

Team Udayavani, Jul 25, 2024, 1:10 AM IST
ಬೆಂಗಳೂರು: ಕೇರಳದ ವಯನಾಡು ಹಾಗೂ ಕಾವೇರಿ ಜಲಾನಯನ ಪ್ರದೇಶದಲ್ಲಿ ನಿರಂತರ ಮಳೆ ಹಿನ್ನೆಲೆಯಲ್ಲಿ ಕಾವೇರಿ ಕಣಿವೆ ಜಿಲ್ಲೆಗಳ 4 ಪ್ರಮುಖ ಜಲಾಶಯಗಳು ಬಹುತೇಕ ಭರ್ತಿಯಾಗಿದ್ದು, ಅನ್ನದಾತರ ಮೊಗದಲ್ಲಿ ಸಂಭ್ರಮ ಮನೆ ಮಾಡಿದೆ. ಬುಧವಾರ ಕೆಆರ್ಎಸ್ ಮತ್ತು ಹೇಮಾವತಿ ಜಲಾಶಯಗಳು ಭರ್ತಿಯಾಗಿವೆ.
ಕೊಡಗು ಜಿಲ್ಲೆಯ ಹಾರಂಗಿ, ಮೈಸೂರು ಜಿಲ್ಲೆ ಎಚ್.ಡಿ. ಕೋಟೆ ತಾಲೂಕಿನ ಕಬಿನಿ, ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣದ ಕೆಆರ್ಎಸ್, ಹಾಸನ ಜಿಲ್ಲೆ ಗೊರೂರಿನ ಹೇಮಾವತಿ ಜಲಾಶಯಗಳು ಭರ್ತಿಯಾಗಿದ್ದು, ಜಲಾಶಯಗಳಿಂದ ನದಿ ಹಾಗೂ ಕಾಲುವೆಗಳಿಗೆ ಭಾರೀ ಪ್ರಮಾಣದಲ್ಲಿ ನೀರು ಹೊರಬಿಡಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ನೀರಾವರಿ ಇಲಾಖೆ, ಕೃಷಿ ಚಟುವಟಿಕೆಗಳು ಹಾಗೂ ಕೆರೆಗಳಿಗೆ ನೀರು ತುಂಬಿಸಲು ಅಗತ್ಯ ಕ್ರಮ ಕೈಗೊಳ್ಳಲಾಗುತ್ತಿದೆ.
ಯಾವ ಅಣೆಕಟ್ಟು , ಏನು ಸ್ಥಿತಿ?
-ಹೇಮಾವತಿ ಜಲಾಶಯ
ಬರೋಬ್ಬರಿ 2 ವರ್ಷಗಳ ಬಳಿಕ ಭರ್ತಿ
-ಜಲಾಶಯದಲ್ಲಿ ಪ್ರಸ್ತುತ 36.156 ಟಿಎಂಸಿ ನೀರು
-ಕಾವೇರಿ ಜಲಾನಯನ ವ್ಯಾಪ್ತಿಯಲ್ಲಿ ಉತ್ತಮ ಮಳೆ
-49.452 ಟಿಎಂಸಿ ಸಾಮರ್ಥ್ಯದ ಕೃಷ್ಣರಾಜಸಾಗರ ಜಲಾಶಯ ಭರ್ತಿ
-ಬುಧವಾರ ಸಂಜೆ ನೀರಿನ ಮಟ್ಟ
124.80 ಅಡಿಗೆ ಏರಿಕೆ
Ad
BJP Karnataka: ಪಕ್ಷಕ್ಕಿಂತ ದೊಡ್ಡವರು ನಾವಲ್ಲ….: ಕುಮಾರ ಬಂಗಾರಪ್ಪ
Davanagere: ಮನೆಗೆ ಹೋಗುವ ನಡುಕದಿಂದ ಸಿಎಂ ಸಿದ್ದು ಸಭೆ ನಡೆಸುತ್ತಿದ್ದಾರೆ: ಪ್ರತಾಪ್ ಸಿಂಹ
IAS Transfer: ದ.ಕನ್ನಡ ಜಿಲ್ಲಾ ಸಿಇಒ ಸೇರಿ 13 ಐಎಎಸ್ ಅಧಿಕಾರಿಗಳ ವರ್ಗಾವಣೆ
ಹುಬ್ಬಳ್ಳಿ- ಅಂಕೋಲಾ ರೈಲ್ವೆ ಯೋಜನೆ ಜಾರಿಗೆ ಪ್ರಯತ್ನ; ಸೋಮಣ್ಣ ನೇತೃತ್ವದ ಸಭೆಯಲ್ಲಿ ನಿರ್ಧಾರ
ರಾಜ್ಯ ಪೊಲೀಸ್ ಇಲಾಖೆಯಲ್ಲಿ 18 ಸಾವಿರ ಹುದ್ದೆಗಳು ಖಾಲಿ ಇದೆ: ಡಾ.ಜಿ.ಪರಮೇಶ್ವರ್
You seem to have an Ad Blocker on.
To continue reading, please turn it off or whitelist Udayavani.