ದಸರಾ ಬಳಿಕ ಎಲ್ಲ ತರಗತಿಯವರಿಗೂ ಬಿಸಿಯೂಟ
ಸಿದ್ಧತೆ ಆರಂಭ; ಸದ್ಯದಲ್ಲೇ ಸರಕಾರದಿಂದ ನಿರ್ಧಾರ ಪ್ರಕಟ?
Team Udayavani, Oct 5, 2021, 7:10 AM IST
ಬೆಂಗಳೂರು: ದಸರಾ ರಜೆ ಬಳಿಕ 1ರಿಂದ 5ನೇ ತರಗತಿ ವಿದ್ಯಾರ್ಥಿಗಳಿಗೂ ಭೌತಿಕ ತರಗತಿ ಆರಂಭದ ಜತೆಗೆ 1ರಿಂದ 10ನೇ ತರಗತಿ ವರೆಗಿನ ಎಲ್ಲ ವಿದ್ಯಾರ್ಥಿಗಳಿಗೆ ಬಿಸಿಯೂಟ ಸಿಗಲಿದೆ.
ಅ. 10ರಿಂದ ಅ. 20ರ ವರೆಗೆ ದಸರಾ ರಜೆ ಇರಲಿದೆ. ಈಗಾಗಲೇ ಸರಕಾರ 6ರಿಂದ 12ನೇ ತರಗತಿ ವಿದ್ಯಾರ್ಥಿಗಳಿಗೆ ಪೂರ್ಣ ಪ್ರಮಾಣದಲ್ಲಿ ತರಗತಿ ಆರಂಭಿಸಿದೆ. ಆದರೆ ಬಿಸಿಯೂಟ ಆರಂಭಿಸಿಲ್ಲ. ದಸರಾ ರಜೆ ಮುಗಿಯುತ್ತಿದ್ದಂತೆ 1ರಿಂದ 5ನೇ ವಿದ್ಯಾರ್ಥಿಗಳಿಗೆ ಭೌತಿಕ ತರಗತಿಯ ಜತೆಗೆ ಎಲ್ಲ ವಿದ್ಯಾರ್ಥಿಗಳಿಗೂ ಬಿಸಿಯೂಟ ನೀಡಲಾಗುತ್ತದೆ.
ಈಗ ಕೋವಿಡ್ ಕಡಿಮೆಯಾಗುವ ಜತೆಗೆ 3ನೇ ಅಲೆಯ ಆತಂಕ ಕ್ಷೀಣಿಸಿರುವುದರಿಂದ ಶಾಲೆಗಳಲ್ಲಿ ಭೌತಿಕ ತರಗತಿ ಆರಂಭದ ಜತೆಗೆ ಬಿಸಿಯೂಟ ನೀಡಲು ಸರಕಾರ ನಿರ್ಧರಿಸಿದೆ.
ಶಾಲೆಗಳಿಗೆ ಸೂಚನೆ
ಈಗಾಗಲೇ ನೀಡಿರುವ ಎಸ್ಒಪಿಯನ್ನು ಪಾಲಿಸಿ ಬಿಸಿಯೂಟ ನೀಡಬೇಕಿದೆ. ಇದಕ್ಕೆ ಬೇಕಾದ ಸಿದ್ಧತೆಯನ್ನು ಈಗಿನಿಂದಲೇ ಆರಂಭಿಸಿಕೊಳ್ಳಬೇಕು. ಬಿಸಿಯೂಟ ಸಿದ್ಧ ಪಡಿಸುವ ಕೊಠಡಿಯ ಸ್ವಚ್ಛತೆ, ಬಿಸಿಯೂಟ ವಿತರಣೆಗೆ ಬೇಕಾದ ವ್ಯವಸ್ಥೆ ಸಹಿತ ಎಲ್ಲವನ್ನೂ ಸಮರ್ಪಕವಾಗಿ ಸಿದ್ಧಪಡಿಸಿಕೊಳ್ಳುವಂತೆ ಶಾಲೆಗಳಿಗೆ ಸೂಚನೆ ನೀಡಲಾಗಿದೆ ಎಂದು ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಮಾಹಿತಿ ನೀಡಿದರು.
ತರಗತಿ ಆರಂಭದ ಜತೆಗೆ ಬಿಸಿಯೂಟ ಒದಗಿಸುವಂತೆ ಮಾಜಿ ಸಚಿವ ಸುರೇಶ್ ಕುಮಾರ್ ಅವರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Mangaluru: ಶರಣಾಗುವ ನಕ್ಸಲರಿಗೆ ಸಿಗಲಿದೆ 7.50 ಲ.ರೂ. ಪ್ರೋತ್ಸಾಹಧನ
Belthangady: ತುಮಕೂರು ತ್ರಿಬ್ಬಲ್ ಮರ್ಡರ್ ಪ್ರಕರಣ;ಮನೆಮಂದಿಗೆ ಇಂದು ತಲುಪಿದ ಮೃತದೇಹ
Mukhtar Ansari: ಕುಖ್ಯಾತ ಗ್ಯಾಂಗ್ಸ್ಟರ್, 5 ಬಾರಿ ಶಾಸಕ ಅನ್ಸಾರಿ ಸಾವು
Horoscope: ಉದ್ಯೋಗ ಸ್ಥಾನದಲ್ಲಿ ಮೇಲಿನವರಿಂದ ಶ್ಲಾಘನೆ, ಮಹಿಳಾ ಉದ್ಯಮಿಗಳಿಗೆ ಯಶಸ್ಸು
ಸಂಸದ ಡಿ.ಕೆ.ಸುರೇಶ್ ಆಸ್ತಿ ಮೌಲ್ಯ 593 ಕೋಟಿ ರೂ.!