ಜನವರಿಯಲ್ಲಿ ಬೆಂಗಳೂರಲ್ಲಿ ಎಐಸಿಸಿ ಮಹಾಧಿವೇಶನ?
Team Udayavani, Oct 21, 2017, 9:46 AM IST
ಬೆಂಗಳೂರು: ಮುಂದಿನ ಜನವರಿಯಲ್ಲಿ ಬೆಂಗಳೂರಿನಲ್ಲಿ ಎಐಸಿಸಿ ಮಹಾ ಅಧಿವೇಶನ ನಡೆಸುವ ಸಂಬಂಧ ನವೆಂಬರ್ 5 ರಂದು ದೆಹಲಿಯಲ್ಲಿ ನಡೆಯಲಿರುವ ಎಐಸಿಸಿ ಕಾರ್ಯಕಾರಿ ಸಮಿತಿ (ಸಿಡಬ್ಲೂಸಿ) ಸಭೆಯಲ್ಲಿ ನಿರ್ಧಾರವಾ ಗುವ ಸಾಧ್ಯತೆಯಿದೆ. ನ.5 ರಂದು ಎಐಸಿಸಿ ಕಾರ್ಯಕಾರಿ ಸಮಿತಿ ಸಭೆ ನಡೆಯಲಿದ್ದು, ಎಐಸಿಸಿ ಮಹಾ ಅಧಿವೇಶನ ವಿಷಯ ಅಂದಿನ ಅಜೆಂಡಾದಲ್ಲಿ ಸೇರಿದೆ.
ಈಗಾಗಲೇ ಹಿಮಾಚಲ ಪ್ರದೇಶ ಚುನಾವಣೆ ಘೋಷಣೆ ಆಗಿರುವುದರಿಂದ ಗುಜರಾತ್ ಚುನಾವಣೆಯೂ ಅದೇ ಅವಧಿಯಲ್ಲಿ ನಡೆಯುವ ಸಾಧ್ಯತೆ ಇದ್ದು, ಎರಡೂ ರಾಜ್ಯಗಳ ಚುನಾವಣೆ ಮುಗಿದ ನಂತರ ಎಐಸಿಸಿ ಮಹಾ ಅಧಿವೇಶನ ನಡೆಸುವ ಸಾಧ್ಯತೆ ಇದೆ. ಎಐಸಿಸಿ ಒಂದು ದಿನದ ಅಧಿವೇಶನ ವನ್ನು ಪಂಜಾಬ್ ಅಥವಾ ದೆಹಲಿಯಲ್ಲಿ ನಡೆಸಲಿದ್ದು, ಜನವರಿಯಲ್ಲಿ ಮೂರು ಮಹಾಧಿವೇಶನವನ್ನು ಕರ್ನಾಟಕದಲ್ಲಿ ನಡೆಸುವ ಸಾಧ್ಯತೆ ಇದೆ. ಮುಂದಿನ ವರ್ಷ ಕರ್ನಾಟಕ ವಿಧಾನಸಭೆಗೆ ಚುನಾವಣೆ ನಡೆಯುವುದರಿಂದ ರಾಜ್ಯದಲ್ಲಿ ಎಐಸಿಸಿ ಮಹಾಧಿವೇಶನ ನಡೆಸಬೇಕೆಂಬ ಇಚ್ಛೆಯನ್ನು ಈಗಾಗಲೇ ಕೆಪಿಸಿಸಿ ಹೈಕಮಾಂಡ್ಗೆ ಮನವಿ ಮಾಡಿಕೊಂಡಿದ್ದು, ಹೈಕಮಾಂಡ್ ಕೂಡ ಈ ಬಗ್ಗೆ ಸಕಾರಾತ್ಮಕವಾಗಿ ಸ್ಪಂದಿಸಿದೆ ಎಂದು ಹೇಳಲಾಗುತ್ತಿದೆ.
ನವೆಂಬರ್ನಲ್ಲಿ ರಾಹುಲ್ ಗಾಂಧಿ ರಾಜ್ಯ ಪ್ರವಾಸ
ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿ ನವೆಂಬರ್ 19 ರಿಂದ ಮೂರು ದಿನ ರಾಜ್ಯ ಪ್ರವಾಸ ಕೈಗೊಳ್ಳಲಿದ್ದು, ರಾಜ್ಯ ಕಾಂಗ್ರೆಸ್ ಆಯೋಜಿಸಿರುವ ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲಿದ್ದಾರೆ. ನವೆಂಬರ್ 19 ರಂದು ಚಿಕ್ಕಮಗಳೂರಿನಲ್ಲಿ ಮಾಜಿ ಪ್ರಧಾನಿ ಇಂದಿರಾಗಾಂಧಿ ಜನ್ಮ ಶತಮಾನೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ಆ ನಂತರ ನ. 20ರಂದು ಶಿವಮೊಗ್ಗದಲ್ಲಿ ಕಾಂಗ್ರೆಸ್ ಸಮಾವೇಶ ಹಮ್ಮಿಕೊಳ್ಳಲು ನಿರ್ಧರಿಸಲಾಗಿದೆ. ಆದರೆ, ಸಮಾವೇಶಕ್ಕೆ ರಾಹುಲ್ಗಾಂಧಿ ಇನ್ನೂ ಅಧಿಕೃತ ಒಪ್ಪಿಗೆ ಸೂಚಿಸಿಲ್ಲ ಎಂದು ತಿಳಿದು ಬಂದಿದೆ. ನ.21 ರಂದು ಉತ್ತರ ಕನ್ನಡ ಜಿಲ್ಲೆಯ ಕುಮಟಾದಲ್ಲಿ ಮೀನುಗಾರರ ಬೃಹತ್ ಸಮಾವೇಶ
ಏರ್ಪಡಿಸಲಾಗಿದ್ದು, ಅಂದಿನ ಸಮಾವೇಶದಲ್ಲಿ ರಾಹುಲ್ ಗಾಂಧಿ ಭಾಗವಹಿಸಲಿದ್ದಾರೆ ಎಂದು ಕೆಪಿಸಿಸಿ ಮೂಲಗಳು ತಿಳಿಸಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ