ಅಂಬಿ ಪಾರ್ಥಿವ ಶರೀರದ ಅಂತಿಮ ಯಾತ್ರೆ, ಪೊಲೀಸ್ ಬಂದೋಬಸ್ತ್; Watch
Team Udayavani, Nov 26, 2018, 1:05 PM IST
ಬೆಂಗಳೂರು: ಮಾಜಿ ಸಚಿವ, ರೆಬೆಲ್ ಸ್ಟಾರ್ ಅಂಬರೀಷ್ (66ವರ್ಷ) ಪಾರ್ಥಿವ ಶರೀರದ ಅಂತಿಮ ಯಾತ್ರೆಯು ಹೂವಿಗಳಿಂದ ಅಲಂಕೃತಗೊಂಡ ವಿಶೇಷ ವಾಹನದಲ್ಲಿ ಕಂಠೀರವ ಕ್ರೀಡಾಂಗಣದಿಂದ ಕಂಠೀರವ ಸ್ಟುಡಿಯೋದವರೆಗೆ ಮೆರವಣಿಗೆ ಆರಂಭಗೊಂಡಿದೆ.
ವಾಹನಕ್ಕೆ ಪೂಜೆ ಸಲ್ಲಿಸುವ ಮೂಲಕ ಅಂತಿಮ ಯಾತ್ರೆ ಶುರುವಾಗಿತ್ತು. ಯಾತ್ರೆ ಕ್ರೀಡಾಂಗಣ ದಾಟಿದ ಕೂಡಲೇ ನೆರೆದಿದ್ದ ಅಭಿಮಾನಿಗಳು ಅಂಬಿ ಎಂದು ಉದ್ಘೋಷ ಮಾಡಿದರು.
ಯಾತ್ರೆಯ ಹಿಂಭಾಗದಲ್ಲಿ ಸ್ಯಾಂಡಲ್ ವುಡ್, ಕಾಲಿವುಡ್, ಟಾಲಿವುಡ್ ನ ನಟ, ನಟಿಯರು ತೆರೆದ ವಾಹನದಲ್ಲಿ ಅಭಿಮಾನಿಗಳಿಗೆ ವಂದಿಸುತ್ತಾ ಸಾಗುತ್ತಿದ್ದಾರೆ. ಮೆರವಣಿಗೆ ವೇಳೆ ಅಪಾರ ಸಂಖ್ಯೆಯ ಅಭಿಮಾನಿಗಳು, ಸಾರ್ವಜನಿಕರು ರಸ್ತೆಯ ಇಕ್ಕೆಲಗಳಲ್ಲಿ ನಿಂತು ವೀಕ್ಷಿಸುತ್ತಿದ್ದಾರೆ.
ಸಿಐಡಿ ಜಂಕ್ಷನ್, ಬಸವೇಶ್ವರ್ ಸರ್ಕಲ್, ಯಶವಂತಪುರ ಫ್ಲೈ ಓವರ್ ನಿಂದ ಗೋರಗುಂಟೆ ಪಾಳ್ಯ, ಆರ್ ಎಂಸಿ ಯಾರ್ಡ್ ಠಾಣೆ , ಎಫ್ ಟಿಐನಿಂದ ಕಂಠೀರವ ಸ್ಟುಡಿಯೋದವರೆಗೆ ಮೆರವಣಿಗೆ ಸಾಗಿ ಬರಲಿದೆ.
ಮುಂಜಾಗ್ರತಾ ಕ್ರಮವಾಗಿ ಮೆರವಣಿಗೆ ಸಾಗುವ ರಸ್ತೆ ಹಾಗೂ ಇತರೆಡೆ 4 ಹೆಚ್ಚುವರಿ ಪೊಲೀಸ್ ಆಯುಕ್ತರು,3 ಆರ್ ಎಎಫ್, 30 ಕೆಎಸ್ ಆರ್ ಪಿ ಸೇರಿದಂತೆ 5 ಡಿಸಿಪಿಗಳ ನೇತೃತ್ವದಲ್ಲಿ ಹನ್ನೊಂದು ಸಾವಿರ ಪೊಲೀಸರನ್ನು ಬಿಗಿ ಬಂದೋಬಸ್ತ್ ಗೆ ನಿಯೋಜಿಸಲಾಗಿದೆ.
ಅಂತಿಮ ಯಾತ್ರೆಯಲ್ಲಿ ದರ್ಶನ್, ಅರ್ಜುನ್ ಸರ್ಜಾ, ರವಿಶಂಕರ್, ಧೃವ ಸರ್ಜಾ ಸೇರಿದಂತೆ ಹಲವು ನಟ, ನಟಿಯರು ಮೆರವಣಿಗೆಗೆ ಸಾಥ್ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Politics: ಕೇಂದ್ರ ಬರ ಪರಿಹಾರ ನೀಡದಿರಲು ವಿಧಾನಸಭೆ ಚುನವಾಣೆ ಸೋಲಿನ ಸೇಡು: ರಾಮಲಿಂಗಾರೆಡ್ಡಿ
Politics: ಡಿಕೆಶಿ ಹೆಸರು ಹೇಳದಿದ್ದರೆ ಕೆಲವರಿಗೆ ನಿದ್ದೆ ಬರಲ್ಲ : ರಾಮಲಿಂಗಾರೆಡ್ಡಿ
LS Polls: ಮೋದಿ ಆಡಳಿತದಲ್ಲಿ ಭಾರತ 3ನೇ ಆರ್ಥಿಕ ಶಕ್ತಿ
ವರದಿ, ವೀಡಿಯೋ ಪ್ರಕಟಿಸದಂತೆ ನಿರ್ಬಂಧಕಾಜ್ಞೆ ತಂದ ಈಶ್ವರಪ್ಪ ಪುತ್ರ
Hassan Pen Drive; 40 ಜಿಬಿ ಪೆನ್ಡ್ರೈವ್ನಲ್ಲಿ ಸಾವಿರಾರು ಅಶ್ಲೀಲ ವಿಡಿಯೋ!
MUST WATCH
ಹೊಸ ಸೇರ್ಪಡೆ
Rupali Ganguly : ʼಅನುಪಮಾʼ ಧಾರಾವಾಹಿ ಖ್ಯಾತಿಯ ನಟಿ ರೂಪಾಲಿ ಗಂಗೂಲಿ ಬಿಜೆಪಿ ಸೇರ್ಪಡೆ
Extortion: ಆನ್ಲೈನ್ ಗೇಮ್; ಬಾಲಕನ ಬೆದರಿಸಿ ಸುಲಿಗೆ
Kushtagi: ಕಾಣೆಯಾಗಿದ್ದ ಪುರಸಭೆ ನೌಕರ ಪತ್ತೆ; ಆತಂಕ ದೂರ
Politics: ಕೇಂದ್ರ ಬರ ಪರಿಹಾರ ನೀಡದಿರಲು ವಿಧಾನಸಭೆ ಚುನವಾಣೆ ಸೋಲಿನ ಸೇಡು: ರಾಮಲಿಂಗಾರೆಡ್ಡಿ
LPG Cylinders: ವಾಣಿಜ್ಯ ಬಳಕೆಯ ಎಲ್ ಪಿಜಿ ಸಿಲಿಂಡರ್ ಬೆಲೆ ಮತ್ತೆ ಇಳಿಕೆ; ಹೊಸ ದರ ಎಷ್ಟು?