ಒಂದೂವರೆ ತಿಂಗಳಲ್ಲಿ ಅಧಿಸೂಚನೆಗೆ ಕ್ರಮ
Team Udayavani, Oct 20, 2019, 3:03 AM IST
ಹುಬ್ಬಳ್ಳಿ: ಮಹದಾಯಿ ಸಮಸ್ಯೆ ಬಗೆಹರಿಸಲು ಗಂಭೀರ ಪ್ರಯತ್ನಗಳು ನಡೆದಿವೆ. ಇನ್ನು ಒಂದೂವರೆ ತಿಂಗಳಲ್ಲಿ ಮಹದಾಯಿ ಕುರಿತ ಅಧಿಸೂಚನೆ ಹೊರಡಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಹದಾಯಿ ವಿಷಯವಾಗಿ ಗೆಜೆಟ್ ನೋಟಿಫಿಕೇಶನ್ ಆಗಬೇಕೆಂಬ ಅಭಿಪ್ರಾಯವಿದೆ. ಆದರೆ, ಕರ್ನಾಟಕ ಹಾಗೂ ಗೋವಾ ಸರಕಾರಗಳು ಸುಪ್ರೀಂಕೋರ್ಟ್ಗೆ ಮೇಲ್ಮನವಿ ಸಲ್ಲಿಸಿವೆ ಹಾಗೂ ನ್ಯಾಯಾಧಿಕರಣದಲ್ಲಿ ಸ್ಪಷ್ಟೀಕರಣ ಕೇಳಿವೆ.
ಗೋವಾ ಸರಕಾರಕ್ಕೆ ಗೆಜೆಟ್ ನೋಟಿಫಿಕೇಶನ್ಗೆ ಸಹಕಾರ ನೀಡುವಂತೆ ಕೋರಿದ್ದೇನೆ. ಆದರೆ, ಅದು ನಂತರ ಆಗಲ್ಲವೆಂದು ಹೇಳುತ್ತಿದೆ. ಇದರ ಹೊರತಾಗಿ ಸಮಸ್ಯೆ ಇತ್ಯರ್ಥಗೊಳಿಸಲು ಬಾಹ್ಯವಾಗಿ ಗಂಭೀರ ಪ್ರಯತ್ನಗಳು ನಡೆದಿವೆ. ಇನ್ನು ಒಂದು-ಒಂದೂವರೆ ತಿಂಗಳಲ್ಲಿ ಇದು ಇತ್ಯರ್ಥವಾಗುವ ವಿಶ್ವಾಸವಿದೆ. ಮಹದಾಯಿ ಸಮಸ್ಯೆ ಇತ್ಯರ್ಥಕ್ಕೆ ಬಿಜೆಪಿ ಪ್ರಯತ್ನಿಸುತ್ತಿಲ್ಲವೆಂಬ ಆರೋಪಗಳಲ್ಲಿ ಯಾವುದೇ ಹುರುಳಿಲ್ಲ ಎಂದರು.
ಮಹದಾಯಿ ವಿಷಯವಾಗಿ ಗೆಜೆಟ್ ನೋಟಿಫಿಕೇಶನ್ ಹೊರಡಿಸುವ ಸಲುವಾಗಿ ಸುಪ್ರೀಂಕೋರ್ಟ್ ಹಾಗೂ ನ್ಯಾಯಾಧಿಕರಣದಲ್ಲಿನ ಮೇಲ್ಮನವಿ ಹಿಂಪಡೆದುಕೊಂಡು ಸಮಸ್ಯೆ ಬಗೆಹರಿಸಬಹುದೇನೋ ಎಂಬುದರ ಬಗ್ಗೆ ರಾಜ್ಯ ಸರಕಾರ ಕಾನೂನು ತಜ್ಞರೊಂದಿಗೆ ಸಲಹೆ ಪಡೆದು, ಕೂಲಂಕುಷವಾಗಿ ಪರಿಶೀಲಿಸಿ ಸ್ಪಷ್ಟ ನಿರ್ಧಾರ ಕೈಗೊಳ್ಳಲಿದೆ. ಈ ವಿಷಯವಾಗಿ ಯಡಿಯೂರಪ್ಪ ಸಹ ಸಕಾರಾತ್ಮಕವಾಗಿದ್ದಾರೆ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
PSI re-examination: ಪಿಎಸ್ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ
Lok sabha polls: ಸುರೇಶ್ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್ ದಾಸ್
Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್
Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್
Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್’ ಎಂದ ಬಿಜೆಪಿಗರು!
MUST WATCH
ಹೊಸ ಸೇರ್ಪಡೆ
Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್, ಸ್ಟೋಯಿನಿಸ್, ಅಗರ್ ಹೊರಕ್ಕೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ