“ಬಾಂಬಿದ್ದ ಬ್ಯಾಗ್‌ ಇರಿಸಿದ್ದು ಇಲ್ಲೇ’ ಎಂದ ಆದಿತ್ಯ


Team Udayavani, Jan 25, 2020, 3:06 AM IST

baombidda

ಮಂಗಳೂರು: “ನಾನು ಸಜೀವ ಬಾಂಬ್‌ ಹೊಂದಿದ್ದ ಬ್ಯಾಗನ್ನು ಇರಿಸಿದ್ದು ಇಲ್ಲೇ’ ಎಂಬುದಾಗಿ ಆರೋಪಿ ಆದಿತ್ಯ ರಾವ್‌ ಪೊಲೀಸ್‌ ತನಿಖಾ ತಂಡಕ್ಕೆ ಖಚಿತಪಡಿಸಿದ್ದಾನೆ. ಪೊಲೀಸ್‌ ಕಸ್ಟಡಿಯಲ್ಲಿರುವ ಆದಿತ್ಯ ರಾವ್‌ನನ್ನು ಶುಕ್ರವಾರ ಮಂಗಳೂರು ಉತ್ತರ ಪೊಲೀಸ್‌ ಉಪ ವಿಭಾಗದ ಎಸಿಪಿ ಬೆಳ್ಳಿಯಪ್ಪ ನೇತೃತ್ವದ ತನಿಖಾ ತಂಡವು ವಿಮಾನ ನಿಲ್ದಾಣ ಮತ್ತು ಇತರ ಸ್ಥಳಗಳಿಗೆ ಕರೆದೊಯ್ದು ಮಹಜರು ನಡೆಸಿತು.

ವಿಮಾನ ನಿಲ್ದಾಣ ಪ್ರವೇಶಿಸುವ ಟಿಕೆಟ್‌ ಕೌಂಟರ್‌ ಬಳಿ ಕರೆದೊಯ್ದಾಗ ಆದಿತ್ಯ ರಾವ್‌, ಅಲ್ಲಿ ಪ್ರಯಾಣಿಕರಿಗೆ ಕುಳಿತುಕೊಳ್ಳಲು ಇರಿಸಿರುವ ಕಬ್ಬಿಣದ ಕುರ್ಚಿಯಲ್ಲಿ ಬಾಂಬ್‌ ಇದ್ದ ಬ್ಯಾಗ್‌ ಇರಿಸಿರುವುದನ್ನು ಒಪ್ಪಿಕೊಂಡಿದ್ದಾನೆ. ಆತನ ಹೇಳಿಕೆಯನ್ನು ತನಿಖಾಧಿಕಾರಿಗಳ ತಂಡ ದಾಖಲಿಸಿಕೊಂಡಿತು.

“ಆಟೋದಲ್ಲಿ ಏರ್‌ಪೋರ್ಟ್‌ ಚೆಕ್ಕಿಂಗ್‌ ಪಾಯಿಂಟ್‌ ತನಕ ಬಂದು ಅಲ್ಲಿ ಇಳಿದು ಬಳಿಕ ನಡೆದುಕೊಂಡು ಬಂದೆ. ಟಿರ್ಮಿನಲ್‌ ಕಟ್ಟಡದ ಟಿಕೆಟ್‌ ಕೌಂಟರ್‌ ಬಳಿ ತಲುಪಿದಾಗ ಅಲ್ಲಿ ಭದ್ರತಾ ಸಿಬ್ಬಂದಿ ಇರಲಿಲ್ಲ. ಹಾಗಾಗಿ ನನ್ನ ಉದ್ದೇಶ ಈಡೇರಿಸಲು ಸಾಧ್ಯವಾಯಿತು’ ಎಂದು ತನಿಖಾ ತಂಡಕ್ಕೆ ವಿವರಿಸಿದ್ದಾನೆ ಎನ್ನಲಾಗಿದೆ.

“ಜ. 20ರಂದು ಬೆಳಗ್ಗೆ 8.35ರ ಸುಮಾರಿಗೆ ನಾನು ಇಲ್ಲಿಗೆ ತಲುಪಿದ್ದು, ಕೇವಲ 5 ನಿಮಿಷಗಳಲ್ಲಿ ಬ್ಯಾಗನ್ನು ಯಾರಿಗೂ ಸಂಶಯ ಬಾರದಂತೆ ಇಲ್ಲಿನ ಕುರ್ಚಿಯಲ್ಲಿ ಇರಿಸಿದೆ. ಬಳಿಕ ಎಸ್ಕಲೇಟರ್‌ ಮೂಲಕ ವಿಮಾನ ನಿಲ್ದಾಣದಿಂದ ಹೊರಗೆ ಬಂದು ಆಟೋ ಹತ್ತಿ ನಿರ್ಗಮಿಸಿದೆ’ ಎಂದು ಹೇಳಿಕೆ ನೀಡಿದ್ದಾನೆ ಎಂದು ಮೂಲಗಳು ತಿಳಿಸಿವೆ.

ಕೆಂಜಾರು ಜಂಕ್ಷನ್‌ನಲ್ಲಿರುವ ಸೆಲೂನ್‌ಗೆ ಭೇಟಿ: ಕೆಂಜಾರು ಜಂಕ್ಷನ್‌ನಲ್ಲಿರುವ ಬಸ್‌ ನಿಲ್ದಾಣ ಬಳಿಯ ವಾಣಿಜ್ಯ ಸಂಕೀರ್ಣದಲ್ಲಿರುವ ಸೆಲೂನ್‌ಗೆ ಆದಿತ್ಯ ರಾವ್‌ನನ್ನು ಕರೆದೊಯ್ಯಲಾಯಿತು. ಆ ಸ್ಥಳವನ್ನು ಗುರುತಿಸಿದ ಆತ, “ಬಸ್‌ನಲ್ಲಿ ಬಂದು ಒಂದು ಬ್ಯಾಗನ್ನು ಒಳಗೆ ಇರಿಸಬಹುದೇ ಎಂದು ಕೇಳಿದ್ದೆ.

ಆದರೆ ಸೆಲೂನ್‌ನವರು ಒಳಗೆ ಅವಕಾಶ ನೀಡದೆ, ಹೊರಗೆ ಇರಿಸುವಂತೆ ಸೂಚಿಸಿದರು. ಆ ಬ್ಯಾಗ್‌ನಲ್ಲಿ ಸ್ಫೋಟಕ ಇರಲಿಲ್ಲ, ಬಟ್ಟೆಬರೆ ಇತ್ತು’ ಎಂದು ಹೇಳಿಕೆ ನೀಡಿದ್ದಾನೆ. ಸೆಲೂನ್‌ನ ಮಾಲೀಕರ ಜತೆ ಆರೋಪಿ ಆದಿತ್ಯ ರಾವ್‌ ಮಾತನಾಡಿರುವ ವಿಚಾರಗಳನ್ನು ಮಹಜರು ವೇಳೆ ಪೊಲೀಸ್‌ ತಂಡ ದಾಖಲಿಸಿಕೊಂಡಿತು.

ಆ ಬಳಿಕ ಆದಿತ್ಯನನ್ನು ಪಣಂಬೂರು ಎಸಿಪಿ ಕಚೇರಿಗೆ ಕರೆದೊಯ್ಯಲಾಯಿತು. ಆತ ಕೆಲಸ ಮಾಡಿದ್ದ ಮಂಗಳೂರಿನ ಬಲ್ಮಠ ರಸ್ತೆಯ ಹೊಟೇಲ್‌ ಮತ್ತು ಕಾರ್ಕಳದ ರೆಸ್ಟೋರೆಂಟ್‌ ಮತ್ತು ಇತರ ಕಡೆಗೆ ತೆರಳಿ ಮಹಜರು ನಡೆಸಬೇಕಾಗಿದೆ. ಅಲ್ಲದೆ ಬಾಂಬ್‌ ತಯಾರಿಗೆ ಕಚ್ಚಾ ಸಾಮಗ್ರಿ ತರಿಸಿಕೊಂಡ ಸ್ಥಳಗಳಿಗೂ ತೆರಳಿ ತನಿಖಾ ತಂಡ ಮಹಜರು ನಡೆಸಲಿದೆ.

ಟಾಪ್ ನ್ಯೂಸ್

Bridge Collapse: 8 ವರ್ಷಗಳಿಂದ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿತ… ತಪ್ಪಿದ ದುರಂತ

Bridge Collapse: 8 ವರ್ಷಗಳಿಂದ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿತ… ತಪ್ಪಿದ ದುರಂತ

bp harish

Harihara; ಅಕ್ರಮ ಮರಳುಗಾರಿಕೆ ಮಾಹಿತಿ ನೀಡಿದ್ದಕ್ಕೆ ಬಿಜೆಪಿ ಶಾಸಕರಿಗೆ ಜೀವ ಬೆದರಿಕೆ

Food ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ

Food: ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ

Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ

 PM Modi:ನನ್ನ 90 ಸೆಕೆಂಡ್‌ ಭಾಷಣ ಕಾಂಗ್ರೆಸ್‌, INDIA ಮೈತ್ರಿಕೂಟಕ್ಕೆ ತಲ್ಲಣ ಹುಟ್ಟಿಸಿದೆ

 PM Modi:ನನ್ನ 90 ಸೆಕೆಂಡ್‌ ಭಾಷಣ ಕಾಂಗ್ರೆಸ್‌, INDIA ಮೈತ್ರಿಕೂಟಕ್ಕೆ ತಲ್ಲಣ ಹುಟ್ಟಿಸಿದೆ

Padibagilu: ರಿಂಗ್ ಹಾಕಲೆಂದು ಬಾವಿಗಿಳಿದ ಇಬ್ಬರು ಉಸಿರುಗಟ್ಟಿ ಸಾವು

Padibagilu: ರಿಂಗ್ ಹಾಕಲೆಂದು ಬಾವಿಗಿಳಿದ ಇಬ್ಬರು ಉಸಿರುಗಟ್ಟಿ ಸಾವು

ಕೇಜ್ರಿವಾಲ್‌, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್

ಕೇಜ್ರಿವಾಲ್‌, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

ತಾಳಿಭಾಗ್ಯ ಯೋಜನೆ ತಂದ ಕಾಂಗ್ರೆಸ್ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

ತಾಳಿಭಾಗ್ಯ ಯೋಜನೆ ತಂದ ‘ಕಾಂಗ್ರೆಸ್’ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Bridge Collapse: 8 ವರ್ಷಗಳಿಂದ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿತ… ತಪ್ಪಿದ ದುರಂತ

Bridge Collapse: 8 ವರ್ಷಗಳಿಂದ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿತ… ತಪ್ಪಿದ ದುರಂತ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?

ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?

bp harish

Harihara; ಅಕ್ರಮ ಮರಳುಗಾರಿಕೆ ಮಾಹಿತಿ ನೀಡಿದ್ದಕ್ಕೆ ಬಿಜೆಪಿ ಶಾಸಕರಿಗೆ ಜೀವ ಬೆದರಿಕೆ

Food ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ

Food: ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.