ಆರೋಪ ಮಾಡಿದರೆ ಸಾಲದು, ಸೂಕ್ತ ದಾಖಲೆಗಳಿದ್ದರೆ ಕೊಡಲಿ: ಸಚಿವ ಕಾರಜೋಳ
ಜಲಸಂಪನ್ಮೂಲ ಇಲಾಖೆಗೆ 600 ಕೋಟಿಗೂ ಅಧಿಕ ನಷ್ಟ
Team Udayavani, Aug 22, 2022, 1:40 PM IST
ಮೈಸೂರು : 40% ಕಮಿಷನ್ ಕುರಿತು ಬರೀ ಆರೋಪ ಮಾಡಿದರೆ ಸಾಲದು.ಸೂಕ್ತ ದಾಖಲೆಗಳಿದ್ದರೆ ಕೊಡಲಿ, ಕ್ರಮ ಕೈಗೊಳ್ಳುತ್ತೇವೆ ಎಂದು ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಸೋಮವಾರ ಹೇಳಿಕೆ ನೀಡಿದ್ದಾರೆ.
ರಾಜ್ಯ ಸರ್ಕಾರದ ವಿರುದ್ಧ 40% ಕಮಿಷನ್ ಆರೋಪ ವಿಚಾರಕ್ಕೆ ಸಂಬಂಧಿಸಿ ಸುದ್ದಿಗಾರರೊಂದಿಗೆ ಮಾತನಾಡಿ, ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ಜೊತೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಮಾತುಕತೆ ನಡೆಸಿರುವ ಹಿನ್ನೆಲೆಯಲ್ಲಿ, ಬರೀ ಆರೋಪ ಮಾಡಿ ಹಿಟ್ ಅಂಡ್ ರನ್ ಕೆಲಸ ಮಾಡಬಾರದು.ಸೂಕ್ತ ದಾಖಲೆಗಳನ್ನೂ ಕೊಡಬೇಕು ಎಂದರು.
ಮೇಕೆದಾಟು ಯೋಜನೆ ಅನುಷ್ಠಾನ ವಿಚಾರ ನ್ಯಾಯಾಲಯದ ಸುಪರ್ದಿಯಲ್ಲಿದೆ.ನ್ಯಾಯಾಲಯ ನೀಡುವ ಆದೇಶ ನೋಡಿಕೊಂಡು ಮುಂದುವರಿಯಲಾಗುವುದು ಎಂದರು.
ರಾಜ್ಯದಲ್ಲಿ ಇತ್ತೀಚೆಗೆ ಸುರಿದಿರುವ ಅತಿವೃಷ್ಠಿಯಿಂದಾಗಿ ಜಲಸಂಪನ್ಮೂಲ ಇಲಾಖೆಗೆ 600 ಕೋಟಿಗೂ ಅಧಿಕ ನಷ್ಟವಾಗಿದೆ. ರಾಜ್ಯದ ಹಲವೆಡೆ ಕೆರೆಕೆಟ್ಟೆಗಳು ಒಡೆದಿವೆ.ನಾಲೆಗಳು, ಸೇತುವೆಗಳು ಹಾನಿಗೀಡಾಗಿವೆ.ಮೈಸೂರು ಜಿಲ್ಲೆಯಲ್ಲೂ 10.40 ಕೋಟಿ ನಷ್ಟ ಸಂಭವಿಸಿದೆ. ಹಾನಿಗೀಡಾಗಿರುವ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ಮಾಡಲಾಗುತ್ತಿದೆ. ಈಗಾಗಲೇ ಕೊಡಗು, ಮಂಡ್ಯ ಸೇರಿದಂತೆ ಹಲವು ಜಿಲ್ಲೆಗಳಿಗೆ ತೆರಳಿ ನಷ್ಟದ ಅಂದಾಜು ಮಾಡಲಾಗಿದೆ. ಆಯಾ ಜಿಲ್ಲೆಗಳ ಅಧಿಕಾರಿಗಳು ನಷ್ಟದ ಅಂದಾಜು ವರದಿ ನೀಡಿದರೆ ತಕ್ಷಣ ಪರಿಹಾರ ನೀಡಲು ಕ್ರಮ ಕೈಗೊಳ್ಳಲಾಗಿದೆ. ಹಾನಿಗೀಡಾಗಿರುವ ಸ್ಥಳಗಳ ದುರಸ್ತಿಗೆ ಮೊದಲ ಆದ್ಯತೆ ನೀಡಲಾಗಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಸಂಸದ ಶ್ರೀನಿವಾಸ್ ಪ್ರಸಾದ್ ಆರೋಗ್ಯ ಗಂಭೀರ; ಆಸ್ಪತ್ರೆಗೆ ದಾಖಲು
Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ
Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್
Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ
Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ
MUST WATCH
ಹೊಸ ಸೇರ್ಪಡೆ
Kerala ವಯನಾಡಲ್ಲಿ ರಾಹುಲ್ ಅಡಗಿ ಕುಳಿತಿದ್ದಾರೆ: ಬಿ.ವೈ. ವಿಜಯೇಂದ್ರ
ಸಂಸದ ಶ್ರೀನಿವಾಸ್ ಪ್ರಸಾದ್ ಆರೋಗ್ಯ ಗಂಭೀರ; ಆಸ್ಪತ್ರೆಗೆ ದಾಖಲು
Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ
Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು
Yellapur; ಬೊಲೆರೋ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ, ಹಿಂಬದಿ ಸವಾರ ಗಂಭೀರ