ರೈತ ಸಮುದಾಯದ ನೆರವಿಗೆ ಎಲ್ಲಾ ಸಹಕಾರ: ನಿವೃತ್ತ ನ್ಯಾಯಮೂರ್ತಿ ವಿ. ಗೋಪಾಲಗೌಡ


Team Udayavani, Sep 7, 2022, 8:42 PM IST

1-dsadsad

ಬೆಂಗಳೂರು: ಸಂಕಷ್ಟದಲ್ಲಿರುವ ರೈತ ಸಮುದಾಯದ ನೆರವಿಗೆ ಒಕ್ಕಲಿಗರ ಸಂಘ ಮುಂದಾದರೆ ಸಾಧ್ಯವಿರುವ ಎಲ್ಲಾ ಸಹಕಾರ ನೀಡಲಾಗುವುದು ಎಂದು ಸರ್ವೋಚ್ಛ ನ್ಯಾಯಾಲಯದ ನಿವೃತ್ತ ನ್ಯಾಯಮೂರ್ತಿ ವಿ. ಗೋಪಾಲಗೌಡ ತಿಳಿಸಿದರು.

ರಾಜ್ಯ ಒಕ್ಕಲಿಗರ ಸಂಘ ಎಂಪ್ಲಾಯೀಸ್ ಅಸೋಸಿಯೇಷನ್ ವತಿಯಿಂದ ನಗರದ ಕುವೆಂಪು ಕಲಾಕ್ಷೇತ್ರದಲ್ಲಿ ಬುಧವಾರ ಹಮ್ಮಿಕೊಂಡಿದ್ದ ಅಭಿನಂದನಾ ಕಾರ್ಯಕ್ರಮದಲ್ಲಿ ಸಂಘದ ಪದಾಧಿಕಾರಿಗಳು ಹಾಗೂ ನಿರ್ದೇಶಕರನ್ನು ಸನ್ಮಾನಿಸಿ ಮಾತನಾಡಿದ ಅವರು, ರೈತರ ಕಾರ್ಯಕ್ಕೆ ಸಂಘ ಎಲ್ಲಿಗೆ ಕರೆದರೂ ಬರಲು ಸಿದ್ಧವಿರುವುದಾಗಿ ಹೇಳಿದರು.

ಒಕ್ಕಲುತನ ಮಾಡುವವರೆಲ್ಲರೂ ಒಕ್ಕಲಿಗರೇ. ಅವರ ಬದುಕು ಹಸನಾಗಬೇಕು. ರೈತನ ಮಗನಾಗಿ ಸುಪ್ರೀಂಕೋರ್ಟ್ ನ್ಯಾಯಾಧೀಶರಾಗಿ ಸೇವೆ ಸಲ್ಲಿಸಿದ ತೃಪ್ತಿ ಇದೆ. ಎಲ್ಲರೂ ಒಟ್ಟಾಗಿ ಶಕ್ತಿಯುತವಾಗಿ ಬೆಳೆಯೋಣ. ರಾಜ್ಯ ಮತ್ತು ಕೇಂದ್ರ ಸರ್ಕಾರದ ಮಟ್ಟದಲ್ಲಿ ನಮ್ಮ ಮಾತು ನಡೆಯುವಂತೆ ಮಾಡೋಣ. ದೇಶದ ಆಡಳಿತ ಚುಕ್ಕಾಣಿ ಹಿಡಿಯುವ ಕೆಲಸವಾಗಬೇಕಿದೆ ಎಂದು ತಿಳಿಸಿದರು.

ಒಕ್ಕಲಿಗರ ಸಂಘದ ನೌಕರರು ಮತ್ತು ಆಡಳಿತ ಮಂಡಳಿಯ ನಡುವೆ ಸ್ನೇಹಮಯ ಸಂಬಂಧವಿರಬೇಕು. ಲೋಪಗಳಾದಾಗ ಸ್ನೇಹದಿಂದಲೇ ಸರಿಪಡಿಸಿ ಸಂಘದ ಪ್ರಗತಿಗೆ ಬದ್ಧತೆಯಿಂದ ಕಾರ್ಯನಿರ್ವಹಿಸಬೇಕು ಎಂದು ಕಿವಿ ಮಾತು ಹೇಳಿದರು.

ಅಭಿನಂದನೆ ಸ್ವೀಕರಿಸಿದ ರಾಜ್ಯ ಒಕ್ಕಲಿಗರ ಸಂಘದ ಅಧ್ಯಕ್ಷ ಹಾಗೂ ಶಾಸಕ ಸಿ.ಎನ್.ಬಾಲಕೃಷ್ಣ ಮಾತನಾಡಿ, ಸಜ್ಜೆ ಪಾಳ್ಯದ ಜಮೀನು ಸಂಘದ ಕೈತಪ್ಪಲಿದೆ ಎಂಬ ಆತಂಕವಿತ್ತು. ಒಕ್ಕಲಿಗರ ಸಂಘದ ನಡೆ ಸಜ್ಜೆಪಾಳ್ಯದ ಕಡೆಗೆ ಎಂಬಂತಾಗಿದೆ. ನ್ಯಾಯಮೂರ್ತಿ ಗೋಪಾಲಗೌಡ ನೇತೃತ್ವದಲ್ಲಿ ಹೈಕೋರ್ಟ್ ನ ನಿವೃತ್ತ ನ್ಯಾಯಧೀಶರನ್ನೊಳಗೊಂಡ ತಜ್ಞರ ಸಮಿತಿ ರಚಿಸಲಾಗಿದೆ. ಸಮಿತಿಯ ಸಲಹೆಯಂತೆ ಇನ್ನು ಸಂಘ ಮುಂದೆ ಕಾರ್ಯ ನಿರ್ವಹಿಸಲಿದೆ ಎಂದು ಹೇಳಿದರು.

ಸಜ್ಜೆ ಪಾಳ್ಯದ ಜಮೀನಿನ ವಿಚಾರದಲ್ಲಿ ವ್ಯತ್ಯಾಸವಾದರೆ ಬಿಡಿಎ ಹೊಣೆಯಾಗಬೇಕಾಗುತ್ತದೆ ಎಂದು ಬಿಡಿಎ ಆಯುಕ್ತರು ಹಾಗೂ ಅಧ್ಯಕ್ಷರಿಗೆ ಪತ್ರ ಬರೆಯಲಾಗಿದೆ. ಈ ಜಮೀನು ರಕ್ಷಣೆಗೆ ಎಲ್ಲಾ ರೀತಿಯ ಕಾನೂನಾತ್ಮಕ ಕ್ರಮ ಕೈಗೊಳ್ಳಲಾಗುವುದು ಎಂದರು.

ಶ್ರೀಗಂಧದ ಕಾವಲು ಸೇರಿದಂತೆ ಸಂಘದ ಎಲ್ಲಾ ಆಸ್ತಿ ಸಂರಕ್ಷಣೆ ಮಾಡಲಾಗುವುದು. ಕೆಂಪೇಗೌಡ ಆಸ್ಪತ್ರೆಯ ಚರ್ಮ ವಿಭಾಗಕ್ಕೆ ಉತ್ತಮ ವಿಭಾಗವೆಂದು ಗೌರವ ಸಲ್ಲಿಕೆಯಾಗಿರುವುದು ಸಂಘದ ಹೆಗ್ಗಳಿಕೆಯಾಗಿದೆ. ಸಂಘದ ವೃಂದ ಮತ್ತು ನೇಮಕಾತಿ ನಿಯಮಾವಳಿಗಳು ಅನುಮೋದನೆಯಾಗಿದ್ದು, ಅನುಷ್ಠಾನಕ್ಕೆ ತರಲಾಗುವುದು. ಅಲ್ಲದೆ, ರಾಜ್ಯ ಒಕ್ಕಲಿಗರ ಸಂಘದ ವಿಶ್ವವಿದ್ಯಾಲಯದ ವಿಧೇಯಕ ಚಳಿಗಾಲದ ಅಧಿವೇಶನದಲ್ಲಿ ಮಂಡನೆಯಾಗಲಿದ್ದು, ಶೀಘ್ರದಲ್ಲಿ ಪ್ರಾರಂಭವಾಗಲಿದೆ ಎಂಬ ಭರವಸೆ ನೀಡಿದರು.

ರಾಜ್ಯ ಒಕ್ಕಲಿಗರ ಸಂಘದ ಉಪಾಧ್ಯಕ್ಷರಾದ ಡಿ.ಹನುಮಂತಯ್ಯ, ಡಾ.ಕೆ.ವಿ.ರೇಣುಕಾಪ್ರಸಾದ್, ಪ್ರಧಾನಕಾರ್ಯದರ್ಶಿ ಟಿ.ಕೋನಪ್ಪರೆಡ್ಡಿ, ಖಜಾಂಚಿ ಆರ್.ಪ್ರಕಾಶ್, ಗೌರವಾಧ್ಯಕ್ಷರಾದ ಡಾ.ಟಿ.ಹೆಚ್.ಆಂಜಿನಪ್ಪ, ಕಾರ್ಯಾಧ್ಯಕ್ಷರಾದ ಸಿ.ದೇವರಾಜು(ಹಾಪ್ ಕಾಮ್ಸ್), ಹೆಚ್.ಎನ್.ರವೀಂದ್ರ, ಸಹಾಯಕ ಕಾರ್ಯದರ್ಶಿ ರಾಘವೇಂದ್ರ, ಕಾನೂನು ಸಲಹೆಗಾರ ಎನ್. ಬಾಲಕೃಷ್ಣ(ನೆಲ್ಲಿಗೆರೆಬಾಲು), ನಿರ್ದೇಶಕರಾದ ಎಂ.ಪುಟ್ಟಸ್ವಾಮಿ, ಲೋಕೇಶ್.ಬಿ.ನಾಗರಾಜಯ್ಯ, ಎಲುವಳ್ಳಿ ಎನ್. ರಮೇಶ್, ನೌಕರರ ಸಂಘದ ಅಧ್ಯಕ್ಷ ಡಾ.ಬಿ.ಸಿ.ಬಸವರಾಜು, ಪ್ರಧಾನಕಾರ್ಯದರ್ಶಿ ಸಿ.ಎನ್.ಗಿರೀಶ್, ಡಾ.ವೆಂಕಟೇಶ್ ಮೊದಲಾದವರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Heavy Rain 10 ಜಿಲ್ಲೆಗಳ 11 ನದಿಗಳಲ್ಲಿ  ಪ್ರವಾಹ ಭೀತಿ

Heavy Rain 10 ಜಿಲ್ಲೆಗಳ 11 ನದಿಗಳಲ್ಲಿ  ಪ್ರವಾಹ ಭೀತಿ

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

2-chithapura

Chittapur: ಪಟ್ಟಣದ ಹೊರವಲಯದಲ್ಲಿ ಯುವಕನ ಶವ ಪತ್ತೆ: ಕೊಲೆ ಶಂಕೆ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.