ACB ಭರ್ಜರಿ ದಾಳಿ;ಕೆಐಎಡಿಬಿ ಅಧಿಕಾರಿ ಟಾರ್ಗೆಟ್;ಕೋಟ್ಯಂತರ ಹಣ ಜಪ್ತಿ
Team Udayavani, Oct 5, 2018, 12:17 PM IST
ಬೆಂಗಳೂರು: ಎಸಿಬಿ ಅಧಿಕಾರಿಗಳು ಭ್ರಷ್ಟರ ಬೇಟೆ ಮುಂದುವರಿಸಿದ್ದು ಶುಕ್ರವಾರ ಬೆಳಗ್ಗೆ ಬೆಂಗಳೂರಿನ ಇಬ್ಬರು ಅಧಿಕಾರಿಗಳ ನಿವಾಸಗಳ ಮೇಲೆ ದಾಳಿ ನಡೆಸಿ ಶಾಕ್ ನೀಡಿದ್ದಾರೆ, ಮಾತ್ರವಲ್ಲದೆ ಅಪಾರ ಪ್ರಮಾಣದ ಹಣ ಮತ್ತು ದಾಖಲೆಗಳನ್ನು ವಶಕ್ಕೆ ಪಡಿಸಿಕೊಂಡಿದ್ದಾರೆ.
ಮಲ್ಲೇಶ್ವರಂನಲ್ಲಿರುವ ಬಹಮಹಡಿ ಅಪಾರ್ಟ್ಮೆಂಟ್ನಲ್ಲಿರುವ ಕೆಐಎಡಿಬಿ ಮುಖ್ಯ ಇಂಜಿನಿಯರ್ ಟಿ.ಆರ್.ಸ್ವಾಮಿ ಅವರನ್ನು ಗುರಿಯಾಗಿರಿಸಿ ದಾಳಿ ನಡೆಸಲಾಗಿದೆ.
ಅಧಿಕಾರಿಗಳು ಟಿ.ಆರ್.ಸ್ವಾಮಿ ಅವರ 14 ನೇ ಮಹಡಿಯಲ್ಲಿರುವ ನಿವಾಸಕ್ಕೆ ಬಾಗಿಲು ಒಡೆದು ಪ್ರವೇಶ ಮಾಡಿದ್ದಾರೆ ಎನ್ನಲಾಗಿದೆ. ಅಧಿಕಾರಿಗಳು ಹಣ ಎಣಿಸುವ ಯಂತ್ರವನ್ನು ಒಯ್ದಿರುವುದು ಕ್ಯಾಮರಾದಲ್ಲಿ ಸೆರೆಯಾಗಿದೆ.
5 ಕೋಟಿಗೂ ಹೆಚ್ಚು ಹಣ ಪತ್ತೆಯಾಗಿದೆ ಎನ್ನಲಾಗಿದ್ದು, 2 ಕಾರುಗಳಲ್ಲಿ ಅಪಾರ ದಾಖಲೆಗಳು ಸಿಕ್ಕಿರುವ ಬಗ್ಗೆ ತಿಳಿದು ಬಂದಿದೆ.
ಬಿಡಿಎ ಅಧಿಕಾರಿಯ ಮೇಲೂ ದಾಳಿ
ಬಸವೇಶ್ವರ ನಗರದಲ್ಲಿರುವ ಬಿಡಿಎ ಮುಖ್ಯ ಇಂಜಿನಿಯರ್ ಗೌಡಯ್ಯ ನಿವಾಸದ ಮೇಲೂ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಈ ವೇಳೆ ಹಣದ ಚೀಲವನ್ನು ಮನೆಯಿಂದ ಎಸೆದಿದ್ದಾರೆ ಎನ್ನಾಲಾಗಿದೆ.
ಅಧಿಕಾರಿಗಳು ವಿವಿಧ ಪ್ರದೇಶಗಳಲ್ಲೂ ದಾಖಲೆಗಳ ಪರಿಶೀಲನೆ ಮುಂದುವರಿಸಿದ್ದಾರೆ.
ಹೆಚ್ಚಿನ ವಿವರ ನಿರೀಕ್ಷಿಸಲಾಗುತ್ತಿದೆ.