ನೂತನ ಮರಳು ನೀತಿಗೆ ಒಪ್ಪಿಗೆ
Team Udayavani, May 1, 2020, 5:55 AM IST
ಬೆಂಗಳೂರು: ಪಟ್ಟಾ ಭೂಮಿ, ಕೆರೆ, ಗ್ರಾಮೀಣ ಭಾಗದ ಹಳ್ಳ ಪ್ರದೇಶಗಳಲ್ಲಿ ಮರಳು ತೆಗೆಯಲು ಅವಕಾಶ ಕೊಡುವ ನೂತನ ಮರಳು ನೀತಿಗೆ ರಾಜ್ಯ ಸಚಿವ ಸಂಪುಟ ಒಪ್ಪಿಗೆ ನೀಡಿದೆ.
ಆಯಾ ತಾಲೂಕಿನಲ್ಲಿ ದಂಡಾಧಿಕಾರಿಗಳಾಗಿರುವ ತಹಶೀಲ್ದಾರ್ ಮತ್ತು ಸಹಾಯಕ ಕಾರ್ಯಪಾಲಕ ಅಭಿಯಂತರರು ಮರಳು ತೆಗೆಯುವ ಪ್ರದೇಶ ಗುರುತಿಸಿ ಗ್ರಾಮ ಪಂಚಾಯತ್ ಒಪ್ಪಿಗೆಯೊಂದಿಗೆ ಅನುಮತಿ ನೀಡಲಿದ್ದಾರೆ.
ಸ್ಥಳೀಯವಾಗಿ ಜನತಾ ಮನೆ, ಸಣ್ಣ ಪುಟ್ಟ ಕಾಮಗಾರಿಗೆ ಮರಳು ಬಳಸಬಹುದು. ಪ್ರತಿ ಮೆಟ್ರಿಕ್ ಟನ್ಗೆ 700 ರೂ.ವರೆಗೆ ಬೆಲೆ ನಿಗದಿ ಮಾಡಲಾಗುವುದು. ಬೆಲೆ ನಿಗದಿಯಲ್ಲೂ ದಂಡಾಧಿಕಾರಿಗಳಿಗೆ ಅಧಿಕಾರ ಇರಲಿದೆ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಜೆ.ಸಿ.ಮಾಧುಸ್ವಾಮಿ ತಿಳಿಸಿದ್ದಾರೆ.
ಸಚಿವ ಸಂಪುಟ ಸಭೆಯ ಅನಂತರ ಮಾತನಾಡಿ, ಇಷ್ಟು ದಿನ ನದಿ ಪಾತ್ರಗಳಲ್ಲಿ ಕೆಲವು ಮರಳು ಬ್ಲಾಕ್ ಗುರುತಿಸಿ ಹರಾಜು ಹಾಕಲು ಅವಕಾಶವಿತ್ತು. ಇದೀಗ ಪಟ್ಟಾಭೂಮಿ, ಕೆರೆ, ಗ್ರಾಮೀಣ ಭಾಗದ ಹಳ್ಳ, ತಗ್ಗು ಪ್ರದೇಶಗಳಲ್ಲೂ ಮರಳು ತೆಗೆಯಲು ಅವಕಾಶ ಕೊಡಲಾಗಿದೆ. ಇದರಿಂದ ಅಕ್ರಮ ಮರಳು ದಂಧೆಗೂ ಕಡಿವಾಣ ಬೀಳಲಿದೆ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…
MUST WATCH
ಹೊಸ ಸೇರ್ಪಡೆ
T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?
ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ
ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ
ಕೊಡಪಾಡಿ: ಮೃತ ವ್ಯಕ್ತಿಯ ಹೆಸರಲ್ಲಿ ನಕಲಿ ಸಹಿ ಬಳಸಿ ಪವರ್ ಆಫ್ ಅಟಾರ್ನಿ, ದೂರು ದಾಖಲು
IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್