ದತ್ತು ಮಕ್ಕಳೂ ಅನುಕಂಪದ ಉದ್ಯೋಗಕ್ಕೆ ಅರ್ಹರು: ಹೈಕೋರ್ಟ್‌


Team Udayavani, Nov 23, 2022, 6:30 AM IST

ದತ್ತು ಮಕ್ಕಳೂ ಅನುಕಂಪದ ಉದ್ಯೋಗಕ್ಕೆ ಅರ್ಹರು: ಹೈಕೋರ್ಟ್‌

ಬೆಂಗಳೂರು: ದತ್ತು ಮಕ್ಕಳೂ ಸಹ ಅನುಕಂಪದ ಆಧಾರದಲ್ಲಿ ಉದ್ಯೋಗ ಪಡೆದುಕೊಳ್ಳಲು ಅರ್ಹರಾಗಿರುತ್ತಾರೆ ಎಂದು ಹೈಕೋರ್ಟ್‌ ಆದೇಶ ನೀಡಿದೆ.

ಅನುಕಂಪದ ಉದ್ಯೋಗದ ವಿಚಾರದಲ್ಲಿ ಸ್ವಂತ ಮತ್ತು ದತ್ತು ಮಕ್ಕಳಲ್ಲಿ ತಾರತಮ್ಯ ಅಥವಾ ವ್ಯತ್ಯಾಸ ಮಾಡಿದರೆ ದತ್ತು ತೆಗೆದುಕೊಳ್ಳುವ ಉದ್ದೇಶವೇ ನಿಷ#ಲವಾಗಲಿದೆ ಎಂದೂ ಹೈಕೋರ್ಟ್‌ ಅಭಿಪ್ರಾಯಪಟ್ಟಿದೆ.

ದತ್ತು ಮಕ್ಕಳಿಗೆ ಅನುಕಂಪದ ಆಧಾರದಲ್ಲಿ ಉದ್ಯೋಗ ನೀಡಲು ಕಾನೂನಿನಲ್ಲಿ ಅವಕಾಶವಿಲ್ಲ ಎಂದು ಹೈಕೋರ್ಟ್‌ ಏಕ ಸದಸ್ಯ ನ್ಯಾಯಪೀಠ ಹೊರಡಿಸಿದ ಆದೇಶ ಪ್ರಶ್ನಿಸಿ ಬಾಗಲಕೋಟೆಯ ಬನಹಟ್ಟಿ ತಾಲೂಕಿನ ನಿವಾಸಿ ಎಸ್‌. ಗಿರೀಶ್‌ (32) ಸಲ್ಲಿಸಿದ್ದ ಮೇಲ್ಮನವಿಯನ್ನು ಪುರಸ್ಕರಿಸಿದ ನ್ಯಾಯಮೂರ್ತಿ ಸೂರಜ್‌ ಗೋವಿಂದರಾಜ್‌ ಅವರ ನೇತೃತ್ವದ ವಿಭಾಗೀಯ ನ್ಯಾಯಪೀಠ ಈ ಆದೇಶ ನೀಡಿದೆ.

ಸ್ವತಃ ಮಗ ಅಥವಾ ಮಗಳಾಗಲಿ ಹಾಗೂ ದತ್ತು ಮಗ ಅಥವಾ ಮಗಳಾಗಲಿ, ಅವರು ಮಕ್ಕಳೇ ಆಗಿರುತ್ತಾರೆ. ಇದರಲ್ಲಿ ತಾರತಮ್ಯವಿದೆ ಎಂಬುದಾಗಿ ನ್ಯಾಯಾಲಯ ಒಪ್ಪಿಕೊಂಡರೆ, ದತ್ತು ಸ್ವೀಕಾರದ ಉದ್ದೇಶವೇ ಈಡೇರುವುದಿಲ್ಲ ಎಂದು ಅಭಿಪ್ರಾಯಪಟ್ಟಿರುವ ಹೈಕೋರ್ಟ್‌, ದತ್ತು ಮಕ್ಕಳು ಸಹ ಅನುಕಂಪದ ಆಧಾರದಲ್ಲಿ ಪೋಷಕರ ಉದ್ಯೋಗ ಪಡೆಯಲು ಅರ್ಹರಾಗಿರುತ್ತಾರೆ ಎಂದು ಆದೇಶದಲ್ಲಿ ಸ್ಪಷ್ಟಪಡಿಸಿದೆ.

ದತ್ತು ಮಕ್ಕಳಿಗೆ ಅನುಕಂಪದ ಉದ್ಯೋಗ ನೀಡಲು “ಕರ್ನಾಟಕ ನಾಗರಿಕ ಸೇವೆಗಳು (ಅನುಕಂಪದ ಆಧಾರದಲ್ಲಿ ನೇಮಕಾತಿ) ನಿಯಮಗಳು-1996′ ರಲ್ಲಿ ಅವಕಾಶವಿಲ್ಲ ಎಂಬ ಅಭಿಯೋಜನಾ ಇಲಾಖೆಯ ವಾದವನ್ನು ತಿರಸ್ಕರಿಸಿರುವ ಹೈಕೋರ್ಟ್‌ ವಿಭಾಗೀಯ ನ್ಯಾಯಪೀಠ, ಅಂತಿಮವಾಗಿ ಅನುಕಂಪದ ಉದ್ಯೋಗಕ್ಕಾಗಿ ಮೇಲ್ಮನವಿದಾರ ಗಿರೀಶ್‌ (ದತ್ತುಪುತ್ರ) ಸಲ್ಲಿಸಿರುವ ಅರ್ಜಿಯನ್ನು 12 ವಾರಗಳಲ್ಲಿ ಪರಿಗಣಿಸಬೇಕು ಎಂದು ಇಲಾಖೆಗೆ ಹೈಕೋರ್ಟ್‌ ನಿರ್ದೇಶಿಸಿದೆ.

ಮೃತ ವಿನಾಯಕ ಅವರು ಪತ್ನಿ, ಸ್ವಾಭಾವಿಕ ಪುತ್ರ ಮತ್ತು ಪುತ್ರಿ ಅವರನ್ನು ಹೊಂದಿದ್ದರು. ಅನುಕಂಪದ ಮೇಲೆ ಉದ್ಯೋಗ ನೀಡುವಾಗ ಅರ್ಜಿದಾರರ ಆರ್ಥಿಕ ಸಂಕಷ್ಟವನ್ನು ಪರಿಗಣಿಸಬೇಕಾಗುತ್ತದೆ. ಸ್ವಂತ ಪುತ್ರ ಮೃತಪಟ್ಟ ಕಾರಣಕ್ಕೆ ಮನೆಯ ಜವಾಬ್ದಾರಿ ನೋಡಿಕೊಳ್ಳಲು ಗಿರೀಶ್‌ ಅವರನ್ನು ವಿನಾಯಕ ದತ್ತು ಪಡೆದಿದ್ದಾರೆ. ಅವರ ಸ್ವಾಭಾವಿಕ ಮಗಳಿಗೆ ಅನುಕಂಪದ ಉದ್ಯೋಗ ನೀಡಬೇಕಾಗುತ್ತದೆ. ಆದರೆ, ಆಕೆ ದೈಹಿಕ ಹಾಗೂ ಮಾನಸಿಕ ವಿಕಲಚೇತನರಾಗಿದ್ದರೆ. ಇಂತಹ ಸಂದರ್ಭದಲ್ಲಿ ಮನೆ ಜವಾಬ್ದಾರಿ ಹೊತ್ತಿರುವ ದತ್ತುಪುತ್ರನಿಗೆ ಅನುಕಂಪದ ಉದ್ಯೋಗ ನೀಡಬೇಕಾಗುತ್ತದೆ. ಅನುಕಂಪದ ಉದ್ಯೋಗದ ನಿಯಮಗಳಿಗೆ ತಿದ್ದುಪಡಿ ತಂದಿರುವುದರಿಂದ, ದತ್ತು ಪುತ್ರ ಮತ್ತು ಸ್ವಾಭಾವಿಕ ಪುತ್ರ ನಡುವೆ ತಾರತಮ್ಯ ಮಾಡುವುದು ಸಂವಿಧಾನದ ಪರಿಚ್ಛೇಧ 14ರ (ಸಮಾನತೆಯ ಹಕ್ಕು) ಉಲ್ಲಂಘನೆಯಾಗಲಿದೆ ಎಂದು ಹೈಕೋರ್ಟ್‌ ಅಭಿಪ್ರಾಯಪಟ್ಟಿದೆ.

ಟಾಪ್ ನ್ಯೂಸ್

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.