ವೈಮಾನಿಕ ಪರೀಕ್ಷಾ ಕೇಂದ್ರ ಇಂದು ಲೋಕಾರ್ಪಣೆ


Team Udayavani, May 28, 2017, 10:11 AM IST

jetly.jpg

ನಾಯಕನಹಟ್ಟಿ: ಕುದಾಪುರ ಸಮೀಪದಲ್ಲಿರುವ ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆಯ (ಡಿಆರ್‌ಡಿಒ)
ಆವರಣದಲ್ಲಿ ನೂತನವಾಗಿ ನಿರ್ಮಿಸಲಾಗಿರುವ ವೈಮಾನಿಕ ಪರೀಕ್ಷಾ ಕೇಂದ್ರ ಭಾನುವಾರ ಲೋಕಾರ್ಪಣೆಗೊಳ್ಳಲಿದೆ.
ಸಂಶೋಧನಾ ಕ್ಷೇತ್ರದಲ್ಲಿ ಈಗಾಗಲೇ ರುಸ್ತುಂ-1 ಹಾಗೂ ರುಸ್ತುಂ-2 ಡ್ರೋಣ್‌ ಮಾದರಿಯ ಲಘುವಿಮಾನಗಳ
ಪ್ರಯೋಗಾರ್ಥ ಹಾರಾಟ ಇಲ್ಲಿ ಯಶಸ್ವಿಯಾಗಿದೆ. 6 ತಿಂಗಳ ಹಿಂದೆ ವೈಮಾನಿಕ ಕೇಂದ್ರದ ಉದ್ಘಾಟನೆಯನ್ನು
ನೆರವೇರಿಸಬೇಕಾಗಿತ್ತು. ಆದರೆ, ಪಂಚರಾಜ್ಯಗಳ ಚುನಾವಣೆ ಹಿನ್ನೆಲೆಯಲ್ಲಿ ಕಾರ್ಯಕ್ರಮವನ್ನು ಮುಂದೂಡಲಾಗಿತ್ತು.
ಅಂದಿನ ರಕ್ಷಣಾ ಸಚಿವ ಮನೋಹರ್‌ ಪರಿಕ್ಕರ್‌ ಉದ್ಘಾಟನೆ ನೆರವೇರಿಸಲು ಒಪ್ಪಿಗೆ ಸೂಚಿಸಿದ್ದರು. ಆದರೆ, ಬದಲಾದ
ರಾಜಕೀಯ ಪರಿಸ್ಥಿತಿಯಿಂದಾಗಿ ಅವರು ಗೋವಾ ಮುಖ್ಯಮಂತ್ರಿಯಾದರು. ಹೀಗಾಗಿ ಉದ್ಘಾಟನೆ ನನೆಗುದಿಗೆ ಬಿದ್ದಿತ್ತು. ಎರಡು ಬಾರಿ ಸಂಶೋಧನಾ ಕೇಂದ್ರದ ಉದ್ಘಾಟನೆ ಮುಂದೂಡಲಾಗಿತ್ತು. ಇದೀಗ ಅದಕ್ಕೆ ಕಾಲ ಕೂಡಿ ಬಂದಿದೆ.

200 ಎಕರೆ ಪ್ರದೇಶದಲ್ಲಿ ಸಿಬ್ಬಂದಿ ವಸತಿ ಗೃಹಗಳ ನಿರ್ಮಾಣ:
ವರವು ಹಾಗೂ ಕುದಾಪುರ ಕಾವಲು ಪ್ರದೇಶದಲ್ಲಿ ಡಿಆರ್‌ಡಿಒಗೆ 4200 ಎಕರೆ ಜಾಗ ನೀಡಲಾಗಿದೆ. ಇದರಲ್ಲಿ 4 ಸಾವಿರ
ಎಕರೆ ಪ್ರದೇಶವನ್ನು ಸಂಶೋಧನಾ ಕ್ಷೇತ್ರಕ್ಕೆ ಅಗತ್ಯವಿರುವ ಕಟ್ಟಡ ಹಾಗೂ ಇತರ ಕಾರ್ಯಗಳಿಗೆ ಮೀಸಲಿಡಲಾಗಿದೆ.
ಇನ್ನುಳಿದ 200 ಎಕರೆಯನ್ನು ಸಿಬ್ಬಂದಿ ನಿವಾಸ ಹಾಗೂ ಸಾರ್ವಜನಿಕರ ಬಳಕೆಗೆ ಕಾಯ್ದಿರಿಸಲಾಗಿದೆ. ಸಂಶೋಧನಾ
ಪ್ರದೇಶದ ಸುತ್ತ 20 ಕಿಮೀ ಉದ್ದದ ಕಾಂಪೌಂಡ್‌ ಹಾಗೂ ಪ್ರತಿ ಒಂದು ಕಿಮೀ ದೂರದಲ್ಲಿ ವೀಕ್ಷಣಾ ಗೋಪುರಗಳನ್ನು
ನಿರ್ಮಿಸಲಾಗಿದೆ. ಅಂತಾರಾಷ್ಟ್ರೀಯ ಗುಣಮಟ್ಟದ 3.5 ಕಿಮೀ ರನ್‌ವೇ ನಿರ್ಮಾಣಗೊಂಡಿದೆ. ವಿಮಾನಗಳ
ನಿರ್ವಹಣೆಗಾಗಿ ಎರಡು ಹ್ಯಾಂಗರ್‌, ವಿಮಾನಗಳ ಹಾರಾಟ ನಿಯಂತ್ರಣಕ್ಕಾಗಿ ವಾಯು ನಿಯಂತ್ರಣ ಕೇಂದ್ರ (ಎಟಿಸಿ) ನಿರ್ಮಿಸಲಾಗಿದೆ. ಇವುಗಳ ಜತೆಗೆ ರಾಡಾರ್‌ ಕೇಂದ್ರವನ್ನೂ ಸ್ಥಾಪಿಸಲಾಗಿದೆ. ಸಂಶೋಧನಾ ಕ್ಷೇತ್ರವನ್ನು ಸಂಪೂರ್ಣವಾಗಿ ರಕ್ಷಣಾ ಪಡೆಗಳಿಗೆ ವಹಿಸಲಾಗಿದೆ. ಹೀಗಾಗಿ ಇಲ್ಲಿ ಹೊರಗಿನವರಿಗೆ ಪ್ರವೇಶ ನಿಷೇಧಿಸಲಾಗಿದೆ.
ಸಾವಿರಾರು ಎಕರೆ ಪ್ರದೇಶದಲ್ಲಿ ಅತ್ಯಾಧುನಿಕ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ ಇಲ್ಲಿ ತಲೆ ಎತ್ತಿದೆ.

ಈಗಾಗಲೇ ಸಂಶೋಧನಾ ಪ್ರದೇಶದಲ್ಲಿರುವ ಎಲ್ಲ ಕಾಮಗಾರಿಗಳೂ ಪೂರ್ಣಗೊಂಡಿವೆ. ಅತ್ಯಾಧುನಿಕ ತಂತ್ರಜ್ಞಾನ ಬಳಕೆ: 200 ಎಕರೆ ಪ್ರದೇಶದಲ್ಲಿ ಸಿಬ್ಬಂದಿಗಳಿಗೆ ಮನೆಗಳನ್ನು ನಿರ್ಮಾಣ ಮಾಡಲಾಗುತ್ತಿದೆ. ಸುಮಾರು 100 ವಿಜ್ಞಾನಿಗಳಿಗೆ, 350 ಸೈನಿಕರಿಗೆ ತಂಗಲು ಅವಶ್ಯಕವಾದ ಸೌಲಭ್ಯಗಳನ್ನು ಒದಗಿಸಲಾಗುತ್ತಿದೆ. ರಕ್ಷಣಾ ಪಡೆ ಸಿಬ್ಬಂದಿಗೆ ಪ್ರತ್ಯೇಕ ವಸತಿಗೃಹಗಳಿವೆ. ಇಲ್ಲಿ ಸಂಶೋಧನೆ ಕೈಗೊಳ್ಳುವ ವಿಜ್ಞಾನಿಗಳಿಗೆ ಎರಡು ಬೃಹತ್‌
ವಸತಿಗೃಹಗಳು ಹಾಗೂ ರೆಸ್ಟೋರೆಂಟ್‌ ನಿರ್ಮಿಸಲಾಗಿದೆ. ಹಿರಿಯ ಹಾಗೂ ಕಿರಿಯ ವಿಜ್ಞಾನಿಗಳಿಗೆ ಅತ್ಯಾಧುನಿಕ
ತಂತ್ರಜ್ಞಾನದ ನಿವಾಸ ನಿರ್ಮಿಸಿರುವುದು ವಿಶೇಷ.

ಜೇಟ್ಲಿಯಿಂದ ಉದ್ಘಾಟನೆ
ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ತಾಲೂಕಿನ ನಾಯಕನಹಟ್ಟಿ ಬಳಿ ತಲೆ ಎತ್ತಿರುವ ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ
ಸಂಸ್ಥೆಯ ವೈಮಾನಿಕ ಪರೀûಾ ಕೇಂದ್ರದ ಉದ್ಘಾಟನೆಯನ್ನು ಕೇಂದ್ರ ರಕ್ಷಣೆ ಮತ್ತು ಹಣಕಾಸು ಸಚಿವ ಅರುಣ್‌ ಜೇಟ್ಲಿ ಭಾನುವಾರ ನೆರವೇರಿಸಲಿದ್ದಾರೆ. 4200 ಎಕರೆ ಪ್ರದೇಶದಲ್ಲಿ ವೈಮಾನಿಕ ಏರೋನಾಟಿಕಲ್‌ ಟೆಸ್ಟ್‌ ರೇಂಜ್‌ನಲ್ಲಿ 3.5 ಕಿಮೀ ಉದ್ದದ ರನ್‌ ವೇ, ಇಡೀ ಪ್ರದೇಶದ ವಾಯುಯಾನವನ್ನು ನಿಯಂತ್ರಿಸುವ ವ್ಯಾಪ್ತಿ ನಿಯಂತ್ರಣ ಕೇಂದ್ರ (ಆರ್‌ಸಿಸಿ), ವಿಮಾನದ ದುರಸ್ತಿ ಕಾರ್ಯ ನಡೆಸುವ ಎರಡು ಹ್ಯಾಂಗರ್‌ಗಳು ಹಾಗೂ ರಾಡಾರ್‌ ಕೇಂದ್ರಗಳು
ಇಲ್ಲಿವೆ. ಇವೆಲ್ಲವೂ ರಕ್ಷಣಾ ಇಲಾಖೆಗೆ ಭಾನುವಾರ ಸಮರ್ಪಣೆಯಾಗಲಿವೆ. ಸಂಜೆ 5 ಗಂಟೆಗೆ ರಕ್ಷಣಾ ಸಚಿವರು ಬೆಂಗಳೂರಿನಿಂದ ರಕ್ಷಣಾ ಪಡೆಯ ಹೆಲಿಕಾಪ್ಟರ್‌ ಮೂಲಕ ಇಲ್ಲಿನ ವೈಮಾನಿಕ ನೆಲೆಗೆ ಆಗಮಿಸಲಿದ್ದಾರೆ. 

ಟಾಪ್ ನ್ಯೂಸ್

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್‌

Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

ನಾರಿಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ

Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್‌ ನೀಚ ಕೃತ್ಯ

Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್‌ ನೀಚ ಕೃತ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.