ಉದ್ಯಮಿಗಳ ಚಿತ್ತವನ್ನು ಉತ್ತರ ಕರ್ನಾಟಕದ ಕಡೆ ಸೆಳೆಯಲು ಕ್ರಮ: ಜಗದೀಶ್ ಶೆಟ್ಟರ್
Team Udayavani, Sep 1, 2020, 3:08 PM IST
ರಾಯಚೂರು: ಕೈಗಾರಿಕೆ ವಲಯ ಎಂದರೆ ಕೇವಲ ಬೆಂಗಳೂರು ಎನ್ನುವಂತಾಗಿದ್ದು, ಉದ್ಯಮಿಗಳ ಚಿತ್ತವನ್ನು ಉತ್ತರ ಕರ್ನಾಟಕದತ್ತ ಸೆಳೆಯಲು ಸರ್ಕಾರ ಅಗತ್ಯ ಕ್ರಮ ಕೈಗೊಂಡಿದೆ ಎಂದು ಕೈಗಾರಿಕೆ ಸಚಿವ ಜಗದೀಶ್ ಶೆಟ್ಟರ್ ತಿಳಿಸಿದರು.
ಯಾದಗಿರಿ ಜಿಲ್ಲೆಯ ಕಡೆಚೂರು ಬಳಿ ಮೂರು ಸಾವಿರ ಎಕರೆ ಭೂಮಿ ಸ್ವಾಧೀನ ಮಾಡಿಕೊಂಡಿದ್ದು, ಅದರಲ್ಲಿ 2 ಸಾವಿರ ಎಕರೆ ಅಭಿವೃದ್ಧಿಪಡಿಸಲಾಗಿದೆ. ಹೀಗಾಗಿ 15 ಕಂಪನಿಗಳು ಈಗ ಅಲ್ಲಿ ಕೈಗಾರಿಕೆ ಸ್ಥಾಪಿಸಲು ಮುಂದಾಗಿವೆ. ಇನ್ನೂ ಕಲಬುರಗಿ ಜಿಲ್ಲೆಯಲ್ಲಿ ಶೀಘ್ರದಲ್ಲೇ ಬಂಡವಾಳ ಹೂಡಿಕೆ ಸಮಾವೇಶ ಏರ್ಪಡಿಸಲಾಗುವುದು ಎಂದರು.
ರಾಯಚೂರಿನಲ್ಲಿ ಫಾರ್ಮಾ ಪಾರ್ಕ್ ನಿರ್ಮಿಸುವ ಕುರಿತು ಕೇಂದ್ರ ಸಚಿವ ಸದಾನಂದಗೌಡರ ಜತೆ ಚರ್ಚಿಸಲಾಗಿದೆ. ಅದಕ್ಕೆ ಪ್ರಧಾನಿ ಒಪ್ಪಿಗೆ ನೀಡಬೇಕು ಎಂದಿದ್ದು, ಶೀಘ್ರದಲ್ಲೇ ಪ್ರಧಾನಿ ಬಳಿಗೂ ನಿಯೋಗ ಹೋಗುವುದಾಗಿ ತಿಳಿಸಿದರು.
ಕೈಗಾರಿಕೆಗಳಿಗೆ ಉತ್ತೇಜನ ನೀಡುವ ಉದ್ದೇಶದಿಂದ ಕರ್ನಾಟಕ ಕೈಗಾರಿಕೆ ಕಾಯ್ದೆಗೂ ತಿದ್ದುಪಡಿ ತರಲಾಗಿದೆ. ಭೂ ಸುಧಾರಣೆ ಕಾಯ್ದೆಗೂ ತಿದ್ದುಪಡಿ ಮಾಡಿದ್ದೇವೆ. ಕೃಷಿ ಭೂಮಿ ಖರೀದಿಗಿದ್ದ ನಿರ್ಬಂಧ ಸಡಿಲಿಕೆ ಮಾಡಲಾಗಿದೆ. ಈಗಾಗಲೇ ಕೊಪ್ಪಳದಲ್ಲಿ ಟಾಯ್ಸ್ ಕಾರ್ಖಾನೆ ಸ್ಥಾಪನೆಯಾಗುತ್ತಿದೆ. ಸುಮಾರು 2500 ಕೋಟಿ ಹೂಡಿಕೆ ಮಾಡಲಾಗುತ್ತಿದೆ. 40 ಸಾವಿರ ಜನರಿಗೆ ಉದ್ಯೋಗ ಸೃಷ್ಟಿಯಾಗುವ ನಿರೀಕ್ಷೆ ಇದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕಾಂಗ್ರೆಸ್ ನವರು ಕೇಸರಿ ಶಾಲು ಹಾಕಿದಾಕ್ಷಣ ಮನಸ್ಥಿತಿ ಬದಲಾಗಲ್ಲ… ಶೆಟ್ಟರ್ ಆರೋಪ
2014 ರಿಂದಲೇ ಜೆಡಿಎಸ್ ಬಿಜೆಪಿ ಮೈತ್ರಿಯಲ್ಲಿವೆ ಇದು ಹೊಸದೇನಲ್ಲ… HDK
Raids: ಕೊಪ್ಪಳ ಕೃಷಿ ಇಲಾಖೆ ಉಪ ನಿರ್ದೇಶಕ ಸಹದೇವ ಯರಗುಪ್ಪಾ ಮನೆ ಮೇಲೆ ಲೋಕಾಯುಕ್ತ ದಾಳಿ
ಮೋದಿ 3ನೇ ಬಾರಿ ಪ್ರಧಾನಿಯಾಗಲು ಸಹಕರಿಸಿ: ಗಾಯತ್ರಿ ಸಿದ್ದೇಶ್ವರ
Lok Sabha Election; ಇಂದಿನಿಂದ 14 ಕ್ಷೇತ್ರಗಳಲ್ಲಿ ನಾಮಪತ್ರ ಸಲ್ಲಿಕೆ
MUST WATCH
ಹೊಸ ಸೇರ್ಪಡೆ
Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!
SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು
Bengaluru: ಸಾಲ ವಸೂಲಿ ಹೆಸರಲ್ಲಿ ಆಟೋ ವಶ, ಧರ್ಮ ನಿಂದನೆ: ಬಂಧನ
Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬ್ಬಂದಿಯ ಗುಂಡಿಕ್ಕಿ ಹತ್ಯೆ.. ಭಯಾನಕ ದೃಶ್ಯ ಸೆರೆ
Bengaluru: ಪೇಂಟರ್ ಕೊಂದು ಪೊಲೀಸ್ ಠಾಣೆಗೆ ಬಂದು ಸಿಕ್ಕಿಬಿದ್ದ ಸ್ನೇಹಿತರು