Darpan: ದರ್ಪಣ್‌ ತಂತ್ರಾಂಶಕ್ಕೆ ಬೇಕಿದೆ ಪೂರಕ ಉಪಕರಣ


Team Udayavani, Oct 8, 2023, 12:40 AM IST

INDIAN POSST

ಬೆಂಗಳೂರು: ಗ್ರಾಮೀಣ ಅಂಚೆ ಕಚೇರಿಯ ಡಿಜಿಟಲ್‌ ಪ್ರಗತಿಯನ್ನು ಆಂತರಿಕವಾಗಿ ಅಭಿವೃದ್ಧಿಪಡಿಸಿ, ಗ್ರಾಹಕರ ಆರ್ಥಿಕ ಚಟುವಟಿಕೆಗಳನ್ನು ಮತ್ತಷ್ಟು ಉತ್ತೇಜಿಸುವ ನಿಟ್ಟಿನಲ್ಲಿ ಜಾರಿಗೆ ತರಲಾದ ನೂತನ ತಂತ್ರಾಂಶ ದರ್ಪಣ್‌ 2.0ಕ್ಕೆ ಅಗತ್ಯವಿರುವ ಪೂರಕ ಉಪಕರಣ ನೀಡಲು ಅಂಚೆ ಇಲಾಖೆಗೆ ಮರೆತು ಹೋಗಿದೆ. ಇದರಿಂದ ಗ್ರಾಹಕ ಸೇವೆಯಲ್ಲಿ ಅಡಚಣೆ ಎದುರಾಗಿದೆ.

ಅಂಚೆ ಇಲಾಖೆಯು 2012ರಲ್ಲಿ ಅಂಚೆ ಕಚೇರಿಯ ಸೇವೆಯನ್ನು ಸರಳಗೊಳಿಸಲು ಗ್ರಾಮೀಣ ಮಾಹಿತಿ ಸಂವಹನ ತಂತ್ರಜ್ಞಾನ ವ್ಯವಸ್ಥೆಯನ್ನು ಆಳವಡಿಸಿಕೊಂಡಿತ್ತು. ಈ ವೇಳೆ ಗ್ರಾಮೀಣ ಭಾಗ ಸಹಿತ ಕೆಲವು ನಗರ ಪ್ರದೇಶದಲ್ಲಿ ನೆಟ್‌ವರ್ಕ್‌ ಸಂಬಂಧಿಸಿ ಅನೇಕ ಸಮಸ್ಯೆಗಳು ಎದುರಾಗಿದ್ದವು. ಅನಂತರ ಸುಮಾರು 1 ದಶಕದ ಬಳಿಕ ಅನೇಕ ಬದಲಾವಣೆಯೊಂದಿಗೆ ಕಾರ್ಯಾಚರಿಸಿದೆ. ಈ ನೆಟ್‌ವರ್ಕ್‌ ಸಮಸ್ಯೆಗೆ ಮುಕ್ತಿ ನೀಡಲು 2023ರ ಅಕ್ಟೋಬರ್‌ 3ರಂದು ದರ್ಪಣ್‌ ಆ್ಯಪ್‌ ಸೇವೆ ಅಳವಡಿಸಿಕೊಂಡಿದೆ.

7,960 ಗ್ರಾಮೀಣ ಕಚೇರಿ
ನೆಟ್‌ವರ್ಕ್‌ ಸಮಸ್ಯೆಯಿಂದ ಹೊರಬರಲು ಅಂಚೆ ಇಲಾಖೆ ನೂತನ ತಂತ್ರಾಂಶ ದರ್ಪಣ್‌ 2.0 ಆ್ಯಪ್‌ನ್ನು ಆಳವಡಿಸಿಕೊಂಡಿದೆ. ಇದರಲ್ಲಿ ಆಯಾ ಸ್ಥಳದಲ್ಲಿ ಲಭ್ಯವಿರುವ 3ಜಿ, 4ಜಿ, 5ಜಿ ಹಾಗೂ ವೈ-ಫೈ ನೆಟ್‌ವರ್ಕ್‌ ಬಳಸಿಕೊಂಡು ಸೇವೆ ನೀಡಬಹುದಾಗಿದೆ. ರಾಜ್ಯದಲ್ಲಿ 7,960 ಗ್ರಾಮೀಣ ಅಂಚೆ ಕಚೇರಿಯಲ್ಲಿ ದರ್ಪಣ್‌ ಆ್ಯಪ್‌ ಅಳವಡಿಸಿಕೊಂಡು ಕಾರ್ಯಾಚರಣೆ ಪ್ರಾರಂಭಗೊಂಡಿದೆ. ಆರ್‌ಐಸಿಟಿ ಆ್ಯಪ್‌ ಬಳಸುತ್ತಿದ್ದ ಮೊಬೈಲ್‌ ಹಿಂಪಡೆದು, ನೂತನ ಮೊಬೈಲ್‌ಗ‌ಳನ್ನು ನೀಡಲಾಗುತ್ತಿದೆ. ಕಾರ್ಯಾಚರಣೆಯೂ ಪ್ರಾರಂಭವಾಗಿದೆ. ಎಲ್ಲ ಸೇವೆಗಳು ಒಂದೇ ತಂತ್ರಾಂಶದಲ್ಲಿ ಅಳವಡಿಸಿಕೊಂಡಿದೆ.

ಪೂರಕ ಉಪಕರಣವಿಲ್ಲ!
ಪ್ರಸ್ತುತ ಅಂಚೆ ಇಲಾಖೆ ದೇಶಾದ್ಯಂತ ನೂತನ ದರ್ಪಣ್‌ 2.0 ಎಂಬ ಹೊಸ ತಂತ್ರಾಂಶವನ್ನು ಅಳವಡಿಸಿಕೊಂಡಿದೆ. ಇದರಲ್ಲಿ ಆಧಾರ್‌ ಬಯೋಮೆಟ್ರಿಕ್‌, ಆಧಾರ್‌ ಒಟಿಪಿ ಲಾಗಿನ್‌, ಯೂಸರ್‌ ಐಡಿ ಬಳಸಿಕೊಂಡು ಕಾರ್ಯಾಚರಿಸಲಾಗುತ್ತದೆ.

ಇದಕ್ಕೆ ಮೊಬೈಲ್‌ ಜತೆಗೆ ಪ್ರತ್ಯೇಕ ಪ್ರಿಂಟರ್‌ ಹಾಗೂ ಬಯೋಮೆಟ್ರಿಕ್‌ ಉಪಕರಣದ ಅಗತ್ಯವಿದೆ. ತಂತ್ರಾಂಶವೇನೋ ಅಳವಡಿಸಿಕೊಳ್ಳಲಾಗಿದೆ. ಎಲ್ಲ ಅಂಚೆ ಕಚೇರಿಗೆ ಮೊಬೈಲ್‌ ವಿತರಿಸಿದ್ದು, ಇದಕ್ಕೆ ಅಗತ್ಯವಿರುವ ಪೂರಕವಾದ ಉಪಕರಣಗಳಾದ ಬಯೋಮೆಟ್ರಿಕ್‌ ಹಾಗೂ ಪ್ರಿಂಟರ್‌ ಉಪಕರಣಗಳು ಇದುವರೆಗೆ ಅಂಚೆ ಕಚೇರಿಗೆ ಲಭ್ಯವಾಗಿಲ್ಲ.

ವಿದ್ಯುತ್‌ ಬಿಲ್‌ ಪಾವತಿಗೆ ಅಂಚೆ ಕಚೇರಿಗೆ ಹೋದರೆ ಹಣ ಪಡೆದು ಬಿಲ್‌ ಪಾವತಿಸುತ್ತಾರೆ. ಆದರೆ ರಶೀದಿ ಮಾತ್ರ ನೀಡುತ್ತಿಲ್ಲ. ಬಿಲ್‌ ಪಾವತಿ ಬಗ್ಗೆ ಮೊಬೈಲ್‌ಗೆ ಸಂದೇಶ ಬರುವುದಾಗಿ ಹೇಳುತ್ತಾರೆ. ಆದರೆ ಅದನ್ನು ನೋಡಬೇಕಾದರೆ ನಾನು ಮನೆಗೆ ಹೋಗಬೇಕಾಗುತ್ತದೆ. ಈ ನಡುವೆ ಬಿಲ್‌ ಪಾವತಿಯಾಗಿದೆಯೋ ಇಲ್ಲವೋ ಎನ್ನುವುದಕ್ಕೆ ನಿಖರವಾದ ಮಾಹಿತಿ ದೊರಕುತ್ತಿಲ್ಲ. ಖಾತೆ ಠೇವಣಿ ವಿಚಾರವು ಅಷ್ಟೆ.
– ವಿನಾಯಕ್‌, ಅಂಚೆ ಕಚೇರಿ ಗ್ರಾಹಕ

ಕೇಂದ್ರದಿಂದ ಡಿಜಿಟಲ್‌ ಸೇವೆಗೆ ಹೆಚ್ಚಿನ ಒತ್ತು ನೀಡಲಾಗುತ್ತಿದೆ. ತಜ್ಞರು ಪೇಪರ್‌ಲೆಸ್‌ ವ್ಯವಹಾರಕ್ಕೆ ಪ್ರೋತ್ಸಾಹ ನೀಡಲು ಸಲಹೆ ನೀಡಿದ್ದಾರೆ. ಆದರೆ ಕರ್ನಾಟಕದ ಗ್ರಾಮೀಣ ಭಾಗದ ಅಂಚೆ ಕಚೇರಿಗಳಲ್ಲಿ ಗ್ರಾಹಕರು ರಶೀದಿ ಬೇಡಿಕೆ ಇಟ್ಟಿರುವ ಹಿನ್ನೆಲೆಯಲ್ಲಿ ಕೇಂದ್ರಕ್ಕೆ ಪ್ರಿಂಟರ್‌ ಒದಗಿಸುವಂತೆ ಮನವಿ ಮಾಡಲಾಗಿದೆ. ಇನ್ನೂ ಬಯೋಮೆಟ್ರಿಕ್‌ ಹಂತ ಹಂತವಾಗಿ ಅಂಚೆ ಕಚೇರಿಗಳಿಗೆ ವಿತರಿಸಲಾಗುತ್ತದೆ.
-ರಾಜೇಂದ್ರ ಮುಖ್ಯ ಪೋಸ್ಟ್‌ ಮಾಸ್ಟರ್‌ ಜನರಲ್‌ ಕರ್ನಾಟಕ ವೃತ್ತ, ಬೆಂಗಳೂರು

ಸಮಸ್ಯೆ ಏನು?
ವಿದ್ಯುತ್‌ ಬಿಲ್‌, ಅಂಚೆ ಉಳಿತಾಯ ಖಾತೆ ಸೇರಿ ಇತರ ಆರ್ಥಿಕ ಚಟುವಟಿಕೆ ಹಾಗೂ ಬಿಲ್‌ ಪಾವತಿ ಸಂದರ್ಭದಲ್ಲಿ ಅಂಚೆ ಇಲಾಖೆ ಸಿಬಂದಿಗೆ ಪಾವತಿ ರಶೀದಿ ನೀಡಲು ಸಾಧ್ಯವಾಗದೆ ಪರದಾಡುತ್ತಿದ್ದಾರೆ. ರಶೀದಿ ಜನರೇಟ್‌ ಆಗದೆ ಜನರು ಅಂಚೆ ಕಚೇರಿಯಿಂದ ತೆರಳಲು ಹಿಂದೇಟು ಹಾಕುತ್ತಿದ್ದಾರೆ. ಅಧಿಕಾರಿಗಳು ಮ್ಯಾನುವಲ್‌ ಬಿಲ್‌ ನೀಡುವಂತೆ ಒತ್ತಾಯಿಸುತ್ತಿದ್ದಾರೆ. ಒಂದು ವೇಳೆ ಮ್ಯಾನುವಲ್‌ ರಶೀದಿ ನೀಡಿದರೆ ಅವ್ಯವಹಾರಕ್ಕೆ ನಾಂದಿಯಾಗುತ್ತದೆ. ಗ್ರಾಹಕರು ನೀಡುವ ಠೇವಣಿಗೆ ನೀಡುವ ಮೊತ್ತವೇ ಒಂದು ಹಾಗೂ ಖಾತೆಯಲ್ಲಿ ಜಮೆಯಾಗುವ ಮೊತ್ತವೇ ಬೇರೆಯಾಗುವ ಸಾಧ್ಯಗಳಿವೆ ಎಂದು ಇಲಾಖೆ ಸಿಬಂದಿ ಆತಂಕ ವ್ಯಕ್ತಪಡಿಸಿದರು.

 ತೃಪ್ತಿ ಕುಮ್ರಗೋಡು

ಟಾಪ್ ನ್ಯೂಸ್

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

Subrahmanya Dhareshwar: ಗಾಯನ ಮುಗಿಸಿದ ಗಾನ ಕೋಗಿಲೆ

Subrahmanya Dhareshwar: ಗಾಯನ ಮುಗಿಸಿದ ಗಾನ ಕೋಗಿಲೆ

4

IPL: ಆಟ ಮೆರೆದಾಟ; ಬ್ಯಾಟಿಂಗ್‌ ಅಷ್ಟೇ ಕ್ರಿಕೆಟ್ಟಾ?

2

Bengaluru: ಬಿಸಿಲು; ಹೋಟೆಲ್‌ ವ್ಯಾಪಾರ ಶೇ.30 ಕುಸಿತ

Mahadev Betting App Case; Actor Sahil Khan arrested by Mumbai police

Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ

2-baikampady

Baikampady: ಲಾರಿಗಳ ನಡುವೆ ಅಪಘಾತ; ಚಾಲಕ ಗಂಭೀರ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗ್ಯಾರಂಟಿಗಳಿಂದ ಜನ ಭ್ರಷ್ಟರಾಗುತ್ತಾರೆ ಎನ್ನಲಾಗದು: ಹೈಕೋರ್ಟ್‌ ತೀರ್ಪು

ಗ್ಯಾರಂಟಿಗಳಿಂದ ಜನ ಭ್ರಷ್ಟರಾಗುತ್ತಾರೆ ಎನ್ನಲಾಗದು: ಹೈಕೋರ್ಟ್‌ ತೀರ್ಪು

ಅಂತೂ ಬಂತು ಬರ ಪರಿಹಾರ: ರಾಜ್ಯಕ್ಕೆ 3,454 ಕೋ.ರೂ. ಬರ ಪರಿಹಾರ ಬಿಡುಗಡೆ

ಅಂತೂ ಬಂತು ಬರ ಪರಿಹಾರ: ರಾಜ್ಯಕ್ಕೆ 3,454 ಕೋ.ರೂ. ಬರ ಪರಿಹಾರ ಬಿಡುಗಡೆ

Hassan ವೀಡಿಯೋ ಪ್ರಕರಣ ಎಸ್‌ಐಟಿ ತನಿಖೆಗೆ

Drought Relief: ಕಾಂಗ್ರೆಸ್‌-ಬಿಜೆಪಿ ಬರ ಪರಿಹಾರ ಜಟಾಪಟಿ

Drought Relief: ಕಾಂಗ್ರೆಸ್‌-ಬಿಜೆಪಿ ಬರ ಪರಿಹಾರ ಜಟಾಪಟಿ

Drought Relief: ಎಕ್ಸ್‌ (ಟ್ವಿಟರ್‌)ನಲ್ಲೂ ಕಾಂಗ್ರೆಸ್‌-ಬಿಜೆಪಿ ವಾಕ್ಸಮರ

Drought Relief: ಎಕ್ಸ್‌ (ಟ್ವಿಟರ್‌)ನಲ್ಲೂ ಕಾಂಗ್ರೆಸ್‌-ಬಿಜೆಪಿ ವಾಕ್ಸಮರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

Subrahmanya Dhareshwar: ಗಾಯನ ಮುಗಿಸಿದ ಗಾನ ಕೋಗಿಲೆ

Subrahmanya Dhareshwar: ಗಾಯನ ಮುಗಿಸಿದ ಗಾನ ಕೋಗಿಲೆ

4

IPL: ಆಟ ಮೆರೆದಾಟ; ಬ್ಯಾಟಿಂಗ್‌ ಅಷ್ಟೇ ಕ್ರಿಕೆಟ್ಟಾ?

Bengaluru: ಬ್ರೇಕ್‌ ಬದಲು ಆ್ಯಕ್ಸಿಲೇಟರ್‌ ಒತ್ತಿದ ಆ್ಯಂಬುಲೆನ್ಸ್‌ ಚಾಲಕ: ಸರಣಿ ಅಪಘಾತ

Bengaluru: ಬ್ರೇಕ್‌ ಬದಲು ಆ್ಯಕ್ಸಿಲೇಟರ್‌ ಒತ್ತಿದ ಆ್ಯಂಬುಲೆನ್ಸ್‌ ಚಾಲಕ: ಸರಣಿ ಅಪಘಾತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.