ಐಡಿ ಇಲ್ಲದೆ ಮತ ಎಣಿಕೆ ಕೇಂದ್ರಕ್ಕೆ ಪ್ರವೇಶ: ನಿರಾಣಿ ಆಪ್ತರಿಗೆ ತರಾಟೆ
Team Udayavani, Jun 15, 2022, 12:12 PM IST
ಬೆಳಗಾವಿ: ವಾಯುವ್ಯ ಪದವೀಧರ ಮತ್ತು ಶಿಕ್ಷಕರ ಕ್ಷೇತ್ರದ ಚುನಾವಣೆಯ ಮತ ಎಣಿಕೆ ಆರಂಭವಾಗಿದ್ದು, ಈ ವೇಳೆ ಗುರುತಿನ ಕಾರ್ಡ್ ಇಲ್ಲದೇ ಮತ ಎಣಿಕಾ ಕೇಂದ್ರಕ್ಕೆ ಬಿಜೆಪಿ ಅಭ್ಯರ್ಥಿ ಹಣಮಂತ ನಿರಾಣಿ ಅವರ ಆಪ್ತ ಸಹಾಯಕರು ಪ್ರವೇಶಿಸಿದ್ದು, ಅವರನ್ನು ಜಿಲ್ಲಾಧಿಕಾರಿ ನಿತೇಶ ಪಾಟೀಲ್ ತೀವ್ರ ತರಾಟೆಗೆ ತೆಗೆದುಕೊಂಡ ಪ್ರಸಂಗ ನಡೆದಿದೆ.
ಬೆಳಗಾವಿಯ ಕ್ಲಬ್ ರಸ್ತೆಯ ಜ್ಯೋತಿ ಕಾಲೇಜಿನ ಮತ ಎಣಿಕಾ ಕೇಂದ್ರಕ್ಕೆ ಐಡಿ ಕಾರ್ಡ್ ಇಲ್ಲದೇ ಹಣಮಂತ ನಿರಾಣಿ ಪಿಎ ಸುರೇಶ್ ಬಂದಿದ್ದರು. ಐಡಿ ಕಾರ್ಡ್ ಇಲ್ಲದೇ ಮತ ಎಣಿಕೆ ಕೇಂದ್ರ ಪ್ರವೇಶಿಸಿದ್ದಕ್ಕೆ ಜೆಡಿಎಸ್ ಏಜೆಂಟರು ಆಕ್ರೋಶ ವ್ಯಕ್ತಪಡಿಸಿದರು.
ಇದನ್ನೂ ಓದಿ:4 ಸ್ಥಾನದ ಮೇಲ್ಮನೆ ಚುನಾವಣೆ; ಬಿರುಸಿನ ಮತ ಎಣಿಕೆ, ಬಿಜೆಪಿಗೆ ಬಹುಮತದ ನಿರೀಕ್ಷೆ…
ವಿಷಯ ತಿಳಿಯುತ್ತಿದ್ದಂತೆ ನಿರಾಣಿ ಅವರ ಪಿಎಗೆ, ಜಿಲ್ಲಾಧಿಕಾರಿ ನಿತೇಶ ಪಾಟೀಲ್ ಹಿಗ್ಗಾಮುಗ್ಗಾ ತರಾಟೆ ತೆಗೆದುಕೊಂಡರಲ್ಲದೆ, ಪೊಲೀಸರಿಗೆ ಆತನನ್ನು ಹೊರಗೆ ಹಾಕುವಂತೆ ಸೂಚನೆ ನೀಡಿದರು. ನಂತರ ಚುನಾವಣಾಧಿಕಾರಿ ಆದಿತ್ಯ ಅಮ್ಲಾನ್ ಬಿಸ್ವಾಸ್ ಅವರು ಐಡಿ ಕಾರ್ಡ್ ತಪಾಸಣೆ ಮಾಡದೇ ಏಕೆ ಒಳಗೆ ಬಿಡಲಾಗುತ್ತಿದೆ ಎಂದು ಪೊಲೀಸರಿಗೆ ಚುನಾವಣಾ ಸಿಬ್ಬಂದಿಯನ್ನು ತರಾಟೆಗೆ ತೆಗೆದುಕೊಂಡರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್
ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ
MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ
HD Revanna, ಪ್ರಜ್ವಲ್ ಮೇಲೆ ಲೈಂಗಿಕ ದೌರ್ಜನ್ಯ ಕೇಸ್!
CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್; ಮರು ಪರೀಕ್ಷೆ ನಡೆಸದಿರಲು ನಿರ್ಧಾರ