ಕರ್ನಾಟಕ ಪೊಲೀಸ್ ಇಲಾಖೆಗೆ ಕಪ್ಪುಚುಕ್ಕೆಯಾದ ಪಿಎಸ್ಐ ನೇಮಕ ಅಕ್ರಮ ಪ್ರಕರಣ
Team Udayavani, Jul 5, 2022, 11:46 AM IST
ಬೆಂಗಳೂರು: ಪಿಎಸ್ ಐ ನೇಮಕ ಹಗರಣದ ಬಗ್ಗೆ ಆಡಳಿತ – ಪ್ರತಿಪಕ್ಷದ ಮಧ್ಯೆ ಕೆಸರೆರಚಾಟ ನಡೆಯುತ್ತಿರುವುದರ ಮಧ್ಯೆಯೇ ಸಿಐಡಿ ತನಿಖಾ ಸಂಸ್ಥೆ ಇದುವರೆಗೆ 65 ಆರೋಪಿಗಳನ್ನು ಬಂಧಿಸಿದೆ. ಸೇವಾ ನಿಯನದ ಅನ್ವಯ ಎಡಿಜಿಪಿ ಅಮೃತ್ ಪೌಲ್ ಅವರನ್ನು ಅಮಾನತುಗೊಳಿಸಲಾಗಿದೆ.
ಸೋಮವಾರ ರಾತ್ರಿಯೇ ಆದೇಶ ಹೊರಡಿಸಿರುವ ರಾಜ್ಯ ಸರಕಾರ ಅಮೃತ್ ಪೌಲ್ ಜತೆಗೆ ಎಸಿಬಿ ಬಲೆಗೆ ಬಿದ್ದಿರುವ ಐಎಎಸ್ ಅಧಿಕಾರಿ ಮಂಜುನಾಥ್ ಅವರನ್ನು ಅಮಾನತುಗೊಳಿಸಿದೆ.
ನೇಮಕ ಹಗರಣದಲ್ಲಿ ಸಿಕ್ಕಿ ಬಿದ್ದವರ ಪೈಕಿ ಪೊಲೀಸ್ ಅಧಿಕಾರಿ ಹಾಗೂ ಸಿಬ್ಬಂದಿ ಸಂಖ್ಯೆಯೇ ಸಿಂಹಪಾಲಿದೆ. ಅಮೃತ್ ಪೌಲ್ ಸೇರಿ ನಾಲ್ವರು ಡಿವೈಎಸ್ಪಿ, 18 ಅಧಿಕಾರಿಗಳು ಹಾಗೂ ಸಹಾಯಕ ಸಿಬ್ಬಂದಿ ಇದ್ದಾರೆ. ಪೊಲೀಸ್ ಇಲಾಖೆಯ ಇತಿಹಾಸದಲ್ಲೇ ಇಷ್ಟೊಂದು ದೊಡ್ಡ ಪ್ರಮಾಣದಲ್ಲಿ ಅಧಿಕಾರಿಗಳು ಹಾಗೂ ಸಿಬ್ಬಂದಿ ಭಾಗವಹಿಸಿದ ಹಗರಣ ಇರಲಿಲ್ಲ. ಇದು ಕರ್ನಾಟಕ ಪೊಲೀಸ್ ಇಲಾಖೆಯ ಮೇಲಿನ ದೊಡ್ಡ ಕಪ್ಪುಚುಕ್ಕೆ ಎಂದು ಪರಿಗಣಿಸಲಾಗಿದೆ.
ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ದಾಖಲಾದ ಪ್ರಕರರಣದಲ್ಲಿ ಅಮೃತ್ ಪೌಲ್ 35ನೇ ಆರೋಪಿಯಾಗಿದ್ದು,ಈ ಪ್ರಕರಣ ನ್ಯಾಯಾಲಯದ ಕಣ್ಣಂಚಿನಲ್ಲೇ ಇನ್ನು ಮುಂದೆ ತನಿಖೆಗೆ ಒಳಪಡಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನರ್ಸಿಂಗ್ ಕಾಲೇಜುಗಳ ಪರಿಶೀಲನೆ: ವಿಶೇಷ ಜಂಟಿ ಸದನ ಸಮಿತಿ ರಚನೆ ಎತ್ತಿ ಹಿಡಿದ ಹೈಕೋರ್ಟ್
ಸಿದ್ದರಾಮಯ್ಯ ವಿರುದ್ಧ ಪ್ರತಿಭಟನೆ ಸರ್ಕಾರಿ ಪ್ರಾಯೋಜಿತ: ದಿನೇಶ್ ಗುಂಡೂರಾವ್
ಬಿಸಿಯೂಟ ನೌಕರರಿಗೆ ಕನಿಷ್ಠ ವೇತನ ಕಾಯ್ದೆ ಅನ್ವಯ ಆಗದು
ಸಕಲೇಶಪುರದಲ್ಲೂ ಮಾಜಿ ಸಿಎಂ ಸಿದ್ದರಾಮಯ್ಯಗೆ ತಟ್ಟಿದ ಪ್ರತಿಭಟನೆ ಬಿಸಿ
ಶಾಲೆಗಳಲ್ಲಿ ಗಣೇಶ ಉತ್ಸವ ಬಿಜೆಪಿ ಸರ್ಕಾರ ರೂಪಿಸಿದ್ದಲ್ಲ: ಸಚಿವ ಬಿ.ಸಿ.ನಾಗೇಶ್