ಎಲ್ಲಾ ಭಾಷೆಗೂ ಈ ದೇಶದಲ್ಲಿ ಸಮಾನ ಮಾನ್ಯತೆಯಿದೆ: ಡಿ.ಕೆ. ಶಿವಕುಮಾರ್
Team Udayavani, Apr 28, 2022, 12:00 PM IST
ಬೆಂಗಳೂರು: ನಮ್ಮ ದೇಶ ಅನೇಕ ಭಾಷೆಗಳ ಗೂಡಾಗಿದೆ. ಅವರವರಿಗೆ ಅವರವರ ಸ್ವಾಭಿಮಾನವಿದೆ. ನಮ್ಮ ರಾಜ್ಯದಲ್ಲೇ ಕೊಡಗಿಗೆ ಹೋದರೆ ಒಂದು, ಮಂಗಳೂರಿಗೆ ಹೋದರೆ ಒಂದು ಭಾಷೆ ಇದೆ. ಹೀಗಾಗಿ ಯಾವುದನ್ನು ತಳ್ಳಿ ಹಾಕಲು ಸಾಧ್ಯವಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಹೇಳಿದರು.
ಕೆಪಿಸಿಸಿ ಕಚೇರಿಯಲ್ಲಿ ಮಾತನಾಡಿದ ಅವರು, ನಾವು ಕನ್ನಡಿಗರು, ನಮ್ಮ ಧ್ವಜವಿದೆ, ಭಾಷೆಯಿದೆ. ನಮ್ಮದೇ ಆದ ಸ್ವಾಭಿಮಾನವಿದೆ ಎಂದರು.
ಐನೂರು ರೂಪಾಯಿ ನೋಟಿನಲ್ಲಿ ಎಲ್ಲ ಭಾಷೆಗಳಿವೆ. ಕನ್ನಡ, ತೆಲುಗು, ತಮಿಳು ಭಾಷೆ ಇದೆ. ದೇಶದ ಎಲ್ಲಾ ಕಡೆ ಈ ನೋಟು ಚಲಾವಣೆ ಆಗುತ್ತದೆ ಎಂದಮೇಲೆ, ಎಲ್ಲಾ ಭಾಷೆಗೂ ಈ ದೇಶದಲ್ಲಿ ಸಮಾನ ಮಾನ್ಯತೆಯಿದೆ ಎಂದರು.
ಇದನ್ನೂ ಓದಿ:ಸುದೀಪ್ ಟ್ವೀಟ್ ಸಮರ: ಅಜಯ್ ದೇವಗನ್ ಗೆ ಮಾಜಿ ಸಿಎಂ ಸಿದ್ದರಾಮಯ್ಯ ಖಡಕ್ ಸಂದೇಶ ರವಾನೆ
ಈ ಬಗ್ಗೆ ಮಾತನಾಡಿದ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ, ಹಿಂದಿ ರಾಷ್ಟ್ರ ಭಾಷೆ ಎಂದು ಯಾರೋ ಒಬ್ಬರು ಹೇಳಿದರೆಂದು ನಾವು ಒಪ್ಪಕ್ಕಾಗಲ್ಲ. ನಮಗೆ ಕನ್ನಡ ಭಾಷೆ ಪ್ರಾಮುಖ್ಯ. ರಾಷ್ಟ್ರಮಟ್ಟದಲ್ಲಿ ಈ ವಿಚಾರ ಚರ್ಚೆಯಾಗಬೇಕು. ಯಾರೋ ಒಬ್ಬರು ಹೇಳಿದ ತಕ್ಷಣ ನಾವು ಹಿಂದಿಯನ್ನು ರಾಷ್ಟ್ರಭಾಷೆ ಎಂದು ಒಪ್ಪಿಕೊಳ್ಳಲು ಆಗುವುದಿಲ್ಲ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ