ಪುನರಾವರ್ತಿತ ವಿದ್ಯಾರ್ಥಿಗಳಿಗೆ ರ್ಯಾಂಕ್ ಪಟ್ಟಿ ನೀಡಲು ಸಲಹೆ
Team Udayavani, Sep 8, 2022, 9:30 PM IST
ಸಾಂದರ್ಭಿಕ ಚಿತ್ರ
ಬೆಂಗಳೂರು: ಉನ್ನತ ಶಿಕ್ಷಣ ಸಚಿವ ಡಾ| ಸಿ.ಎನ್. ಅಶ್ವತ್ಥ ನಾರಾಯಣ ಹಾಗೂ ಕೆಇಎ ಕಾರ್ಯನಿರ್ವಾಹಕ ನಿರ್ದೇಶಕಿ ಎಸ್. ರಮ್ಯಾ ಅವರು ಸ್ವ ಪ್ರತಿಷ್ಠೆಯನ್ನು ಬದಿಗಿರಿಸಿ ಸಿಇಟಿ-2021ನೇ ಸಾಲಿನ ಪುನರಾವರ್ತಿತ ವಿದ್ಯಾರ್ಥಿಗಳನ್ನು ರ್ಯಾಂಕ್ ಪಟ್ಟಿಯಲ್ಲಿ ಪರಿಗಣಿಸಬೇಕೆಂದು ಸಿಇಟಿ ಕೇಂದ್ರದ ಮಾಜಿ ಅಧ್ಯಕ್ಷ ಬಲವೀರ ರೆಡ್ಡಿ ಸಲಹೆ ನೀಡಿದರು.
ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಿಇಟಿ ಫಲಿತಾಂಶ ಪ್ರಕಟವಾಗಿ 38 ದಿನಗಳಾಗಿವೆ. ಪುನರಾವರ್ತಿತ ವಿದ್ಯಾರ್ಥಿಗಳಿಗೆ ರ್ಯಾಂಕ್ ನೀಡುವ ವಿಚಾರವಾಗಿ ಸರಕಾರವು ನ್ಯಾಯಾಲಯಕ್ಕೆ ಮೇಲ್ಮನವಿ ಸಲ್ಲಿಸುವುದರಿಂದ ಆಕಾಂಕ್ಷಿಗಳಿಗೆ ಒಂದು ವರ್ಷದ ಶೈಕ್ಷಣಿಕ ವರ್ಷ ವ್ಯರ್ಥವಾಗಲಿದೆ ಎಂದರು.
ಹೈಕೋರ್ಟ್ನ ದ್ವಿಸದಸ್ಯ ಪೀಠ, ಅನಂತರ ಸುಪ್ರೀಂಕೋರ್ಟ್ ಹೀಗೆ ವಿಚಾರಣೆ ಮುಂದುವರಿದರೆ ಸಮಯ ವ್ಯರ್ಥವಾಗಲಿದೆ. ಆದ್ದರಿಂದ ಸದ್ಯ ಹೈಕೋರ್ಟ್ ನೀಡಿರುವ ತೀರ್ಪಿನಂತೆ ಪುನರಾವರ್ತಿತ ವಿದ್ಯಾರ್ಥಿಗಳಿಗೆ ನ್ಯಾಯ ಕಲ್ಪಿಸಬೇಕೆಂದು ಆಗ್ರಹಿಸಿದರು.
ಕೊರೊನಾ ಸಮಯದಲ್ಲಿ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಸರಕಾರವೇ ಪರೀಕ್ಷೆ ನಡೆಸುವುದಿಲ್ಲವೆಂದು ಹೇಳಿದೆ ಮತ್ತು ಹಿಂದಿನ ಶೈಕ್ಷಣಿಕ ವರ್ಷದಲ್ಲಿ ವಿದ್ಯಾರ್ಥಿಗಳು ಪಡೆದಿರುವ ಅಂಕದ ಆಧಾರದಲ್ಲಿ ದ್ವಿತೀಯ ಪಿಯುಸಿ ಅಂಕಪಟ್ಟಿ ನೀಡಿದೆ. ಈಗ ಸರಕಾರವೇ ಆ ಅಂಕಪಟ್ಟಿಯನ್ನು ಒಪ್ಪುವುದಿಲ್ಲವೆಂದಾದರೆ, ಮುಂದಿನ ದಿನಗಳಲ್ಲಿ ವೃತ್ತಿಪರ ಕೋರ್ಸ್ ಮುಗಿಸಿ ಕಾಲೇಜಿನಿಂದ ಹೊರ ಬರುವ ವಿದ್ಯಾರ್ಥಿಗಳಿಗೆ ಖಾಸಗಿ ಸಂಸ್ಥೆಗಳು ಉದ್ಯೋಗ ನೀಡದಿದ್ದರೆ ಪರಿಸ್ಥಿತಿ ಏನಾದೀತು ಎಂದು ಪ್ರಶ್ನಿಸಿದರು.
ಪುನರಾವರ್ತಿತ ವಿದ್ಯಾರ್ಥಿಗಳ ಪರವಾಗಿ ಹೋರಾಟ ಮಾಡುತ್ತಿರುವ ಗಿರೀಶ್ ಡಿ. ಕುಲಕರ್ಣಿ, ರತ್ನಾ ಗೌಡ, ರಾಜೇಂದ್ರ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು
China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ
ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ
Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ
Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ
MUST WATCH
ಹೊಸ ಸೇರ್ಪಡೆ
Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ
Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ
Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !
Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು
RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ