ಅಪಘಾತ:ಗಾಯಗೊಂಡಿದ್ದ ಜಿಂಕೆಯ ನೆರವಿಗೆ ಧಾವಿಸಿದ ಸಚಿವ ಸಾ.ರಾ.ಮಹೇಶ್
Team Udayavani, Aug 3, 2018, 4:25 PM IST
ಮಡಿಕೇರಿ : ವಾಹನವೊಂದು ಢಿಕ್ಕಿಯಾದ ಪರಿಣಾಮ ಕಾಲಿಗೆ ಗಂಭೀರವಾಗಿ ಗಾಯಗೊಂಡು ತೀವ್ರ ರಕ್ತಸ್ರಾವದಿಂದ ಬಳಲುತ್ತಿದ್ದ ಜಿಂಕೆಯ ನೆರವಿಗೆ ಸಚಿವ ಸಾ.ರಾ.ಮಹೇಶ್ ಅವರು ಆಗಮಿಸಿದ್ದು ಸಾರ್ವಜನಿಕರ ಪ್ರಶಂಸೆಗೆ ಪಾತ್ರವಾಯಿತು.
ಶುಕ್ರವಾರ ಘಟನೆ ನಡೆದಿದ್ದು ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾಗಿರುವ ಮಹೇಶ್ ಅವರು ತೆರಳುತ್ತಿದ್ದ ಮಾರ್ಗದಲ್ಲಿ ಅಪಘಾತವಾಗಿ ಜಿಂಕೆ ಬಿದ್ದಿತ್ತು. ಬಳಲಿದ್ದ ಜಿಂಕೆಗೆ ಸಚಿವರು ನೀರನ್ನೂ ಕುಡಿಸಿದರು.
ಪಶುವೈದ್ಯರನ್ನು ಕರೆಸಿ ಚಿಕಿತ್ಸೆ ನೀಡಿ ರಕ್ಷಣೆ ನೀಡುವಂತೆ ಸೂಚಿಸಿದರು. ಈ ವೇಳೆ ಜಿಲ್ಲಾಧಿಕಾರಿ ಶ್ರೀ ವಿದ್ಯಾ ಅವರು ಸ್ಥಳದಲ್ಲಿದ್ದರು.
ಅರಣ್ಯ ಇಲಾಖೆಯ ಸಿಬಂದಿಗಳು ಜಿಂಕೆಯನ್ನು ಆರೈಕೆ ಮಾಡುತ್ತಿದ್ದಾರೆ.
ನಾಯಿ ಅಟ್ಟಿಸಿಕೊಂಡು ಬಂದಾಗ ಪ್ರಾಣಾಪಾಯದಿಂದ ರಸ್ತೆ ಮದ್ಯೆಯೇ ಓಡಿ ಬಂದ ಜಿಂಕೆಗೆ ತಮಿಳುನಾಡು ನೊಂದಣಿಯ ವಾಹನವೊಂದು ಢಿಕ್ಕಿಯಾಗಿತ್ತು ಎಂದು ಸ್ಥಳದಲ್ಲಿದ್ದವರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…
Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ
Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್ಸಿ ಮೀಸಲಾತಿ ಹೇಳಿಕೆಗೆ ವಿರೋಧ
Lok Sabha Election; ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ