ಸಂತೋಷ್ ಪಾಟೀಲ್ ಕೇಸ್: ತನಿಖೆಗೆ ಉಡುಪಿ ಎಸ್ಪಿ ನೇತೃತ್ವದಲ್ಲಿ 7 ತಂಡಗಳ ರಚನೆ; ಎಡಿಜಿಪಿ
Team Udayavani, Apr 16, 2022, 2:30 PM IST
ಉಡುಪಿ: ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಉಡುಪಿಗೆ ಕಾನೂನು ಮತ್ತು ಸುವ್ಯವಸ್ಥೆ ಎಡಿಜಿಪಿ ಪ್ರತಾಪ್ ರೆಡ್ಡಿ ಭೇಟಿ ನೀಡಿ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು.
ಉಡುಪಿ ಎಸ್ ಪಿ ಕಚೇರಿಯಲ್ಲಿ ಅಧಿಕಾರಿಗಳೊಂದಿಗೆ ಸತತ 3 ಗಂಟೆಗೂ ಹೆಚ್ಚುಕಾಲ ಸಭೆ ನಡೆಸಿ, ಸುದ್ದಿಗಾರರೊಂದಿಗೆ ಮಾತಾನಾಡಿದ ಅವರು, ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣವನ್ನು ಬೇಧಿಸಲು ಉಡುಪಿ ಎಸ್ಪಿ ನೇತೃತ್ವದಲ್ಲಿ 7 ತನಿಖಾ ತಂಡಗಳ ರಚನೆ ಮಾಡಲಾಗಿದೆ. ವಿವಿಧ ಜಿಲ್ಲೆಗಳಲ್ಲಿ ಪೊಲೀಸ್ ತಂಡಗಳಿಂದ ಸಮರ್ಪಕ ತನಿಖೆ ನಡೆಯುತ್ತಿದೆ ಎಂದರು.
ಇದನ್ನೂ ಓದಿ:ಶತ್ರುಘ್ನ ಸಿನ್ಹಾ, ಸುಪ್ರಿಯೊ ಗೆಲುವಿನತ್ತ: ಬಂಗಾಳದಲ್ಲಿ ಬಿಜೆಪಿಗೆ ಹಿನ್ನಡೆ
ಪ್ರಕರಣಕ್ಕೆ ಸಂಬಂಧಿಸಿದಂತೆ ಎಲ್ಲಾ ಆಯಾಮಗಳಲ್ಲಿ ತನಿಖೆ ನಡೆಯುತ್ತಿದೆ. ವೈದ್ಯಕೀಯ, ಮರಣೋತ್ತರ ವರದಿ ಹಾಗೂ ಎಫ್ ಎಸ್ ಎಲ್ ಸಂಬಂಧಿಸಿದ ವರದಿಗಳು ಇನ್ನಷ್ಟೇ ಬರಬೇಕು ಅದರ ಬಗ್ಗೆ ಈ ಹಂತದಲ್ಲಿ ಏನೂ ಹೇಳಲಾಗುವುದಿಲ್ಲ ಎಂದು ಹೇಳಿದರು.