ಎಲ್ಲಾ ಡೀಸೆಲ್ ವಾಹನ ಸಂಚಾರ ರದ್ದು ಮಾಡಬಹುದಲ್ಲವೇ: ಹೈಕೋರ್ಟ್ ಪ್ರಶ್
Team Udayavani, Nov 29, 2017, 10:45 AM IST
ಬೆಂಗಳೂರು: ವಾಯುಮಾಲಿನ್ಯ ತಡೆಗಟ್ಟುವ ಸಲುವಾಗಿ ಆಯ್ದ ಕೆಲವೇ ಡೀಸೆಲ್ ವಾಹನಗಳ ನೋಂದಣಿ ನಿಷೇಧ ಕ್ರಮಕ್ಕಿಂತ, ಎಲ್ಲಾ ಮಾದರಿಯ ಡೀಸೆಲ್ ವಾಹನಗಳ ಸಂಚಾರವನ್ನೂ ರದ್ದು ಮಾಡಬಹುದಲ್ಲವೇ ಎಂದು ರಾಜ್ಯಸರ್ಕಾರಕ್ಕೆ ಹೈಕೋರ್ಟ್ ಪ್ರಶ್ನಿಸಿತು.
ಡೀಸೆಲ್ ಆಟೋ ನೋಂದಣಿ ನಿಷೇಧಿಸಿರುವ ರಾಜ್ಯಸರ್ಕಾರದ ಕ್ರಮ ಪ್ರಶ್ನಿಸಿ ಆಟೋ ಮೊಬೈಲ್ಸ್ ಕಂಪೆನಿಗಳು ಸಲ್ಲಿಸಿರುವ ರಿಟ್ ಅರ್ಜಿಗಳನ್ನು ಮಂಗಳವಾರ ವಿಚಾರಣೆ ನಡೆಸಿದ ನ್ಯಾ. ಬಿ.ವಿ ನಾಗರತ್ನ ಅವರಿದ್ದ ಏಕಸದಸ್ಯ ಪೀಠ, ಈ ಅಭಿಪ್ರಾಯ ವ್ಯಕ್ತಪಡಿಸಿತು.
ವಿಚಾರಣೆ ವೇಳೆ “ಯಾವ ನಿರ್ದಿಷ್ಟ ಕಾರಣಕ್ಕಾಗಿ ಡೀಸೆಲ್ ಆಟೋ ನೋಂದಣಿ ನಿಷೇಧಿಸಲಾಗಿದೆ ಎಂದು ಆದೇಶದಲ್ಲಿ ತಿಳಿಸಿಲ್ಲ. ಬದಲಿಗೆ ವಾಯುಮಾಲಿನ್ಯ ತಡೆಗಟ್ಟಲು ಎಂದು ಈಗ ಕಾರಣ ನೀಡುತ್ತಿದ್ದೀರಿ’ ಎಂದು ಸರ್ಕಾರದ ಪರ ವಕೀಲರನ್ನು ಪ್ರಶ್ನಿಸಿದ ನ್ಯಾಯಪೀಠ, “ಸರ್ಕಾರದ ಆದೇಶದಲ್ಲಿ ಈ ಬಗ್ಗೆ ಉಲ್ಲೇಖೀಸಿಲ್ಲ. ಜೊತೆಗೆ ಸದ್ಯ ಓಡಾಟ ನಡೆಸುತ್ತಿರುವ ಸಾವಿರಾರು ಸಂಖ್ಯೆಯ ಡಿಸೇಲ್ ಆಟೋ ರಿಕ್ಷಾಗಳ ಪರಿಸ್ಥಿತಿಯೇನು? ಇದಲ್ಲದೆ ಎಸ್ಯುವಿ ಸೇರಿ ಇನ್ನಿತರೆ ಡೀಸೆಲ್ ವಾಹನಗಳಿಗೆ ಯಾಕೆ ಅನ್ವಯವಾಗುವುದಿಲ್ಲ. ಪರಿಸರ ರಕ್ಷಣೆ ಹಾಗೂ ವಾಯುಮಾಲಿನ್ಯ ತಡೆಗಟ್ಟಲು ಎಲ್ಲಾ ಮಾದರಿ ಡೀಸೆಲ್ ವಾಹನಗಳ ಸಂಚಾರ ರದ್ದು ಮಾಡ ಬೇಕು, ಕೇವಲ ಆಯ್ದ ಕೆಲವೇ ವಾಹನಗಳಿಗೆ ಮಾತ್ರ ಏಕೆ ನಿಯಮ ರೂಪಿಸಬೇಕು’ ಎಂದು ಮೌಖೀಕ ಅಭಿಪ್ರಾಯ ವ್ಯಕ್ತಪಡಿಸಿತು.
ವಾದ -ಪ್ರತಿವಾದ ಆಲಿಸಿದ ನ್ಯಾಯಪೀಠ, ರಾಜ್ಯದಲ್ಲಿರುವ ಒಟ್ಟು ಡೀಸೆಲ್ ವಾಹನಗಳ ಅಂಕಿ- ಅಂಶಗಳ ಮಾಹಿತಿ, ಸಿಎನ್ಜಿ ( ಸಾಂದ್ರೀಕೃತ ನೈಸರ್ಗಿಕ ಅನಿಲ) ಕೇಂದ್ರಗಳನ್ನು ಸ್ಥಾಪಿಸಲಾಗಿದೆ. ಎಷ್ಟು ಅಂತರದಲ್ಲಿ ಈ ಘಟಕಗಳ ಸ್ಥಾಪನೆಯಾಗಿದೆ. ವಾಯು ಮಾಲಿನ್ಯ ನಿಯಂತ್ರಣ ಸಂಬಂಧ ಕೈಗೊಂಡ ಕ್ರಮಗಳ ಬಗ್ಗೆ ವರದಿ ನೀಡುವಂತೆ ರಾಜ್ಯಸರ್ಕಾರದ ಪರ ಹಾಜರಿದ್ದ ಹೆಚ್ಚುವರಿ ಅಡ್ವೋಕೇಟ್ ಜನರಲ್ ಎ.ಎಸ್ ಪೊನ್ನಣ್ಣ ಅವರಿಗೆ ಸೂಚಿಸಿ ನ. 30ಕ್ಕೆ ವಿಚಾರಣೆ ಮುಂದೂಡಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ
MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ
HD Revanna, ಪ್ರಜ್ವಲ್ ಮೇಲೆ ಲೈಂಗಿಕ ದೌರ್ಜನ್ಯ ಕೇಸ್!
CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್; ಮರು ಪರೀಕ್ಷೆ ನಡೆಸದಿರಲು ನಿರ್ಧಾರ
Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ
MUST WATCH
ಹೊಸ ಸೇರ್ಪಡೆ
ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ
ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ
Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ
T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ
Tragedy: ಛತ್ತೀಸ್ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ