ಆ್ಯಸಿಡ್ ದಾಳಿಕೋರ ನಾಗೇಶ್ ಕೊನೆಗೂ ಅರೆಸ್ಟ್: ಸ್ವಾಮೀಜಿಯಂತೆ ವೇಷ ಧರಿಸಿದ್ದ!
Team Udayavani, May 13, 2022, 5:39 PM IST
ಬೆಂಗಳೂರು: ಯುವತಿ ಮೇಲೆ ಆ್ಯಸಿಡ್ ದಾಳಿ ನಡೆಸಿ ತಲೆಮರೆಸಿಕೊಂಡಿದ್ದ ಆರೋಪಿ ನಾಗೇಶ್ ನನ್ನ ಪತ್ತೆ ಹಚ್ಚುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.
ಹುಡುಕಾಟ ನಡೆಸುತ್ತಿದ್ದ ವೇಳೆ ತಮಿಳುನಾಡಿನ ತಿರುವಣ್ಣಾಮಲೈ ನಲ್ಲಿ ಸ್ವಾಮೀಜಿಯಂತೆ ವೇಷ ಧರಿಸಿ ತಲೆ ಮರೆಸಿಕೊಂಡಿದ್ದ 27 ವರ್ಷದ ನಾಗೇಶನನ್ನು ಪೊಲೀಸರು ಬಂಧಿಸಿದ್ದಾರೆ.
ಏಪ್ರಿಲ್ 28 ರಂದು ದಾಳಿ ನಡೆಸಿ ಪರಾರಿಯಾಗಿದ್ದ. ಆ್ಯಸಿಡ್ ದಾಳಿ ನಡೆದು 16 ದಿನ ಕಳೆದರೂ ಆರೋಪಿ ನಾಗೇಶ್ ಸುಳಿವು ಸಿಗದೆ ಪೊಲೀಸರಿಗೆ ತಲೆನೋವಾಗಿ ಪರಿಣಮಿಸಿತ್ತು. ಕಾಮಾಕ್ಷಿಪಾಳ್ಯ ಪೊಲೀಸರ ತಂಡ ಕಾರ್ಯಾಚರಣೆ ನಡೆಸಿ ನಾಗೇಶನನ್ನು ಬಂಧಿಸಿದೆ ಎಂದು ವರದಿಗಳು ಲಭ್ಯವಾಗಿವೆ.
ನಾಗೇಶ್ ಓಡಾಡಿದ ಜಾಗದಲ್ಲಿ ವಾಂಟೆಡ್ ಲಿಸ್ಟ್ ಫೋಟೋ ಹಾಕಲಾಗಿತ್ತು. ಜತೆಗೆ ಎಲ್ಲೆಡೆ ಕರಪತ್ರಗಳನ್ನು ಹಚ್ಚಲಾಗಿತ್ತು.
ಇದನ್ನೂ ಓದಿ : ಮುಸ್ಕಾನ್ ಕುಟುಂಬ ಸೌದಿಗೆ : ತನಿಖೆ ನಡೆಸುವಂತೆ ಗೃಹ ಸಚಿವರಿಗೆ ದೂರು
ಪ್ರೀತಿ ನಿರಾಕರಿಸಿದ ಹೆಗ್ಗನಹಳ್ಳಿ ಕ್ರಾಸ್ ನಿವಾಸಿ 25 ವರ್ಷದ ಯುವತಿ ಮೇಲೆ ಹಾಡಹಗಲೇ ಆ್ಯಸಿಡ್ ದಾಳಿ ನಡೆಸಲಾಗಿತ್ತು. ಯುವತಿ ಸೆಂಟ್ ಜಾನ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಸರ್ಜಾಪುರ ಮೂಲದ ನಾಗೇಶ್, ಪ್ರೀತಿ ಸುವಂತೆ ಸುಮಾರು 7 ವರ್ಷಗಳಿಂದ ದುಂಬಾಲು ಬಿದ್ದಿದ್ದ. ಆಕೆ ನಿರಾಕರಿಸಿದ್ದರಿಂದ ಕುಪಿತನಾಗಿ ದಾಳಿ ನಡೆಸಿದ್ದ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ
Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್ಪಿ
Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ
Srirangapatna: ಐಸ್ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ
Ls Polls: ಕಾಂಗ್ರೆಸ್ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್
MUST WATCH
ಹೊಸ ಸೇರ್ಪಡೆ
Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ
Hubli; ಕಾನೂನು ವ್ಯವಸ್ಥೆ ಹೀಗೆ ಮುಂದುವರಿದರೆ ರಾಜ್ಯ ಬಿಹಾರವಾಗುತ್ತದೆ: ಬಸವರಾಜ ಬೊಮ್ಮಾಯಿ
O2: ತೆರೆಗೆ ಬಂತು ಓ2; ಚಿತ್ರದ ಮೇಲೆ ಆಶಿಕಾ ನಿರೀಕ್ಷೆ
Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ
Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ