ಕಳೆದು ಹೋಗಿದ್ದ ಪುತ್ರನನ್ನು ಹುಡುಕಿಕೊಟ್ಟ ಆಧಾರ್‌: 6 ವರ್ಷದ ಬಳಿಕ ಅಮ್ಮನ ಮಡಿಲು ಸೇರಿದ ಮಗ

ಭಜರಂಗಿ ಭಾಯ್‌ಜಾನ್‌ ಸಿನಿಮಾ ನೆನಪಿಸಿದ ಘಟನೆ

Team Udayavani, Mar 13, 2022, 12:49 PM IST

ಕಳೆದು ಹೋಗಿದ್ದ ಪುತ್ರನನ್ನು ಹುಡುಕಿಕೊಟ್ಟ ಆಧಾರ್‌: 6 ವರ್ಷದ ಬಳಿಕ ಅಮ್ಮನ ಮಡಿಲು ಸೇರಿದ ಮಗ

ಬೆಂಗಳೂರು: ಆಧಾರ್‌ ಕಾರ್ಡ್‌ ನೀಡಿದ ಮಾಹಿತಿ ಆಧಾರದಲ್ಲಿ ಕಳೆದ 6 ವರ್ಷಗಳ ಹಿಂದೆ ಯಲಹಂಕದಲ್ಲಿ ನಾಪತ್ತೆಯಾಗಿದ್ದ ಮಾತು ಬಾರದ ಮಗನನ್ನು ತಾಯಿ ಮಡಿಲು ಸೇರಿಸುವಲ್ಲಿ ಪೊಲೀಸರು ಯಶಸ್ವಿಯಾಗಿರುವ ಮಾನವೀಯ ಘಟನೆ ನಡೆದಿದೆ.

ಪತ್ತೆಯಾಗಿರುವ ಭರತ್‌ (19) ಮಾತು ಬಾರದ ಯುವಕನಾಗಿದ್ದು, ಭಜರಂಗಿ ಭಾಯ್‌ಜಾನ್‌ ಸಿನಿಮಾದಲ್ಲಿ ನಡೆಯುವಂತಹದ್ದೇ ಘಟನೆಯಾಗಿದೆ.

2016ರಲ್ಲಿ ಯಲಹಂಕ ಬಳಿಯ ಸಿಂಗನಾಯಕನಹಳ್ಳಿ ತರಕಾರಿ ಮಾರುಕಟ್ಟೆಗೆ ಭರತ್‌ ತಾಯಿ ಪಾರ್ವತಮ್ಮ ಮಗನನ್ನು ಕರೆದುಕೊಂಡು ಹೋಗಿದ್ದರು. ಅಲ್ಲಿ ಭರತ್‌ ನಾಪತ್ತೆಯಾಗಿದ್ದ. ಮಾರುಕಟ್ಟೆಯಲ್ಲಿ ಜನದಟ್ಟಣೆಯಿಂದ ಕೂಡಿದ್ದರಿಂದ ಮತ್ತೆ ಎಷ್ಟೇ ಹುಡುಕಾಡಿದರೂ ಮಗ ಸಿಕ್ಕಿರಲಿಲ್ಲ. ಕೊನೆಗೆ ಪಾರ್ವತಮ್ಮ ಯಲಹಂಕ ಠಾಣೆಯಲ್ಲಿ ಮಗ ನಾಪತ್ತೆಯಾಗಿರುವ ಬಗ್ಗೆ ದೂರು ನೀಡಿದ್ದರು.

ಪೊಲೀಸರು ಕೆಲ ಸಮಯ ಭರತ್‌ಗಾಗಿ ಹುಡುಕಾಡಿದರೂ ಪ್ರಯೋಜನವಾಗಿರಲಿಲ್ಲ. ಇತ್ತ ಭರತ್‌, ಯಲಹಂಕ ರೈಲ್ವೆ ನಿಲ್ದಾಣದ ವರೆಗೆ ನಡೆದುಕೊಂಡು ಬಂದು ಅಲ್ಲಿ ನಿಂತಿದ್ದ ರೈಲು ಹತ್ತಿದ್ದ. ಅದು ಮಹಾರಾಷ್ಟ್ರದ ನಾಗಪುರ ರೈಲ್ವೆ ನಿಲ್ದಾಣ ತಲುಪುತ್ತಿದ್ದಂತೆ ರೈಲಿನಿಂದ ಇಳಿದಿದ್ದ. ಭರತ್‌ನನ್ನು ಗಮನಿಸಿದ್ದ ರೈಲ್ವೆ ಭದ್ರತಾ ಪಡೆ ಅಧಿಕಾರಿಗಳು ಆತನನ್ನು ಪುನರ್ವಸತಿ ಕೇಂದ್ರಕ್ಕೆ ಸೇರಿಸಿದ್ದರು. ಭರತ್‌ಗೆ ಮಾತು ಬಾರದೇಯಿದ್ದ ಹಿನ್ನೆಲೆಯಲ್ಲಿ ಊರು ಹಾಗೂ ಹಿನ್ನೆಲೆಯ ಬಗ್ಗೆ ತಿಳಿದುಕೊಳ್ಳಲು ಸಾಧ್ಯ ವಾಗಿರಲಿಲ್ಲ.

ಆಧಾರ್‌ ಕಾರ್ಡ್‌ ಕೊಟ್ಟ ಸುಳಿವು: ಭರತ್‌ಗೆ ಆಧಾರ್‌ ಕಾರ್ಡ್‌ ಮಾಡಿಸಲು ಪುನರ್ವಸತಿ ಕೇಂದ್ರದ ಅಧಿಕಾರಿಯೊಬ್ಬರು ಕಳೆದ ಜನವರಿಯಲ್ಲಿ ನಾಗಪುರದ ಸ್ಥಳೀಯ ಆಧಾರ್‌ ಸೇವಾ ಕೇಂದ್ರಕ್ಕೆ ಕರೆದೊಯ್ದಿದ್ದರು. ಅಲ್ಲಿ ಭರತ್‌ನ ಬೆರಳು ಮುದ್ರೆ ಪಡೆದಾಗ ತಿರಸ್ಕೃತವಾಗಿತ್ತು.

ಈಗಾಗಲೇ ಬೆಂಗಳೂರಿನಲ್ಲಿ ಭರತ್‌ ಕುಮಾರ್‌ ಹೆಸರಿನಲ್ಲಿ ಆಧಾರ್‌ ಕಾರ್ಡ್‌ ಚಾಲ್ತಿಯಲ್ಲಿರುವ ಬಗ್ಗೆ ಸುಳಿವು ಸಿಕ್ಕಿತ್ತು. ಬೆಂಗಳೂರಿನಲ್ಲಿ ಭರತ್‌ ಹೆಸರಿನಲ್ಲಿದ್ದ ವ್ಯಕ್ತಿಯ ಬೆರಳಚ್ಚು ಹೋಲಿಕೆ ಮಾಡಿದಾಗ ಎರಡಕ್ಕೂ ಸಾಮ್ಯತೆ ಇರುವುದು ಕಂಡು ಬಂದಿತ್ತು.

ಆಧಾರ್‌ ಕಾರ್ಡ್‌ ದಾಖಲೆ ಮೂಲಕ ಭರತ್‌ನ ತಾಯಿ ಪಾರ್ವತಮ್ಮ ಮೊಬೈಲ್ ನಂಬರ್‌ ಪಡೆದ ನಾಗಪುರ ಪುನರ್ವಸತಿ ಕೇಂದ್ರದ ಸಿಬ್ಬಂದಿ, ಅವರಿಗೆ ಕರೆ ಮಾಡಿ ವಿಷಯ ತಿಳಿಸಿದ್ದಾರೆ. ಜೊತೆಗೆ ಯಲಹಂಕ ಪೊಲೀಸರನ್ನು ಸಂಪರ್ಕಸಿ ಮಾಹಿತಿ ನೀಡಿದ್ದರು. ಯಲಹಂಕ ಠಾಣೆ ಪೊಲೀಸರು ಪಾರ್ವತಮ್ಮ ಅವರನ್ನು ಪತ್ತೆ ಹಚ್ಚಿ, ಠಾಣಾ ಸಿಬ್ಬಂದಿ ಜತೆಗೆ ನಾಗಪುರಕ್ಕೆ ಕರೆದುಕೊಂಡು ಹೋದರು. ಮಾ.7ರಂದು ಮಗನನ್ನು ಕಂಡ ಪಾರ್ವತಮ್ಮ ಭಾವುಕರಾಗಿದ್ದು, ಸದ್ಯ ಮನೆಗೆ ಕರೆ ತಂದಿದ್ದಾರೆ.

ಟಾಪ್ ನ್ಯೂಸ್

Mahadev Betting App Case; Actor Sahil Khan arrested by Mumbai police

Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ

2-baikampady

Baikampady: ಲಾರಿಗಳ ನಡುವೆ ಅಪಘಾತ; ಚಾಲಕ ಗಂಭೀರ ಗಾಯ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

by-raghavendra

Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ

ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗ್ಯಾರಂಟಿಗಳಿಂದ ಜನ ಭ್ರಷ್ಟರಾಗುತ್ತಾರೆ ಎನ್ನಲಾಗದು: ಹೈಕೋರ್ಟ್‌ ತೀರ್ಪು

ಗ್ಯಾರಂಟಿಗಳಿಂದ ಜನ ಭ್ರಷ್ಟರಾಗುತ್ತಾರೆ ಎನ್ನಲಾಗದು: ಹೈಕೋರ್ಟ್‌ ತೀರ್ಪು

ಅಂತೂ ಬಂತು ಬರ ಪರಿಹಾರ: ರಾಜ್ಯಕ್ಕೆ 3,454 ಕೋ.ರೂ. ಬರ ಪರಿಹಾರ ಬಿಡುಗಡೆ

ಅಂತೂ ಬಂತು ಬರ ಪರಿಹಾರ: ರಾಜ್ಯಕ್ಕೆ 3,454 ಕೋ.ರೂ. ಬರ ಪರಿಹಾರ ಬಿಡುಗಡೆ

Hassan ವೀಡಿಯೋ ಪ್ರಕರಣ ಎಸ್‌ಐಟಿ ತನಿಖೆಗೆ

Drought Relief: ಕಾಂಗ್ರೆಸ್‌-ಬಿಜೆಪಿ ಬರ ಪರಿಹಾರ ಜಟಾಪಟಿ

Drought Relief: ಕಾಂಗ್ರೆಸ್‌-ಬಿಜೆಪಿ ಬರ ಪರಿಹಾರ ಜಟಾಪಟಿ

Drought Relief: ಎಕ್ಸ್‌ (ಟ್ವಿಟರ್‌)ನಲ್ಲೂ ಕಾಂಗ್ರೆಸ್‌-ಬಿಜೆಪಿ ವಾಕ್ಸಮರ

Drought Relief: ಎಕ್ಸ್‌ (ಟ್ವಿಟರ್‌)ನಲ್ಲೂ ಕಾಂಗ್ರೆಸ್‌-ಬಿಜೆಪಿ ವಾಕ್ಸಮರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Mahadev Betting App Case; Actor Sahil Khan arrested by Mumbai police

Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ

2-baikampady

Baikampady: ಲಾರಿಗಳ ನಡುವೆ ಅಪಘಾತ; ಚಾಲಕ ಗಂಭೀರ ಗಾಯ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Belagavi; ಕುಂದಾನಗರಿಯಲ್ಲಿ ಮೋದಿ ಸಮಾವೇಶ: ಹರಿದು ಬಂದ ಜನಸಾಗರ

Belagavi; ಕುಂದಾನಗರಿಯಲ್ಲಿ ಮೋದಿ ಸಮಾವೇಶ: ಹರಿದು ಬಂದ ಜನಸಾಗರ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.