Irrigation ಯೋಜನೆಗಳ ಚರ್ಚೆಗೆ ಸಂಸದರ ತಂಡ: ಡಿ.ಕೆ.ಶಿವಕುಮಾರ್
ಇಂದು ಮತ್ತು ನಾಳೆ 31 ಸಂಸದರ ತಂಡದಿಂದ ಕಾವೇರಿ ನದಿ ವೀಕ್ಷಣೆ
Team Udayavani, Jan 8, 2024, 1:08 AM IST
ಬೆಂಗಳೂರು: ರಾಜ್ಯದ ನೀರಾವರಿ ಸಮಸ್ಯೆಗಳ ಕುರಿತು ಚರ್ಚಿಸಲು 31 ಸಂಸದರ ತಂಡ ಎರಡು ದಿನ ಕಾವೇರಿ ನದಿ ವೀಕ್ಷಣೆಗೆ ಬರಲಿದೆ ಎಂದು ಡಿ.ಕೆ. ಶಿವಕುಮಾರ್ ತಿಳಿಸಿದರು.
ರವಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಹನಿ ಮತ್ತು ತುಂತುರು ನೀರಾವರಿ ಸೇರಿ ಸಣ್ಣ ನೀರಾವರಿ ಯೋಜನೆಗಳು, ಕೇಂದ್ರದ ತ್ವರಿತ ನೀರಾವರಿ ಯೋಜನೆ (ಎಐಬಿಪಿ) ಅಡಿ ರಾಜ್ಯದಲ್ಲಿ ಕೈಗೊಂಡ ಕ್ರಮಗಳು, ನೀರಿನ ನಿರ್ವಹಣೆಯಂತಹ ಹಲವು ವಿಚಾರಗಳ ಕುರಿತು ಈ ತಂಡ ಇಲಾಖೆ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಲಿದೆ ಎಂದು ತಿಳಿಸಿದರು.
ನದಿ ಜೋಡಣೆ ವಿಚಾರ ಪ್ರಸ್ತಾವದ ಬಗ್ಗೆ ಕೇಳಿದಾಗ, ಅದು ಕೇಂದ್ರ ಸರಕಾರದ ಯೋಜನೆ. ಇದೊಂದು ದೊಡ್ಡ ಯೋಜನೆಯಾಗಿದ್ದು, ಈಗ ವಿಷಯಾಂತರ ಆಗುವುದು ಬೇಡ. ನಾಳೆ ಮತ್ತು ನಾಡಿದ್ದು (ಜ. 8 9) ಕೇಂದ್ರದ 31 ಸಂಸದರ ತಂಡ ಕಾವೇರಿ ವೀಕ್ಷಣೆ ಮಾಡಲಿದೆ. ಅನಂತರ ನೀರಾವರಿ ಸಮಸ್ಯೆಗಳ ಬಗ್ಗೆ ರಾಜ್ಯದ ನೀರಾವರಿ ಮತ್ತು ಸಣ್ಣ ನೀರಾವರಿ ಇಲಾಖೆ ಅಧಿಕಾರಿಗಳ ಜತೆ ಚರ್ಚೆ ನಡೆಸಲಿದೆ ಎಂದರು.
“ಉದಯವಾಣಿ’ ಜತೆಗೆ ಮಾತನಾಡಿದ ಜಲಸಂಪನ್ಮೂಲ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ನದಿ ಜೋಡಣೆಗೂ ಸಂಸದರ ತಂಡದ ಕಾವೇರಿ ವೀಕ್ಷಣೆಗೂ ಸಂಬಂಧ ಇಲ್ಲ. ರಾಜ್ಯದ ನೀರಾವರಿ ವಿಷಯಗಳ ಕುರಿತು ಈ ತಂಡ ಚರ್ಚಿಸ ಲಿದೆ. ಅದರಲ್ಲೂ ಮುಖ್ಯವಾಗಿ ಎಐಬಿಪಿ ಅಡಿ ಕೈಗೊಂಡ ಕ್ರಮಗಳು ಚರ್ಚೆಗೆ ಬರಲಿವೆ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ
Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು
China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ
ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ
Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ
MUST WATCH
ಹೊಸ ಸೇರ್ಪಡೆ
Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ
Sirsi ; ಪ್ರಧಾನಿ ಮುಡಿಗೇರಿದ ಬೇಡರ ವೇಷದ ಕಿರೀಟ!
Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ
Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ
Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !