ರಾಜ್ಯದ ಎಲ್ಲ 259 ಯಾತ್ರಿಗಳೂ ಕ್ಷೇಮ
Team Udayavani, Jul 4, 2018, 6:00 AM IST
ಬೆಂಗಳೂರು /ಕಾಠ್ಮಂಡು: ಭಾರೀ ಮಳೆಯಿಂದಾಗಿ ಕೈಲಾಸ ಮಾನಸ ಸರೋವರ ಯಾತ್ರೆಯಿಂದ ವಾಪಸಾಗುವಾಗ ನೇಪಾಲದ ಸಿಮಿಕೋಟ್ನಲ್ಲಿ 3-4 ದಿನಗಳಿಂದ ಸಿಲುಕಿಕೊಂಡಿದ್ದ ಕರ್ನಾಟಕ ಮೂಲದ 259 ಯಾತ್ರಿಗಳನ್ನು ಸುರಕ್ಷಿತ ತಾಣಗಳಿಗೆ ಕರೆತರಲಾಗುತ್ತಿದೆ ಎಂದು ಕರ್ನಾಟಕ ಸರಕಾರ ಹೇಳಿದೆ.
ಭಾರತೀಯ ಯಾತ್ರಿಗಳು ಮಳೆಯಿಂದ ಸಂಕಷ್ಟದಲ್ಲಿ ಸಿಲುಕಿದ್ದಾರೆ ಎಂಬ ಮಾಹಿತಿ ಬಂದ ಕೂಡಲೇ ಅವರ ರಕ್ಷಣೆಗಾಗಿ ಭಾರತೀಯ ರಾಯಭಾರಿ ಕಚೇರಿ ನೇಪಾಲ ಸರಕಾರದೊಂದಿಗೆ ಸಂಪರ್ಕ ಸಾಧಿಸಿ ರಕ್ಷಣಾ ಕಾರ್ಯಕ್ಕೆ ಸೂಚಿಸಿದೆ. ಅಲ್ಲದೇ ನೇಪಾಲದ ಗಂಜ್ ಮತ್ತು ಸಿಮಿಕೋಟ್ನಲ್ಲಿರುವ ಭಾರತೀಯ ರಾಯಭಾರಿ ಕಚೇರಿಯ ಪ್ರತಿನಿಧಿಗಳು ಯಾತ್ರಾರ್ಥಿಗಳೊಂದಿಗೆ ನೇರ ಸಂಪರ್ಕ ಸಾಧಿಸಿ ಅಲ್ಲಿ ಆಹಾರ ಸಹಿತ ಅವಶ್ಯವಿರುವ ಸೂಕ್ತ ವ್ಯವಸ್ಥೆ ಮಾಡಿಕೊಟ್ಟಿದ್ದಾರೆ. ಕರ್ನಾಟಕದ 259 ಯಾತ್ರಾರ್ಥಿಗಳ ಪೈಕಿ ರಾಮನಗರ, ಮಂಡ್ಯ, ಮೈಸೂರಿನವರೇ ಅಧಿಕ ಸಂಖ್ಯೆಯಲ್ಲಿದ್ದಾರೆ. ದಿಲ್ಲಿ ಕನ್ನಡ ಭವನದಲ್ಲಿ ಮೂವರು ನೋಡಲ್ ಅಧಿಕಾರಿಗಳನ್ನು ನೇಮಿಸಲಾಗಿದೆ.
ಸಂಪರ್ಕಕ್ಕೆ ಸಿಕ್ಕ ಯುವಕ: ಕಳೆದೆರಡು ದಿನಗಳಿಂದ ಮನೆಯವರ ಸಂಪರ್ಕಕ್ಕೆ ಸಿಗದಿದ್ದ ಯಾತ್ರೆ ತೆರಳಿದ್ದ ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನ ಬುಕ್ಕಾಂಬೂದಿಯ ದರ್ಶನ್ ಎಂಬವರು ಇದೀಗ ಟಿಬೆಟ್ನಲ್ಲಿ ಪತ್ತೆಯಾಗಿದ್ದಾರೆ. ಕರ್ನಾಟಕದಿಂದ ಯಾತ್ರೆಗೆ ಹೋಗಿ ಸಂಕಷ್ಟಕ್ಕೆ ಸಿಲುಕಿ ದವರನ್ನು ವಾಪಸ್ ಕರೆತರುವ ಸಂಬಂಧ ಸರಕಾರ ಎಲ್ಲ ರೀತಿಯ ಕ್ರಮ ಕೈಗೊಳ್ಳಲಿದೆ ಎಂದು ಸಿಎಂ ಕುಮಾರಸ್ವಾಮಿ ತಿಳಿಸಿದ್ದಾರೆ.
ಬೆಳ್ತಂಗಡಿಯ 30 ಮಂದಿ ಕ್ಷೇಮ
ಬೆಳ್ತಂಗಡಿ: ಬೆಳ್ತಂಗಡಿಯಿಂದ ಅಮರನಾಥ ಯಾತ್ರೆಗೆ ಹೊರಟಿರುವ 30 ಜನರ ತಂಡ ಪ್ರಸ್ತುತ ಶ್ರೀನಗರ ದಾಟಿ ತೆರಳುತ್ತಿದ್ದು, ಯಾವುದೇ ತೊಂದರೆಯಿಲ್ಲದೆ ಯಾತ್ರೆ ಮುಂದುವರಿಸಿದೆ.
ಬೆಳ್ತಂಗಡಿಯಿಂದ ವೆಂಕಟೇಶ್ ಬೆಂಡೆ ಅವರು ಸ್ನೇಹಿತರ ಜತೆ ಸೇರಿ ಖಾಸಗಿಯಾಗಿ ರೈಲಿನ ಮೂಲಕ ಅಮರನಾಥ ಯಾತ್ರೆ ಕೈಗೊಂಡಿದ್ದು, ಮಂಗಳವಾರ ಮಧ್ಯಾಹ್ನದ ವೇಳೆಗೆ ಜಮ್ಮು ಬಲ್ಕಾನ್ ಗೇಟ್ ದಾಟಿ ಹೋಗುತ್ತಿರುವ ಕುರಿತು ಬೆಂಡೆ ಅವರು ಮನೆಗೆ ಮಾಹಿತಿ ನೀಡಿದ್ದಾರೆ. ಸುಮಾರು 30 ಸ್ನೇಹಿತರು, ಅದರಲ್ಲೂ ಬಹುತೇಕ ಮಂದಿ ಸಂಬಂಧಿಕರು ಸೇರಿ ಜೂ. 29ರಂದು ಬೆಳ್ತಂಗಡಿಯಿಂದ ಯಾತ್ರೆ ಹೊರಟಿದ್ದರು. ಕಾರ್ಕಳ ತಾಲೂಕಿನ ಮೂವರೂ ತಂಡದಲ್ಲಿದ್ದಾರೆ.
ಅಧಿವೇಶನದಲ್ಲೂ ಪ್ರಸ್ತಾವ
ಮಾನಸ ಸರೋವರ ಯಾತ್ರೆಗೆ ಹೋಗಿರುವವರು ಸಂಕಷ್ಟದಲ್ಲಿ ಸಿಲುಕಿರುವ ಬಗ್ಗೆ ರಾಜ್ಯ ವಿಧಾನಮಂಡಲದ ಉಭಯ ಸದನಗಳಲ್ಲೂ ಪ್ರಸ್ತಾವವಾಯಿತು. ಸರಕಾರದ ಪರವಾಗಿ ಉತ್ತರಿಸಿದ ಕಂದಾಯ ಸಚಿವ ದೇಶಪಾಂಡೆ, ಬೆಳ್ತಂಗಡಿ, ಮೈಸೂರು, ಮಂಡ್ಯ ಸಹಿತ ನಮ್ಮ ಎಲ್ಲ ಯಾತ್ರಿಗಳು ಸುರಕ್ಷಿತವಾಗಿದ್ದಾರೆ ಎಂದರು.
ಕನ್ನಡಿಗರೆಲ್ಲರೂ ಸುರಕ್ಷಿತ
ಘಟನೆ ಬಗ್ಗೆ ದಿಲ್ಲಿಯಲ್ಲಿ ಕೇಂದ್ರ ಸಚಿವ ಡಿ.ವಿ. ಸದಾನಂದ ಗೌಡ ಪ್ರತಿಕ್ರಿಯಿಸಿದ್ದು, ಯಾತ್ರಾರ್ಥಿಗಳನ್ನು ರಕ್ಷಿಸುವ ಕೆಲಸ ನಡೆದಿದ್ದು, ಯಾರೂ ಆತಂಕ ಪಡುವ ಆವಶ್ಯಕತೆ ಇಲ್ಲ. ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಅವರೊಂದಿಗೆ ನೇರವಾಗಿ ಮಾತನಾಡಿದ್ದೇನೆ. ಕನ್ನಡಿಗರೆಲ್ಲರೂ ಸುರಕ್ಷಿತವಾಗಿದ್ದು, ಅವರನ್ನು ಕರೆ ತರಲು ವ್ಯವಸ್ಥೆ ಮಾಡಲಾಗಿದೆ ಎಂದರು.
ಸಹಾಯವಾಣಿ
ಮಾಹಿತಿಗೆ ಕರ್ನಾಟಕ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರ ಸಹಾಯವಾಣಿ ಸಂಖ್ಯೆ 1070 ಸಂಪರ್ಕಿಸಬಹುದು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…
Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…
ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ
Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್
ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ
MUST WATCH
ಹೊಸ ಸೇರ್ಪಡೆ
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…
Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…
Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್ ಟನ್ ವಿವಿ ವಿದ್ಯಾರ್ಥಿನಿ ಬಂಧನ
ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ
Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್