ಖಾತೆಗೆ ಆಧಾರ್ ಸೀಡಿಂಗ್: ನ.20 ಕೊನೆಯ ದಿನ
Team Udayavani, Nov 13, 2019, 3:02 AM IST
ಮಂಗಳೂರು: ಪ್ರಸ್ತುತ ಸಾಲಿನಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ಮಂಜೂರಾಗುವ ಸ್ಕಾಲರ್ ಶಿಪ್, ವಿದ್ಯಾಸಿರಿ ಮತ್ತು ಶುಲ್ಕ ವಿನಾಯಿತಿಗಳನ್ನು ವಿದ್ಯಾರ್ಥಿಗಳ ಆಧಾರ್ ಆಧಾರಿತ ಬ್ಯಾಂಕ್ ಖಾತೆಗಳಿಗೆ ಪಾವತಿ ಮಾಡಲಾಗುತ್ತದೆ. ಆದ್ದರಿಂದ ಈ ಸಾಲಿನಲ್ಲಿ ಸ್ಕಾಲರ್ಶಿಪ್, ವಿದ್ಯಾಸಿರಿ ಮತ್ತು ಶುಲ್ಕ ವಿನಾಯಿತಿಗೆ ಅರ್ಜಿ ಸಲ್ಲಿಸಿರುವ ವಿದ್ಯಾರ್ಥಿಗಳು ತಮ್ಮ ಬ್ಯಾಂಕ್ ಖಾತೆಗೆ ಆಧಾರ್ ಸೀಡಿಂಗ್ ಆಗಿರುವುದನ್ನು ಖಚಿತ ಪಡಿಸಿಕೊಳ್ಳಬೇಕು.
ಅಲ್ಲದೆ, ಖಾತೆ ಚಾಲನೆಯಲ್ಲಿ ಇರುವಂತೆ ನೋಡಿಕೊಳ್ಳಬೇಕು. ಆಧಾರ್ ಸೀಡಿಂಗ್ ಮಾಡಿಕೊಳ್ಳಲು ನ.20 ಕೊನೆಯ ದಿನ. ಒಂದು ವೇಳೆ ಬ್ಯಾಂಕ್ ಖಾತೆ ಚಾಲನೆಯಲ್ಲಿ ಇಲ್ಲದಿದ್ದರೆ ಮತ್ತು ಆಧಾರ್ ಸಂಖ್ಯೆಗೆ ಸೀಡಿಂಗ್ ಆಗದಿದ್ದಲ್ಲಿ ವಿದ್ಯಾರ್ಥಿ ವೇತನದಿಂದ ವಂಚಿತರಾಗುವ ಸಾಧ್ಯತೆ ಇರುತ್ತದೆ ಎಂದು ಪ್ರಕಟಣೆ ತಿಳಿಸಿದೆ.