ಹಂಗಾಮಿ ಸ್ಪೀಕರ್ ಶಾಮನೂರು ಇಲ್ಲವೇ ದೇಶಪಾಂಡೆ
Team Udayavani, May 16, 2023, 7:05 AM IST
ಬೆಂಗಳೂರು: ನೂತನ ಶಾಸಕರ ಪ್ರಮಾಣ ವಚನ ಸ್ವೀಕಾರ ಹಿನ್ನೆಲೆಯಲ್ಲಿ ಸದನದ ಅತ್ಯಂತ ಹಿರಿಯ ಶಾಸಕರಾದ ಶಾಮನೂರು ಶಿವಶಂಕರಪ್ಪ ಅಥವಾ ಆರ್.ವಿ.ದೇಶಪಾಂಡೆ ಅವರನ್ನು ಹಂಗಾಮಿ ಸ್ಪೀಕರ್ ಆಗಿ ನೇಮಕ ಮಾಡುವ ಸಾಧ್ಯತೆ ಇದೆ.
ಮುಖ್ಯಮಂತ್ರಿ ಆಯ್ಕೆ ವಿಚಾರ ಇತ್ಯರ್ಥವಾಗುತ್ತಿದ್ದಂತೆ ನೂತನ ಶಾಸಕರ ಪ್ರಮಾಣ ವಚನ ಕಾರ್ಯಕ್ರಮ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಹಂಗಾಮಿ ಸ್ಪೀಕರ್ ನೇಮಕ ಮಾಡುವುದು ಸದನದ ವಾಡಿಕೆ. ಸಾಮಾನ್ಯವಾಗಿ ಸದನದ ಅತಿ ಹಿರಿಯ ಶಾಸಕರನ್ನು ಈ ಹುದ್ದೆಗೆ ನೇಮಕ ಮಾಡಲಾಗುತ್ತದೆ.
ಇದಾದ ಬಳಿಕ ಅಧಿಕೃತವಾಗಿ ಸ್ಪೀಕರ್ ಆಯ್ಕೆ ಪ್ರಕ್ರಿಯೆ ನಡೆಯಲಿದೆ. ಸಾಮಾನ್ಯವಾಗಿ ಈ ಹುದ್ದೆಗೆ ಪಕ್ಷದ ಹಿರಿಯರು, ಸಂಸದೀಯ ನಡಾವಳಿಯಲ್ಲಿ ಹಿಡಿತ ಹೊಂದಿರುವವರು, ಕಾನೂನು ಹಾಗೂ ಸಂಸದೀಯ ಸಚಿವರಾಗಿ ಕೆಲಸ ಮಾಡಿದವರು, ಸದನದ ಮೇಲೆ ಒಟ್ಟಾರೆಯಾಗಿ ಹಿಡಿತ ಸಾಧಿಸಬಲ್ಲವರನ್ನು ನೇಮಿಸಲಾಗುತ್ತದೆ.
ಹೀಗಾಗಿ ಮಾಜಿ ಸಚಿವರಾದ ಎಚ್.ಕೆ.ಪಾಟೀಲ್ ಅಥವಾ ಟಿ.ಬಿ.ಜಯಚಂದ್ರ ನೇಮಕ ಸಾಧ್ಯತೆ ಇದೆ.
ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾದರೆ ಕೃಷ್ಣ ಭೈರೇಗೌಡ ಅವರನ್ನು ಸ್ಪೀಕರ್ ಮಾಡುವ ಸಾಧ್ಯತೆಗಳು ದಟ್ಟವಾಗಿದೆ ಎಂದು ಹೇಳಲಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Road Mishap: ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಸ್ಥಳದಲ್ಲೇ ಮೃತ್ಯು
Notice: ವಿವಾದಾತ್ಮಕ ಹೇಳಿಕೆ… ಕಾಗವಾಡ ಶಾಸಕ ರಾಜು ಕಾಗೆ ಗೆ ನೋಟಿಸ್ ಜಾರಿ
Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ
Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್ ಹೇಳಿಕೆ
ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…
MUST WATCH
ಹೊಸ ಸೇರ್ಪಡೆ
ಬಿಜೆಪಿಗೆ ಆಶೀರ್ವಾದ ಮಾಡಲು ವಚನಾನಂದ ಶ್ರೀ ಕಾತರ: ಯತ್ನಾಳ್
Road Mishap: ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಸ್ಥಳದಲ್ಲೇ ಮೃತ್ಯು
WhatsApp ಚಾಟ್ ನಿಯಮ ಉಲ್ಲಂಘನೆ: ಬಳಕೆದಾರರಿಗೆ ತಾತ್ಕಾಲಿಕ ನಿರ್ಬಂಧ
LPG Cylinder: ವಾಣಿಜ್ಯ ಎಲ್ಪಿಜಿ ಸಿಲಿಂಡರ್ 19 ರೂ. ಇಳಿಕೆ; ಬೆಂಗಳೂರಿನಲ್ಲಿ 1825 ರೂ.
Notice: ವಿವಾದಾತ್ಮಕ ಹೇಳಿಕೆ… ಕಾಗವಾಡ ಶಾಸಕ ರಾಜು ಕಾಗೆ ಗೆ ನೋಟಿಸ್ ಜಾರಿ