ವಕೀಲಿಕೆ ಮುಂದುವರಿಕೆ: ಮೊಯ್ಲಿ ಇಂಗಿತ
Team Udayavani, Jun 25, 2019, 3:05 AM IST
ಬೆಂಗಳೂರು: ವೃತ್ತಿಯಲ್ಲಿ ಮೂಲತಃ ವಕೀಲರಾಗಿರುವ ರಾಜ್ಯದ ಮಾಜಿ ಮುಖ್ಯಮಂತ್ರಿ ಹಾಗೂ ಮಾಜಿ ಕೇಂದ್ರ ಸಚಿವ ಎಂ. ವೀರಪ್ಪ ಮೊಯ್ಲಿ ಅವರು ಸೋಮವಾರ ಹೈಕೋರ್ಟ್ಗೆ ಬಂದಿದ್ದರು.
ಕೋರ್ಟ್ ಕಲಾಪಗಳು ಆರಂಭವಾಗುತ್ತಿದ್ದಂತೆ ಬೆಳಿಗ್ಗೆ 11 ಗಂಟೆ ವೇಳೆಗೆ ಕರಿ ಕೋಟು ಧರಿಸಿ ಹೈಕೋರ್ಟ್ಗೆ ಆಗಮಿಸಿದ ಮೊಯ್ಲಿಯವರು ಕಾರಿಡಾರ್ನಲ್ಲಿ ಪರಿಚಯಸ್ಥ ವಕೀಲರನ್ನು ಭೇಟಿಯಾಗಿ ಲೋಕಾಭಿರಾಮವಾಗಿ ಮಾತನಾಡಿಸಿದರು.
ಇದೇ ವೇಳೆ ಮಾಜಿ ಅಡ್ವೋಕೇಟ್ ಜನರಲ್ ಬಿ.ವಿ. ಆಚಾರ್ಯ, ಹಿರಿಯ ವಕೀಲರಾದ ಡಿಎಲ್ಎನ್ ರಾವ್, ರವೀಂದ್ರನಾಥ್ ಕಾಮತ್, ಕಲ್ಯಾಣ ಬಸವರಾಜ್ ಸೇರಿದಂತೆ ಹಿರಿಯ-ಕಿರಿಯ ವಕೀಲರನ್ನು ಭೇಟಿಯಾಗಿ ಕೆಲ ಹೊತ್ತು ಮಾತನಾಡಿದ ಬಳಿಕ ಎಲ್ಲರೊಟ್ಟಿಗೆ ಚಹಾ ಕುಡಿದು ಅಲ್ಲಿಂದ ನಿರ್ಗಮಿಸಿದರು.
ಈ ಸಂದರ್ಭದಲ್ಲಿ ಅನೌಪಚಾರಿಕವಾಗಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಾನು ಮೂಲತಃ ವಕೀಲ. ಆದರೆ, ರಾಜಕೀಯದಲ್ಲಿ ಸಕ್ರೀಯವಾದ ಬಳಿಕ ವಕೀಲಿಕೆ ನಡೆಸಲು ಸಾಧ್ಯವಾಗಿರಲಿಲ್ಲ. ಆಗಾಗ ಕೋರ್ಟ್ಗೆ ಬಂದು ಹೋಗುತ್ತಿದೆ. ಈಗ ರಾಜಕೀಯದಲ್ಲಿ ಒಂದಿಷ್ಟು ಬಿಡುವು ಸಿಕ್ಕಿದ್ದು ವಕೀಲ ವೃತ್ತಿ ಮುಂದುವರಿಸುತ್ತೇನೆ. ಆಗಾಗ ಹೈಕೋರ್ಟ್ಗೆ ಬರುತ್ತಿರುತ್ತೇನೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…
Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ
MUST WATCH
ಹೊಸ ಸೇರ್ಪಡೆ
Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ
ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ