44 ಲಕ್ಷ ಮಂದಿಗೆ ಡೆಂಘಿ ಚಿಕೂನ್‌ ಗುನ್ಯಾ ಆತಂಕ


Team Udayavani, Aug 2, 2017, 7:55 AM IST

dengue.jpg

ಬೆಂಗಳೂರು: ಮಾರಕ ಡೆಂಘಿ, ಚಿಕೂನ್‌ ಗುನ್ಯಾ ಮತ್ತು ಎಚ್‌1-ಎನ್‌1 ಕಾಯಿಲೆ ಇನ್ನಿಲ್ಲದಂತೆ ಕಾಡುತ್ತಿದ್ದು, ಇದರಿಂದ
ಬಳಲುತ್ತಿರುವವರ ಸಂಖ್ಯೆ ರಾಜ್ಯದಲ್ಲಿ ಹೆಚ್ಚುತ್ತಲೇ ಇದೆ. ಅಲ್ಲದೇ ಬರೊಬ್ಬರಿ 44 ಲಕ್ಷಕ್ಕೂ ಹೆಚ್ಚು ಜನ ಡೆಂಗ್ಯೂ, ಚಿಕೂನ್‌ ಗುನ್ಯಾದ ಅಪಾಯದಲ್ಲಿದ್ದಾರೆ. ಇದು ಸರ್ಕಾರಿ ದಾಖಲೆಯಷ್ಟೇ. ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿರುವವರ ಸಂಖ್ಯೆ ಲೆಕ್ಕಕ್ಕೂ ಸಿಗದು. ಆರೋಗ್ಯ ಇಲಾಖೆಯ ಮಾಹಿತಿ ಪ್ರಕಾರ, ರಾಜ್ಯದ 147 ತಾಲೂಕುಗಳ 937 ಪ್ರಾಥಮಿಕ ಆರೋಗ್ಯ ಕೇಂದ್ರಗಳ ವ್ಯಾಪ್ತಿಯ 2,044 ಗ್ರಾಮಗಳು ಅಥವಾ ಪ್ರದೇಶಗಳ 43.89 ಲಕ್ಷ ಜನಸಂಖ್ಯೆ ಡೆಂ à ಮತ್ತು 107 ತಾಲೂಕುಗಳ 395 ಪ್ರಾಥಮಿಕ ಆರೋಗ್ಯ ಕೇಂದ್ರಗಳ ವ್ಯಾಪ್ತಿಯ 636 ಗ್ರಾಮ ಅಥವಾ
ಪ್ರದೇಶಗಳ 9.92 ಲಕ್ಷ ಜನಸಂಖ್ಯೆ ಚಿಕೂನ್‌ ಗುನ್ಯಾದ ಅಪಾಯದಲ್ಲಿದೆ.

ಖಾಸಗಿ ಆಸ್ಪತ್ರೆಗಳಲ್ಲಿನ ಡೆಂಘಿ ಸಾವಿನ ಪ್ರಕರಣಗಳನ್ನು ಮರೆಮಾಚಲಾಗುತ್ತಿದ್ದು, ಬಹುತೇಕ ಪ್ರಕರಣಗಳಲ್ಲಿ ಸಾವಿಗೆ ಬಹು ಅಂಗಾಗ ವೈಫ‌ಲ್ಯ ಸೇರಿದಂತೆ ಇನ್ನಿತರ ದೀರ್ಘ‌ಕಾಯಿಲೆಗಳ ಬಣ್ಣ ಕಟ್ಟಲಾಗುತ್ತಿದೆ. ಸರ್ಕಾರ ಎಷ್ಟೆಲ್ಲ ಕ್ರಮಗಳನ್ನು ಕೈಗೊಳ್ಳುತ್ತಿದ್ದರೂ, ಡೆಂಘಿ ಮತ್ತು ಚಿಕೂನ್‌ ಗುನ್ಯಾಗೆ ಕಾರಣವಾಗುವ ಸೊಳ್ಳೆಗಳ ಉತ್ಪತ್ತಿ ಹೆಚ್ಚಾಗುತ್ತಿದ್ದು, ಕಾಯಿಲೆ ವ್ಯಾಪಕವಾಗಿ ಹರಡುತ್ತಿದೆ. ರಾಜ್ಯದಲ್ಲಿ 43.89 ಲಕ್ಷ ಜನ ಡೆಂಘಿ ಹಾಗೂ 9.92 ಲಕ್ಷ ಮಂದಿ ಚಿಕೂನ್‌ ಗುನ್ಯಾದ ಅಪಾಯ ಎದುರಿಸುತ್ತಿದ್ದಾರೆ.

ಜನವರಿಯಿಂದ ಆಗಸ್ಟ್‌ 1ರವರೆಗೆ ರಾಜ್ಯದಲ್ಲಿ ಒಟ್ಟು 4,339 ಡೆಂಘಿ ಹಾಗೂ 1,087 ಚಿಕೂನ್‌ಗುನ್ಯಾ ಪೀಡಿತ
ಪ್ರಕರಣಗಳು ದಾಖಲಾಗಿದ್ದು, ಅದರಲ್ಲಿ ಡೆಂಘಿ ಪೀಡಿತ ಐದು ಮಂದಿ ಸಾವನ್ನಪ್ಪಿದ್ದಾರೆ. ಇದೇ ಅವಧಿಯಲ್ಲಿ ಎಚ್‌1ಎನ್‌1 ಪೀಡಿತ 2,746 ಪ್ರಕರಣಗಳು ದಾಖಲಾಗಿದ್ದು, ಇದರಲ್ಲಿ 15 ಮಂದಿ ಮೃತಪಟ್ಟಿದ್ದಾರೆ.

ರಾಜ್ಯದಲ್ಲಿ ಇಲ್ಲಿವರೆಗೆ 26,720 ಶಂಕಿತ ಡೆಂಘಿ ಪ್ರಕರಣಗಳಲ್ಲಿ 17 ಪ್ರಕರಣಗಳ ರಕ್ತದ ಮಾದರಿಯನ್ನು
ಪರೀಕ್ಷೆಗೊಳಪಡಿಸಲಾಗಿದ್ದು, ಇದರಲ್ಲಿ 4,339 ಪ್ರಕರಣಗಳು ದೃಢಪಟ್ಟಿವೆ. ಅದೇ ರೀತಿ 10 ಸಾವಿರ ಶಂಕಿತ
ಚಿಕೂನ್‌ಗುನ್ಯಾ ಪ್ರಕರಣಗಳಲ್ಲಿ 6 ಸಾವಿರ ಪ್ರಕರಣಗಳ ರಕ್ತದ ಮಾದರಿ ಪರೀಕ್ಷಿಸಲಾಗಿದ್ದು, 1,087 ಪ್ರಕರಣಗಳು
ದೃಢಪಟ್ಟಿವೆ. ಜೊತೆಗೆ 10 ಸಾವಿರ ಎಚ್‌ 1ಎನ್‌1 ಶಂಕಿತ ಪ್ರಕರಣಗಳಲ್ಲಿ 2,700 ಪ್ರಕರಣಗಳಗಳು ದೃಢಪಟ್ಟಿವೆ. ಡೆಂ àಗೆ 5 ಮಂದಿ ಪ್ರಾಣ ಕಳೆದುಕೊಂಡಿದ್ದರೆ, ಎಚ್‌1ಎನ್‌1 ಗೆ 15 ಜನ ಸಾವನ್ನಪ್ಪಿದ್ದಾರೆ.

ಚಿಕೂನ್‌ಗುನ್ಯಾ ಇಲ್ಲಿವರೆಗೆ ಯಾವುದೇ ಆಹುತಿ ಪಡೆದುಕೊಂಡಿಲ್ಲ ಅನ್ನುವುದು ಸಮಧಾನದ ಸಂಗತಿ.

ಮಂಡ್ಯ ಜಿಲ್ಲೆಗೆ ಹೆಚ್ಚು ಅಪಾಯ
ಮಂಡ್ಯ ಜಿಲ್ಲೆ ಅತಿ ಹೆಚ್ಚು ಅಪಾಯದಲ್ಲಿದ್ದು, ಅಲ್ಲಿನ 4 ಲಕ್ಷ ಮಂದಿ ಡೆಂಘಿ ಹಾಗೂ 2.27 ಲಕ್ಷ ಜನ ಚಿಕೂನ್‌ಗುನ್ಯಾದ
ಅಪಾಯದಲ್ಲಿದ್ದಾರೆ. ಮಂಡ್ಯ ಜಿಲ್ಲೆಯಲ್ಲಿ ಡೆಂಘಿಯ 2,253 ಶಂಕಿತ ಪ್ರಕರಣಗಳಲ್ಲಿ ಅತಿ ಹೆಚ್ಚು 564 ಪ್ರಕರಣಗಳು ದೃಢಪಟ್ಟಿವೆ. ಅದೇ ರೀತಿ ಚಿಕೂನ್‌ಗುನ್ಯಾದ 1,200 ಪ್ರಕರಣಗಳಲ್ಲಿ 284 ಪ್ರಕರಣಗಳು ದೃಢಪಟ್ಟಿವೆ. ಶಂಕಿತ
ಪ್ರಕರಣಗಳಲ್ಲಿ ತುಮಕೂರು ಜಿಲ್ಲೆ ಮುಂದೆ ಇದ್ದು, ಇಲ್ಲಿ 2,365 ಡೆಂಘಿ ಹಾಗೂ 1,695 ಶಂಕಿತ ಚಿಕೂನ್‌ಗುನ್ಯಾ ಪ್ರಕರಣಗಳು ಪತ್ತೆಯಾಗಿವೆ.

ಮೈಸೂರು 402, ದಾವಣಗೆರೆ 361, ಶಿವಮೊಗ್ಗ 295, ಹಾಸನ 265, ಉಡುಪಿ 232, ಚಿತ್ರದುರ್ಗ 204, ಚಾಮರಾಜನಗರ 182, ಚಿಕ್ಕಮಗಳೂರು 166, ಕೊಡಗು 155, ಕೋಲಾರ 150, ಬೆಂಗಳೂರು ನಗರ 120 ಡೆಂಘಿ ಪ್ರಕರಣಗಳು ದೃಢಪಟ್ಟಿವೆ. ಮಂಡ್ಯದಲ್ಲಿ 284, ಚಾ.ನಗರ 162, ತುಮಕೂರು 127, ತುಮಕೂರಿನಲ್ಲಿ 105 ಚಿಕೂನ್‌
ಗುನ್ಯಾ ಪ್ರಕರಣಗಳು ದೃಢಪಟ್ಟಿವೆ.

ಟಾಪ್ ನ್ಯೂಸ್

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಚನ್ನಮ್ಮನ ಕಿತ್ತೂರು: ಮಹಾನ್‌ ಯೋಗಿಗಳು-ಸೂಫಿ ಸಂತರ ನಾಡಿದು- ಶಿಲೇದಾರ

ಚನ್ನಮ್ಮನ ಕಿತ್ತೂರು: ಮಹಾನ್‌ ಯೋಗಿಗಳು-ಸೂಫಿ ಸಂತರ ನಾಡಿದು- ಶಿಲೇದಾರ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.