ಹಣ್ಣು -ತರಕಾರಿ ಸರಬರಾಜಿಗೆ ಸಮರ್ಪಕ ವ್ಯವಸ್ಥೆ
Team Udayavani, Apr 20, 2020, 5:08 AM IST
ಬೆಂಗಳೂರು: ಲಾಕ್ಡೌನ್ ಹಿನ್ನೆಲೆಯಲ್ಲಿ ಹಣ್ಣು ಮತ್ತು ತರಕಾರಿಗಳನ್ನು ಬೆಳೆಗಾರರಿಂದ ಗ್ರಾಹಕರಿಗೆ ತಲುಪಿಸಲು ಎಲ್ಲ ರೀತಿಯ ಕ್ರಮಗಳನ್ನು ಕೈಗೊಳ್ಳಲಾಗಿದೆ. ಇದಕ್ಕಾಗಿ ರಾಜ್ಯ ಮಟ್ಟದಲ್ಲಿ ಹೆಲ್ಪ್ಲೈನ್ ಆರಂಭಿಸಲಾಗಿದೆ. ಹಣ್ಣು ಮತ್ತು ತರಕಾರಿ ಸರಬರಾಜು ವ್ಯವಸ್ಥೆ ಮೇಲೆ ನಿಗಾ ವಹಿಸಲಾಗಿದೆ ಎಂದು ರಾಜ್ಯ ಸರಕಾರ ಹೈಕೋರ್ಟ್ಗೆ ಹೇಳಿದೆ.
ಈ ಕುರಿತು ಸಲ್ಲಿಸಲಾಗಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸುತ್ತಿರುವ ಮುಖ್ಯ ನ್ಯಾ| ಎ.ಎಸ್. ಓಕ್ ನೇತೃತ್ವದ ವಿಭಾಗೀಯ ನ್ಯಾಯಪೀಠಕ್ಕೆ ಸರಕಾರ ಲಿಖೀತ ಹೇಳಿಕೆ ನೀಡಿದೆ.