ಏರೋ ಇಂಡಿಯಾಕ್ಕೆ ಸೂರ್ಯ ಗ್ರಹಣ 


Team Udayavani, Feb 20, 2019, 12:30 AM IST

20.jpg

ಬೆಂಗಳೂರು: ಏಷ್ಯಾದ ಅತಿದೊಡ್ಡ ವೈಮಾನಿಕ ಪ್ರದರ್ಶನ “ಏರೋ ಇಂಡಿಯಾ ಶೋ-2019’ಕ್ಕೆ ಒಂದು ದಿನ ಬಾಕಿ ಇರುವಾಗಲೇ ಪ್ರದರ್ಶನದ ಪ್ರಮುಖ ಆಕರ್ಷಣೆಗಳಲ್ಲೊಂದಾದ “ಸೂರ್ಯಕಿರಣ’ ಏರೋಬಾಟಿಕ್‌ ತಂಡದ ಎರಡು ಯುದ್ಧವಿಮಾನಗಳು ತಾಲೀಮು ನಡೆಸುವ ವೇಳೆ ಪರಸ್ಪರ ಢಿಕ್ಕಿ ಹೊಡೆದು ಧರೆಗುರುಳಿದ ಘಟನೆ ಮಂಗಳವಾರ ಯಲಹಂಕ ವಾಯುನೆಲೆ ಸಮೀಪ ನಡೆದಿದೆ. ಪರಿಣಾಮ ಓರ್ವ ಪೈಲಟ್‌ ಸಾವನ್ನಪ್ಪಿದ್ದು, ಮತ್ತಿಬ್ಬರು ಗಾಯಗೊಂಡಿದ್ದಾರೆ. ವಿಂಗ್‌ ಕಮಾಂಡರ್‌ ಸಾಹಿಲ್‌ ಗಾಂಧಿ ಘಟನೆಯಲ್ಲಿ ಮೃತಪಟ್ಟಿದ್ದು, ವಿಂಗ್‌ ಕಮಾಂಡರ್‌ ವಿ.ಟಿ. ಶೆಳ್ಕೆ ಮತ್ತು ಸ್ಕ್ವಾಡ್ರನ್‌ ಲೀಡರ್‌ ಟಿ.ಜೆ. ಸಿಂಗ್‌ ಗಾಯಗೊಂಡಿದ್ದಾರೆ. 

ಮಿರರ್‌ ಇಮೇಜ್‌ ಕಸರತ್ತು

ಬೆಳಗ್ಗೆ  ವಾಯುನೆಲೆಯಿಂದ ಎಂದಿನಂತೆ ಆಗಸಕ್ಕೆ ಚಿಮ್ಮಿದ ಒಂಬತ್ತು ವಿಮಾನಗಳು ಬಾನಂಗಳದಲ್ಲಿ ಚಿತ್ತಾರ ಮೂಡಿಸುತ್ತಿದ್ದವು. 11.15ರ ಸುಮಾರಿಗೆ ಮಿರರ್‌ ಇಮೇಜ್‌ ರೀತಿ ಕಸರತ್ತು ನಡೆಸುವಾಗ ಎರಡು ವಿಮಾನಗಳ ರೆಕ್ಕೆಗಳು ಆಕಸ್ಮಿಕವಾಗಿ ತಗುಲಿವೆ. ಇದರ ರಭಸಕ್ಕೆ ರೆಕ್ಕೆಗಳು ತುಂಡಾಗಿ ಕೆಳಗೆ ಬಿದ್ದಿದ್ದು, ಎರಡೂ ವಿಮಾನಗಳು ಹತ್ತಿರದ ಇಸ್ರೋ ಲೇಔಟ್‌ನ ಖಾಲಿ ಜಾಗಕ್ಕೆ ಅಪ್ಪಳಿಸಿವೆ. ಇದರ ರಭಸಕ್ಕೆ ವಿಮಾನದ ಅವಶೇಷಗಳು ಅರ್ಧ ಕಿ.ಮೀ. ವ್ಯಾಪ್ತಿಯಲ್ಲಿ ಚೆಲ್ಲಾಪಿಲ್ಲಿಯಾಗಿ ಬಿದ್ದಿವೆ. ವಾಯುನೆಲೆಯಿಂದ ಐದು ಕಿ.ಮೀ. ದೂರದಲ್ಲಿ ಹಾರಾಟ ನಡೆಸುವಾಗ ಈ ಘಟನೆ ಸಂಭವಿಸಿದೆ ಎಂದು ಮೂಲಗಳು ತಿಳಿಸಿವೆ. 

ಏರ್‌ ಶೋದಲ್ಲಿ  ಮೊದಲ ಅವಘಡ
ವೈಮಾನಿಕ ಪ್ರದರ್ಶನದ ವೇಳೆ ದೇಶೀಯ ತಂಡದ ವಿಮಾನ ಪತನ ಹಾಗೂ ಅದರಲ್ಲಿ ಸಾವು ಸಂಭವಿಸಿದ ಮೊದಲ ಘಟನೆ ಇದಾಗಿದೆ. 2015ರಲ್ಲಿ “ರೆಡ್‌ಬುಲ್‌’ ಏರೋಬಾಟಿಕ್‌ ತಂಡದ ವಿಮಾನಗಳ ರೆಕ್ಕೆಗಳು ಪರಸ್ಪರ ತಗಲಿದ್ದವು. ಆದರೆ ಯಾವುದೇ ಅನಾಹುತ ಸಂಭವಿಸಿರಲಿಲ್ಲ. 

ಸೂರ್ಯ ಕಿರಣ ಪ್ರದರ್ಶನ ಇಲ್ಲ
ಅವಘಡದ ಹಿನ್ನೆಲೆಯಲ್ಲಿ ಮೊದಲ ದಿನದ ಸೂರ್ಯಕಿರಣ ಪ್ರದರ್ಶನ ರದ್ದು ಮಾಡಲಾಗಿದೆ. ಉಳಿದ ನಾಲ್ಕು ದಿನವೂ ಅನುಮಾನ ಎಂದು ಏರ್‌ ಮಾರ್ಷಲ್‌ ರಾಕೇಶ್‌ ಕುಮಾರ್‌ ಸಿಂಗ್‌ ಬಡೋರಿಯಾ ಹೇಳಿದ್ದಾರೆ.

ಪ್ಯಾರಾಚೂಟ್‌ನಿಂದ ಹಾರಿದರು
“ಸೂರ್ಯ ಕಿರಣ’ದ ಎರಡು ವಿಮಾನಗಳು ದುರಂತಕ್ಕೀಡಾಗುತ್ತಿದ್ದಂತೆ ಅದರಲ್ಲಿದ್ದ ವಿಂಗ್‌ ಕಮಾಂಡರ್‌ ಹಾಗೂ ಸ್ಕ್ವಾಡ್ರನ್‌ ಲೀಡರ್‌ ಸೇರಿ ಮೂವರೂ ಪ್ಯಾರಾಚೂಟ್‌ ಮೂಲಕ ಹೊರಕ್ಕೆ ಹಾರಿದ್ದಾರೆ. ಆದರೆ, ಆ ಪೈಕಿ ಒಂದು ಪ್ಯಾರಾಚೂಟ್‌ ತೆರೆದುಕೊಳ್ಳಲೇ ಇಲ್ಲ. ಸಾಹಿಲ್‌ ಗಾಂಧಿ ಅವರ ಪ್ಯಾರಚೂಟ್‌ ತೆರೆದುಕೊಳ್ಳದಿರುವುದರಿಂದ ನೆಲಕ್ಕೆ ಬಿದ್ದು ತೀವ್ರ ಗಾಯಗೊಂಡು, ಸಾವನ್ನಪ್ಪಿದರು. ಉಳಿದಿಬ್ಬರ ಪ್ಯಾರಚೂಟ್‌ಗಳು ತೆರೆದುಕೊಂಡಿದ್ದರಿಂದ ಅದೃಷ್ಟವಶಾತ್‌ ಬದುಕುಳಿದರು. ಈ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ  ಹರಿದಾಡುತ್ತಿದೆ.

ಟಾಪ್ ನ್ಯೂಸ್

Salman Khan: ನಟ ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ; ಇಬ್ಬರ ಬಂಧನ

Salman Khan: ನಟ ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ; ಇಬ್ಬರ ಬಂಧನ

RCBsvSRH; ಚಿನ್ನಸ್ವಾಮಿಯಲ್ಲಿ ರೆಕಾರ್ಡ್ಸ್ ಸುರಿಮಳೆ; ದಾಖಲೆಗಳ ವಿವರ ಇಲ್ಲಿದೆ

RCBsvSRH; ಚಿನ್ನಸ್ವಾಮಿಯಲ್ಲಿ ರೆಕಾರ್ಡ್ಸ್ ಸುರಿಮಳೆ; ದಾಖಲೆಗಳ ವಿವರ ಇಲ್ಲಿದೆ

Bus Falls From Bridge In Odisha’s Jajpur

Jajpur; ಸೇತುವೆಯಿಂದ ಬಿದ್ದ ಬಸ್; ಐವರು ಸಾವು, ಹಲವರಿಗೆ ಗಾಯ

‘Please sell the RCB team to someone else’; Tennis star appeal

IPL 2024; ‘ದಯವಿಟ್ಟು ಆರ್ ಸಿಬಿ ತಂಡವನ್ನು ಬೇರೆಯವರಿಗೆ ಮಾರಿ ಬಿಡಿ’; ಟೆನ್ನಿಸ್ ತಾರೆ ಮನವಿ

Lok Sabha Elections ಈಶ್ವರಪ್ಪ ಸ್ಪರ್ಧೆಯಿಂದ ಬಿಜೆಪಿಗೆ ಲಾಭ: ಆರ್‌. ಅಶೋಕ್‌

Lok Sabha Elections ಈಶ್ವರಪ್ಪ ಸ್ಪರ್ಧೆಯಿಂದ ಬಿಜೆಪಿಗೆ ಲಾಭ: ಆರ್‌. ಅಶೋಕ್‌

ಎ. 20ರಂದು ಮತ್ತೆ ರಾಜ್ಯಕ್ಕೆ ಪ್ರಧಾನಿ ಮೋದಿ?

Lok Sabha Election; ಎ. 20ರಂದು ಮತ್ತೆ ರಾಜ್ಯಕ್ಕೆ ಪ್ರಧಾನಿ ಮೋದಿ?

Daily Horoscope

Daily Horoscope; ಈ ರಾಶಿಯವರಿಗೆ ಏಳೂವರೆ ಶನಿಯ ಕೊನೆಯ ಹಂತದಲ್ಲಿ ಶುಭವಾಗುವ ಲಕ್ಷಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Elections ಈಶ್ವರಪ್ಪ ಸ್ಪರ್ಧೆಯಿಂದ ಬಿಜೆಪಿಗೆ ಲಾಭ: ಆರ್‌. ಅಶೋಕ್‌

Lok Sabha Elections ಈಶ್ವರಪ್ಪ ಸ್ಪರ್ಧೆಯಿಂದ ಬಿಜೆಪಿಗೆ ಲಾಭ: ಆರ್‌. ಅಶೋಕ್‌

ಎ. 20ರಂದು ಮತ್ತೆ ರಾಜ್ಯಕ್ಕೆ ಪ್ರಧಾನಿ ಮೋದಿ?

Lok Sabha Election; ಎ. 20ರಂದು ಮತ್ತೆ ರಾಜ್ಯಕ್ಕೆ ಪ್ರಧಾನಿ ಮೋದಿ?

ಮತ್ತೆ ಸಿಎಂ ಚರ್ಚೆಗೆ ಡಿ.ಕೆ. ಶಿವಕುಮಾರ್‌ ನಾಂದಿ

Congress ಮತ್ತೆ ಸಿಎಂ ಚರ್ಚೆಗೆ ಡಿ.ಕೆ. ಶಿವಕುಮಾರ್‌ ನಾಂದಿ

K. S. Eshwarappa ಸಂಧಾನದ ಎಲ್ಲ ಬಾಗಿಲು ಬಂದ್‌

K. S. Eshwarappa ಸಂಧಾನದ ಎಲ್ಲ ಬಾಗಿಲು ಬಂದ್‌

“ಹಾದಿ ತಪ್ಪಿದ’ ಹೇಳಿಕೆಗೆ ಎಚ್‌.ಡಿ. ಕುಮಾರಸ್ವಾಮಿ ವಿಷಾದ

“ಹಾದಿ ತಪ್ಪಿದ’ ಹೇಳಿಕೆಗೆ ಎಚ್‌.ಡಿ. ಕುಮಾರಸ್ವಾಮಿ ವಿಷಾದ

MUST WATCH

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

udayavani youtube

ಕೇಕ್ ಪ್ರಿಯರಿಗೆ ಹೇಳಿ ಮಾಡಿಸಿದ ಜಾಗ ಔರಾ .

udayavani youtube

ಶ್ರೀ ವೈಷ್ಣವಿ ದುರ್ಗಾ ದೇವಾಲಯ

udayavani youtube

ಟೈಟನ್ ಕಂಪೆನಿಯ Xylys ವಾಚ್ ವಿಶೇಷತೆಗಳೇನು ?

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

ಹೊಸ ಸೇರ್ಪಡೆ

Salman Khan: ನಟ ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ; ಇಬ್ಬರ ಬಂಧನ

Salman Khan: ನಟ ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ; ಇಬ್ಬರ ಬಂಧನ

RCBsvSRH; ಚಿನ್ನಸ್ವಾಮಿಯಲ್ಲಿ ರೆಕಾರ್ಡ್ಸ್ ಸುರಿಮಳೆ; ದಾಖಲೆಗಳ ವಿವರ ಇಲ್ಲಿದೆ

RCBsvSRH; ಚಿನ್ನಸ್ವಾಮಿಯಲ್ಲಿ ರೆಕಾರ್ಡ್ಸ್ ಸುರಿಮಳೆ; ದಾಖಲೆಗಳ ವಿವರ ಇಲ್ಲಿದೆ

Bus Falls From Bridge In Odisha’s Jajpur

Jajpur; ಸೇತುವೆಯಿಂದ ಬಿದ್ದ ಬಸ್; ಐವರು ಸಾವು, ಹಲವರಿಗೆ ಗಾಯ

‘Please sell the RCB team to someone else’; Tennis star appeal

IPL 2024; ‘ದಯವಿಟ್ಟು ಆರ್ ಸಿಬಿ ತಂಡವನ್ನು ಬೇರೆಯವರಿಗೆ ಮಾರಿ ಬಿಡಿ’; ಟೆನ್ನಿಸ್ ತಾರೆ ಮನವಿ

Lok Sabha Elections ಈಶ್ವರಪ್ಪ ಸ್ಪರ್ಧೆಯಿಂದ ಬಿಜೆಪಿಗೆ ಲಾಭ: ಆರ್‌. ಅಶೋಕ್‌

Lok Sabha Elections ಈಶ್ವರಪ್ಪ ಸ್ಪರ್ಧೆಯಿಂದ ಬಿಜೆಪಿಗೆ ಲಾಭ: ಆರ್‌. ಅಶೋಕ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.