ಅಂಬರೀಶ್ ಅಭಿಮಾನಿ ಆತ್ಮಹತ್ಯೆ;ತಂದೆ ತಾಯಿಯನ್ನು ನೆನಪಿಸಿಕೊಳ್ಳಿ;CM
Team Udayavani, Nov 25, 2018, 12:48 PM IST
ಬೆಂಗಳೂರು: ರೆಬೆಲ್ ಸ್ಟಾರ್ ಅಂಬರೀಶ್ ಅವರ ನಿಧನದಿಂದ ಮನನೊಂದ ಮಂಡ್ಯ ಜಿಲ್ಲೆಯ ಅಭಿಮಾನಿಯೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆ ಭಾನುವಾರ ನಡೆದಿದೆ. ಈ ವಿಚಾರ ತಿಳಿಯುತ್ತಿದ್ದಂತೆ ಸಿಎಂ ಯಾರೂ ಆತ್ಮಹತ್ಯೆ ಮಾಡಿಕೊಳ್ಳಬೇಡಿ, ಅಮೂಲ್ಯವಾದ ಜೀವ ಕಳೆದುಕೊಳ್ಳಬೇಡಿ ಎಂದು ಕಳಕಳಿಯ ಮನವಿ ಮಾಡಿದ್ದಾರೆ.
ಮದ್ದೂರಿನ ಹೊಟ್ಟೆದೊಡ್ಡಣಗೌಡನ ದೊಡ್ಡಿ ಎಂಬಲ್ಲಿ ತಮ್ಮಯ್ಯ ಎಂಬ ಅಭಿಮಾನಿ ಚಲಿಸುತ್ತಿರುವ ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಬಗ್ಗೆ ವರದಿಯಾಗಿದೆ.
ಮಂಡ್ಯದಲ್ಲಿ ಅಭಿಮಾನಿಗಳು ಶೋಕ ಸಾಗರದಲ್ಲಿ ಮುಳುಗಿದ್ದು, ಸಂಜೆ ಅಂಬರೀಶ್ ಅವರ ಪಾರ್ಥೀವ ಶರೀರ ಆಗಮಿಸುವುದನ್ನು ಎದುರು ನೋಡುತ್ತಿದ್ದಾರೆ. ವಿಶ್ವೇಶ್ವರಯ್ಯ ಕ್ರೀಡಾಂಗಣದಲ್ಲಿ ಸಂಜೆ 4 ರಿಂದ ನಾಳೆ ಬೆಳಗ್ಗೆ 6 ಗಂಟೆಯ ವರೆಗೆ ಅಂತಿಮ ದರ್ಶನಕ್ಕೆ ಅವಕಾಶ ಮಾಡಿಕೊಡಲಾಗಿದ್ದು ಭದ್ರತೆ ಸೇರಿದಂತೆ ಸಕಲ ವ್ಯವಸ್ಥೆ ಮಾಡಿಕೊಳ್ಳಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…
Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ
Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್ಸಿ ಮೀಸಲಾತಿ ಹೇಳಿಕೆಗೆ ವಿರೋಧ
Lok Sabha Election; ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ