ಅಕ್ಷಯ ತೃತೀಯಾ: ಕಲ್ಯಾಣ್ ಜುವೆಲರ್ಸ್ಸ್ನಿಂದ ವಿಶೇಷ ಕೊಡುಗೆಗಳು
Team Udayavani, May 6, 2019, 3:01 AM IST
ಬೆಂಗಳೂರು: ದೇಶದ ಅತಿ ದೊಡ್ಡ ಚಿನ್ನಾಭರಣಗಳ ತಯಾರಿಕೆ ಮತ್ತು ಮಾರಾಟ ಮಳಿಗೆಯಾಗಿರುವ “ಕಲ್ಯಾಣ್ ಜುವೆಲರ್ಸ್’ ಅಕ್ಷಯ ತೃತೀಯಾ ಹಬ್ಬದ ಹಿನ್ನೆಲೆಯಲ್ಲಿ ತನ್ನ ಗ್ರಾಹಕರಿಗೆ ವಿವಿಧ ಕೊಡುಗೆಗಳನ್ನು ಘೋಷಿಸಿದೆ. ಚಿನ್ನಾಭರಣಗಳ ತಯಾರಿಕಾ ವೆಚ್ಚದಲ್ಲಿ ರಿಯಾಯಿತಿ, ಮುಂಗಡ ಬುಕ್ಕಿಂಗ್ ವ್ಯವಸ್ಥೆ ಮತ್ತು ಉಚಿತ ಚಿನ್ನದ ನಾಣ್ಯಗಳ ಕೊಡುಗೆಗಳು ಕಲ್ಯಾಣ್ ಜುವೆಲರ್ಸ್ನ ಪ್ರತಿಯೊಂದು ಮಳಿಗೆಗಳಲ್ಲೂ ಗ್ರಾಹಕರಿಗೆ ಲಭ್ಯವಿರಲಿವೆ.
ಅಕ್ಷಯ ತೃತೀಯಾದ ಹಿನ್ನೆಲೆಯಲ್ಲಿ ಕಲ್ಯಾಣ್ ಜುವೆಲರ್ಸ್ ಗ್ರಾಹಕರಿಗೆ ಖರೀದಿಸುವ ಚಿನ್ನಾಭರಣಗಳ ತಯಾರಿಕಾ ವೆಚ್ಚದ ಮೇಲೆ ಶೇ.3ರಿಂದ ಮೇಲ್ಪಟ್ಟು ವಿಶೇಷ ವಿನಾಯಿತಿ ಲಭಿಸಲಿದೆ. ಅಲ್ಲದೆ, ಅಕ್ಷಯ ತೃತೀಯಾ ದಿನದಂದು ಚಿನ್ನಾಭರಣಗಳ ಖರೀದಿಗೆ ಈಗಾಗಲೇ ಮುಂಗಡ ಬುಕ್ಕಿಂಗ್ ಸೌಲಭ್ಯವನ್ನು ಆರಂಭಿಸಿದೆ.
50,000 ರೂ.ಮತ್ತು ಅದಕ್ಕಿಂತ ಹೆಚ್ಚಿನ ಮೌಲ್ಯದ ವಜ್ರಾಭರಣಗಳ ಖರೀದಿಗೆ ಒಂದು ಗ್ರಾಮ್ನ ಚಿನ್ನದ ನಾಣ್ಯವನ್ನು ಉಚಿತವಾಗಿ ನೀಡಲಾಗುವುದು. ಇನ್ನು 25,000 ರೂ.ಮೇಲಿನ ಖರೀದಿಗೆ 400 ಮಿ.ಗ್ರಾಮ್ನ ಚಿನ್ನದ ನಾಣ್ಯ ಹಾಗೂ 50,000 ರೂ.ಗಳಿಗಿಂತ ಹೆಚ್ಚಿನ ಮೌಲ್ಯದ ಅಮೂಲ್ಯವಾದ ಹರಳು ಮತ್ತು ಸಾಂಪ್ರದಾಯಿಕ ಆಭರಣಗಳ ಖರೀದಿದಾರರಿಗೆ 500 ಮಿ.ಗ್ರಾಮ್ನ ಚಿನ್ನದ ನಾಣ್ಯವನ್ನು ನೀಡಲಾಗುವುದು.
“ಕಲ್ಯಾಣ್ ಜುವೆಲರ್ಸ್’ ಇಂಡಿಯಾ ಲಿಮಿಟೆಡ್ ವತಿಯಿಂದ ನಡೆಸಲ್ಪಡುತ್ತಿರುವ, ಸರಕಾರದ ಮಾನ್ಯತೆ ಹೊಂದಿರುವ ಚಿನ್ನಾಭರಣಗಳ ಖರೀದಿಗೆ ಮುಂಗಡ ಸ್ಕೀಮ್ನ ಚಂದಾದಾರರಾಗಲು ಅಕ್ಷಯ ತೃತೀಯಾ ದಿನದಂದು ವಿಶೇಷ ಅವಕಾಶವನ್ನು ಕಲ್ಪಿಸಿಕೊಡಲಾಗುವುದು ಎಂದು ಸಂಸ್ಥೆಯ ಪ್ರಕಟಣೆ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ
Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್ಪಿ
Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ
Srirangapatna: ಐಸ್ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ
Ls Polls: ಕಾಂಗ್ರೆಸ್ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್
MUST WATCH
ಹೊಸ ಸೇರ್ಪಡೆ
Puttur: ಶ್ರೀ ಮಹಾಲಿಂಗೇಶ್ವರ ದೇವರ ಅವಭೃಥ ಸವಾರಿ
Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ
Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್
Belagavi; ಕಾಂಗ್ರೆಸ್ ಸರ್ಕಾರದ ಓಲೈಕೆಯಿಂದ ಜಿಹಾದಿ ಕೃತ್ಯಗಳು ಹೆಚ್ಚುತ್ತಿದೆ: ಶೆಟ್ಟರ್
Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್ ಆತ್ಮಹತ್ಯೆ