ ಇಲಾಖೆ ಚಿಂತನೆ
Team Udayavani, Sep 12, 2023, 12:59 AM IST
ಬೆಂಗಳೂರು: ಧೂಮಪಾನವು ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುತ್ತಿರುವ ಹಿನ್ನೆಲೆಯಲ್ಲಿ ಆರೋಗ್ಯ ಇಲಾಖೆಯು ರಾಜ್ಯವನ್ನು ಧೂಮಪಾನ ಮುಕ್ತ ವಲಯವನ್ನಾಗಿಸುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ ಇರಿಸಿದೆ.
ರಾಜ್ಯಾದ್ಯಂತ ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನಕ್ಕೆ ನಿರ್ಬಂಧವಿದೆ. ಆದರೆ 2003ರ ಮೂಲ ಕಾಯ್ದೆ ಸೆಕ್ಷನ್ 4ರಡಿಯಲ್ಲಿ ಹೊಟೇಲ್, ವಾಣಿಜ್ಯ ಮಳಿಗೆ, ಐಟಿ ಬಿಟಿ ಕಚೇರಿ, ಮಾಲ್ಗಳಲ್ಲಿ ಧೂಮಪಾನ ವಲಯ ನಿರ್ಮಿಸಲು ಅವಕಾಶ ಕಲ್ಪಿಸಲಾಗಿತ್ತು. ಆದರೆ ಈ ಧೂಮಪಾನ ವಲಯಗಳಲ್ಲಿ ಕೋಟ್ಪಾ ಕಾಯ್ದೆಯ ನಿಯಮಾವಳಿ ಉಲ್ಲಂಘಿಸುತ್ತಿರುವುದು ಸಮೀಕ್ಷೆಯಿಂದ ದೃಢಪಟ್ಟಿದೆ. ಈ ಹಿನ್ನೆಲೆಯಲ್ಲಿ ಸಾರ್ವಜನಿಕರ ಆರೋಗ್ಯ ದೃಷ್ಟಿಯಿಂದ ಧೂಮಪಾನ ವಲಯ ನಿಷೇಧಿಸಲು ಸರಕಾರಕ್ಕೆ ಕರಡು ಪ್ರಸ್ತಾವನೆ ಸಲ್ಲಿಸಲಾಗಿದೆ.
ಕಾರಣವೇನು?
ಧೂಮಪಾನ ವಲಯ ನಿರ್ಮಿಸಲು ಆರೋಗ್ಯ ಇಲಾಖೆಯಿಂದ ಎನ್ಒಸಿ ಪಡೆಯುವಾಗ ಕಾಯ್ದೆ ನಿಯಮಾವಳಿ ಪಾಲಿಸುವಂತೆ ಆದೇಶಿಸಲಾಗುತ್ತಿದೆ. ಆದರೆ ಯಾರೂ ಪಾಲಿಸುತ್ತಿಲ್ಲ ಎಂದು ಸರ್ವೇ ಉಲ್ಲೇಖೀಸಿದೆ.
ಕ್ಯಾನ್ಸರ್ ಪ್ರಕರಣಗಳು ಹೆಚ್ಚಳ
ರಾಜ್ಯದಲ್ಲಿ ತಂಬಾಕು ಸಂಬಂಧಿ ಕ್ಯಾನ್ಸರ್ ಮತ್ತಿತರ ಪ್ರಕರಣಗಳು ಹೆಚ್ಚುತ್ತಿವೆ. ಕಿದ್ವಾಯಿ ಸಂಸ್ಥೆಯಲ್ಲಿ 2022ರಲ್ಲಿ ದಾಖಲಾದ 10,496 ಪ್ರಕರಣಗಳಲ್ಲಿ 3,544 ತಂಬಾಕು ಬಳಕೆಯಿಂದ ಉಂಟಾದ ಕ್ಯಾನ್ಸರ್ಗಳು. ಇವರಲ್ಲಿ 2,432 ಪುರುಷರು ಹಾಗೂ 1,112 ಮಹಿಳೆಯರಿದ್ದಾರೆ. ಪುರುಷರಲ್ಲಿ ಕಾಣಿಸಿಕೊಂಡ ಶೇ. 51ರಷ್ಟು ಹಾಗೂ ಮಹಿಳೆಯರಲ್ಲಿ ಶೇ. 18ರಷ್ಟು ಕ್ಯಾನ್ಸರ್ಗಳು ತಂಬಾಕು ಸೇವನೆಯಿಂದಾಗಿವೆ.
ರಾಜ್ಯದಲ್ಲಿ ತಂಬಾಕು ಉತ್ಪನ್ನಗಳ ಬಳಕೆ ಆರೋಗ್ಯದ ಮೇಲೆ ವ್ಯತಿರಿಕ್ತ ಪರಿಣಾಮ ಬೀರುತ್ತಿದೆ. ಜತೆಗೆ ಧೂಮಪಾನ ವಲಯದಲ್ಲಿ ಕೋಟ್ಪಾ ಕಾಯ್ದೆ ನಿಯಮ ಉಲ್ಲಂಘನೆ ಆಗುತ್ತಿರುವುದರಿಂದ ಧೂಮಪಾನ ವಲಯ ಕೈ ಬಿಡುವ ಬಗ್ಗೆ ಸರಕಾರಕ್ಕೆ ಕರಡು ಪ್ರಸ್ತಾವನೆ ಸಲ್ಲಿಸಲಾಗಿದೆ.
– ಡಾ| ರಂದೀಪ್, ಆರೋಗ್ಯ ಇಲಾಖೆ ಆಯುಕ್ತ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ
Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ
Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ
LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ
ಗ್ಯಾರಂಟಿಗಳಿಂದ ಜನ ಭ್ರಷ್ಟರಾಗುತ್ತಾರೆ ಎನ್ನಲಾಗದು: ಹೈಕೋರ್ಟ್ ತೀರ್ಪು