Prajwal Revanna ಗೆದ್ದರೆ ಎನ್ಡಿಎಯಿಂದ ಕ್ರಮ: ಆರ್. ಅಶೋಕ್
ಈಗ ಅತ್ಯಾಚಾರಿ ಎಂದು ಹೇಳುತ್ತಿರುವ ಸಿದ್ದರಾಮಯ್ಯ ಹಿಂದೆ ಹೊಗಳಿದ್ದರು
Team Udayavani, May 5, 2024, 11:55 PM IST
ಬೆಂಗಳೂರು: ಪ್ರಜ್ವಲ್ ರೇವಣ್ಣನನ್ನು ಈಗ ಅತ್ಯಾಚಾರಿ ಎಂದು ಕರೆಯುವ ಸಿಎಂ ಸಿದ್ದರಾಮಯ್ಯ, ಈ ಹಿಂದೆ ಟ್ವೀಟ್ ಮಾಡಿ “ಯಂಗ್ ಲೀಡರ್ ವಿತ್ ಗ್ರೇಟ್ ವಿಶನ್’ ಎಂದು ಬಣ್ಣಿಸಿ ಗೆಲ್ಲಿಸುವಂತೆ ಮನವಿ ಮಾಡಿರಲಿಲ್ಲವೇ ಎಂದು ವಿಧಾನಸಭೆ ವಿಪಕ್ಷ ನಾಯಕ ಆರ್.ಅಶೋಕ ಪ್ರಶ್ನಿಸಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರ ಜತೆಗೆ ಮಾತನಾ ಡಿದ ಅವರು, ಪ್ರಜ್ವಲ್ ಇನ್ನೂ ಕಾಂಗ್ರೆಸ್- ಜೆಡಿಎಸ್ ಮೈತ್ರಿ ಸಂಸದರಾಗಿಯೇ ಇದ್ದಾರೆ. ಅವರು ಈ ಬಾರಿ ಗೆದ್ದು ಎನ್ಡಿಎ ಸಂಸದರಾದರೆ ಅವರ ವಿರುದ್ಧ ಪಕ್ಷದ ವತಿಯಿಂದ ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದರು.
ಪ್ರಜ್ವಲ್ ನಡೆಸಿದ ಮಹಿಳಾ ದೌರ್ಜನ್ಯದ ಘಟನೆಗಳು ಯಾವ ಸಮಯದಲ್ಲಿ ನಡೆದಿದೆ ಎಂಬುದು ಇನ್ನೂ ತನಿಖಾ ತಂಡ ವರದಿ ನೀಡಬೇಕಿದೆ. ನಮ್ಮ ಹೊಂದಾಣಿಕೆಯಲ್ಲಿ ಇನ್ನೂ ಪ್ರಜ್ವಲ್ ಗೆದ್ದಿಲ್ಲ. ಗೆದ್ದರೆ ಅವರ ವಿರುದ್ಧ ಕಠಿನ ಕ್ರಮ ಕೈಗೊಳ್ಳುತ್ತೇವೆ ಎಂದು ತಿಳಿಸಿದರು.
2019ರ ಎ. 17ರಂದು ಕಡೂರಿನಲ್ಲಿ ಲೋಕ ಸಭಾ ಚುನಾವಣ ಪ್ರಚಾರದಲ್ಲಿ ಸಿದ್ದರಾಮಯ್ಯನವರು ಪ್ರಜ್ವಲ್ ಅವರನ್ನು ಮೈತ್ರಿ ಬಲಪಡಿಸಿ ಎಂದು ಕೋರಿದ್ದರು. ಸಚಿವ ಎಂ.ಬಿ.ಪಾಟೀಲ್ ಪಾತಾಳಕ್ಕೆ ಹೋಗುವುದು ಬೇಡ, ಭೂಮಿಯಲ್ಲಿದ್ದಾಗಲೇ ಪ್ರಜ್ವಲ್ನನ್ನು ಬಂಧಿಸಬಹುದಿತ್ತು. ಯಾವುದೇ ಕೇಂದ್ರ ಸರಕಾರ ಸಂಸದರಿಗೆ ಸಹಜವಾಗಿಯೇ ರಾಜತಾಂತ್ರಿಕ ಪಾಸ್ಪೋರ್ಟ್ ನೀಡುತ್ತದೆ. ಅದನ್ನು ಪ್ರಧಾನಿ ನರೇಂದ್ರ ಮೋದಿ ಮಾತ್ರ ನೀಡಿದ್ದಲ್ಲ ಎಂದು ಹೇಳಿದರು.
ರೇವಣ್ಣ ಬಂಧನ ಸರಿಯಾಗಿದೆ
ಕರ್ನಾಟಕದ ಗುಪ್ತಚರ ಇಲಾಖೆ ಸರಿಯಾಗಿ ಇದ್ದಿದ್ದರೆ, ಪ್ರಜ್ವಲ್ ತಪ್ಪಿಸಿಕೊಂಡು ಹೋಗುತ್ತಿರಲಿಲ್ಲ. ದೇಶ ಬಿಡಲು ಅವಕಾಶ ನೀಡಬಾರದು ಎಂದು ವಿಮಾನ ನಿಲ್ದಾಣಕ್ಕೆ ಪ್ರಾಧಿಕಾರಕ್ಕೆ ತಿಳಿಸಬಹುದಿತ್ತು. ಶಾಸಕ ರೇವಣ್ಣ ಅವರ ಬಂಧನ ಸರಿಯಾಗಿಯೇ ಇದ್ದು ಅವರ ವಿರುದ್ಧ ಕಠಿನ ಕ್ರಮ ಕೈಗೊಳ್ಳಬೇಕು. ಈಗಾಗಲೇ ಎಚ್.ಡಿ.ಕುಮಾರಸ್ವಾಮಿ ಈ ಬಗ್ಗೆ ಸ್ಪಷ್ಟನೆ ನೀಡಿದ್ದು, ಬಿಜೆಪಿಗೂ ಇದಕ್ಕೂ ಸಂಬಂಧವಿಲ್ಲ ಎಂದು ತಿಳಿಸಿದ್ದಾರೆ ಎಂದು ಅಶೋಕ್ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ
ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು
ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ
ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್ಪಟೇಲ್ ಹೇಳಿಕೆ
ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ
ಹೊಸ ಸೇರ್ಪಡೆ
Gundmi Toll Plaza ಸ್ಥಳೀಯರಿಗೆ ಟೋಲ್ ಬರೆ; ಟೋಲ್ಗೆ ಮುತ್ತಿಗೆ; ರಸ್ತೆ ತಡೆ ಪ್ರತಿಭಟನೆ
Election data ಏರಿಕೆ ಬಗ್ಗೆ ಪ್ರತಿಕ್ರಿಯಿಸಿ: ಇಸಿಗೆ ಸುಪ್ರೀಂ
D.K. ಜಿಲ್ಲೆಯಲ್ಲಿ ಗುಡುಗು ಸಹಿತ ಉತ್ತಮ ಮಳೆ; ಇನ್ನೂ ನಾಲ್ಕು ದಿನ “ಎಲ್ಲೋ ಅಲರ್ಟ್’
Malpe ದೋಣಿಗಳು ಢಿಕ್ಕಿಯಾಗಿ ಮುಳುಗಡೆ; ಐವರು ಮೀನುಗಾರರ ರಕ್ಷಣೆ
Chhattisgarh; ನಿಲ್ಲದ ನಕ್ಸಲ್ ಬೇಟೆ: ಓರ್ವನ ಹತ್ಯೆ