ಶಿರಾಡಿ ಘಾಟ್ಬಳಿ ಅಪಘಾತ: ನಾಲ್ವರ ಸಾವು
Team Udayavani, Mar 11, 2019, 1:17 AM IST
ಸಕಲೇಶಪುರ: ಕಾರು ಹಾಗೂ ಕೆಎಸ್ಆರ್ಟಿಸಿ ಬಸ್ ನಡುವೆ ಪರಸ್ಪರ ಡಿಕ್ಕಿ ಸಂಭವಿಸಿ ನಾಲ್ವರು ಮೃತಪಟ್ಟು, ಇಬ್ಬರು ಗಂಭೀರ ಗಾಯಗೊಂಡಿರುವ ಘಟನೆ ತಾಲೂಕಿನ ಮಾರನಹಳ್ಳಿ ಸಮೀಪದಶಿರಾಡಿ ಘಾಟ್ನಲ್ಲಿ ನಡೆದಿದೆ.
ರಾಷ್ಟ್ರೀಯ ಹೆದ್ದಾರಿ 75 ಮಾರನಹಳ್ಳಿ ಸಮೀಪದ ಜೋಡಿ ತಿರುವಿನ ಬಳಿ ಭಾನುವಾರ ಮುಂಜಾನೆ ಧರ್ಮಸ್ಥಳದಿಂದ ಬೆಂಗಳೂರು ಕಡೆಗೆ ಹೋಗುತ್ತಿದ್ದ ಕೆಎಸ್ಆರ್ಟಿಸಿ ಬಸ್ ಹಾಗೂ ಧರ್ಮಸ್ಥಳದ ಕಡೆಗೆ ಹೋಗುತ್ತಿದ್ದ ಸ್ವಿಪ್ಟ್ ಡಿಜೈರ್ ಕಾರಿನ ನಡುವೆ ಡಿಕ್ಕಿಯಾಗಿದೆ. ಕಾರಿನಲ್ಲಿದ್ದ ಬೆಂಗಳೂರಿನ ರಾಜಾನಕುಂಟೆ ನಿವಾಸಿಗಳಾದ ಕಾರು ಚಾಲಕ ಜಗದೀಶ್ (30) ಗೌರಮ್ಮ (45) ಚನ್ನಯ್ಯ (50), ಭುವನೇಶ್ (6) ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಬೆಂಗಳೂರಿನ ಯಶವಂತಪುರ ನಿವಾಸಿಗಳಾದ ಭವ್ಯಾ, ನಾಗರತ್ನ ಗಂಭೀರ ಗಾಯಗೊಂಡಿದ್ದು ಹಾಸನದ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಮೃತರು ಮೂಲತಃ ಮಂಡ್ಯ ಜಿಲ್ಲೆ ಮಳವಳ್ಳಿ ತಾಲೂಕಿನವರಾಗಿದ್ದು ಬೆಂಗಳೂರಿನಲ್ಲಿ ವಾಸವಾಗಿದ್ದರು. ಸಕಲೇಶಪುರ ಗ್ರಾಮಾಂತರ ಠಾಣೆಯಲ್ಲಿ ದೂರು ದಾಖಲಾಗಿದೆ.