ಸಿಎಂ ನಿವಾಸಕ್ಕೆ ನಟ ಸುದೀಪ್; ಕೆಸಿಸಿ ಉದ್ಘಾಟನೆಗೆ ಆಹ್ವಾನ
Team Udayavani, Apr 5, 2018, 9:42 AM IST
ಬೆಂಗಳೂರು: ಕಿಚ್ಚ ಸುದೀಪ್ ಗುರುವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಭೇಟಿಯಾಗಿ ಮಾತುಕತೆ ನಡೆಸಿರುವೆದು ರಾಜಕೀಯ ವಲಯದಲ್ಲಿ ಹೊಸ ಚರ್ಚೆಗೆ ಕಾರಣವಾಯಿತು. .
ಸಿಎಂ ಅಧಿಕೃತ ನಿವಾಸ ಕಾವೇರಿಗೆ ಆಗಮಿಸಿರುವ ಸುದೀಪ್ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಜೊತೆ 1 ಗಂಟೆಗೂ ಹೆಚ್ಚು ಕಾಲ ಚರ್ಚೆ ನಡೆಸಿದರು. ಅವರು ಕರ್ನಾಟಕ ಸೆಲೆಬ್ರಿಟಿ ಕ್ರಿಕೆಟ್ ಪಂದ್ಯಾವಳಿಯ ಉದ್ಘಾಟನೆಗೆ ಆಹ್ವಾನಿಸಲು ಆಗಮಿಸಿದ್ದರೆ ಹೊರತು ಬೇರೆ ರಾಜಕೀಯ ಕಾರಣಕ್ಕಲ್ಲ ಎನ್ನುವ ವಿಚಾರ ಸ್ಪಷ್ಟವಾಗಿದೆ.
ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಅವರ ನಿವಾಸಕ್ಕೆ ತೆರಳಿ ಮಾತುಕತೆ ನಡೆಸಿ ಕುತೂಹಲ ಕೆರಳಿಸಿದ್ದ ಬೆನ್ನಲ್ಲೇ ನಟ ಸುದೀಪ್ ಸಿಎಂ ಭೇಟಿಯಾದುದು ಭಾರೀ ಸುದ್ದಿಗೆ ಗ್ರಾಸವಾಯಿತು.
ಕೆಸಿಸಿ ಪಂದ್ಯಾವಳಿ ಎಪ್ರಿಲ್ 7 ಮತ್ತು 8 ರಂದು ನಡೆಯಲಿದ್ದುವಿವಿಧ ಗಣ್ಯರಿಗೆ ಆಹ್ವಾನಿಸುವಲ್ಲಿ ಸುದೀಪ್ ನಿರತರಾಗಿದ್ದಾರೆ.
ಸಿದ್ದರಾಮಯ್ಯ ಅವರು ಸುದೀಪ್ ಅವರಿಗೆ ಪಕ್ಷಕ್ಕೆ ಆಹ್ವಾನಿಸಿ ಕಾಂಗ್ರೆಸ್ ಪರ ಪ್ರಚಾರ ಮಾಡುವಂತೆ ಕೇಳಿಕೊಂಡಿರುವುದಾಗಿ ವರದಿಯಾಗಿದೆ.
ಚುನಾವಣಾ ರಣ ಕಣದಲ್ಲಿ ಕಾವು ಏರುತ್ತಿದ್ದಂತೆ ಅಪಾರ ಅಭಿಮಾನಿಗಳನ್ನು ಹೊಂದಿರುವ ಪ್ರಬಲ ವಾಲ್ಮೀಕಿ ಸಮುದಾಯಕ್ಕೆ ಸೇರಿರುವ ಸುದೀಪ್ ಸೆಳೆಯಲು ರಾಜಕೀಯ ಪಕ್ಷಗಳು ಕಸರತ್ತು ನಡೆಸುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ