ವರ್ಷದೊಳಗೆ ಅಂಬಿಗರ ಚೌಡಯ್ಯ ವಚನಗಳ ಸಂಪುಟ
Team Udayavani, Jan 22, 2018, 10:37 AM IST
ಬೆಂಗಳೂರು: ನಿಜಶರಣ ಅಂಬಿಗರ ಚೌಡಯ್ಯ ರಚಿಸಿರುವ ವಚನಗಳನ್ನು ಕ್ರೋಢೀಕರಿಸಿ ಸರ್ಕಾರದಿಂದಲೇ ಸಮಗ್ರ ಸಂಪುಟ
ಪ್ರಕಟಿಸಲಾಗುವುದು ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ನಿರ್ದೇಶಕ ಎನ್.ಆರ್. ವಿಶುಕುಮಾರ್ ಹೇಳಿದ್ದಾರೆ.
ನಗರದ ರವೀಂದ್ರ ಕಲಾಕ್ಷೇತ್ರದಲ್ಲಿ ಹಮ್ಮಿಕೊಂಡಿದ್ದ ನಿಜಶರಣ ಅಂಬಿಗರ ಚೌಡಯ್ಯ ಜಯಂತಿ ಉದ್ಘಾಟಿಸಿ ಮಾತನಾಡಿ, ಅಂಬಿಗರ
ಚೌಡಯ್ಯ ಸಾವಿರಕ್ಕೂ ಅಧಿಕ ವಚನಗಳನ್ನು ರಚಿಸಿದ್ದು, ಅದರಲ್ಲಿ 350ಕ್ಕೂ ಅಧಿಕ ವಚನಗಳು ಲಭ್ಯವಿದೆ. ಸುಮಾರು 500 ವಚನಗಳನ್ನು ಕ್ರೋಢೀಕರಿಸಿ, ಒಂದು ವರ್ಷದೊಳಗೆ ಸಮಗ್ರ ಸಂಪುಟವನ್ನು ಪ್ರಕಟಿಸಲಾಗುವುದು. ಅಂಬಿಗರ ಚೌಡಯ್ಯರ ಆಧ್ಯಾತ್ಮಿಕ ಮತ್ತು ವೈಚಾರಿಕ ಚಿಂತನೆಗಳನ್ನು ದಾಖಲಿಸಲಾಗುವುದು. ಇದಕ್ಕಾಗಿ ಅಂಬಿಗರ ವಚನದ ಬಗ್ಗೆ ಅಧ್ಯಯನ ಮಾಡಿದವರ ಸಭೆ ಕರೆದು ಚರ್ಚೆ ಮಾಡಲಿದ್ದೇವೆ ಎಂದರು.
ಅಂಬಿಗರ ಚೌಡಯ್ಯನವರು ಹೇಳಿದಂತೆ ಆಂತರ್ಯದಲ್ಲಿ ಕೀಳು ಭಾವನೆ ಬಿಟ್ಟು, ಸ್ವಾಭಿ ಮಾನದಿಂದ ಬದುಕಬೇಕು. ಅಂಬಿಗರ ಚೌಡಯ್ಯನವರು ಸಮಾಜದ ತೊಡಕನ್ನು ನಿರ್ಭೀತವಾಗಿ ಗಟ್ಟಿತನದಿಂದ ಹೇಳಿದ್ದಾರೆ ಎಂದು ತಿಳಿಸಿದರು. ಹಾವೇರಿ ನರಸೀಪುರದ ನಿಜಶರಣ ಅಂಬಿಗರ ಚೌಡಯ್ಯ ಪೀಠದ ಶಾಂತಭೀಷ್ಮ ಚೌಡಯ್ಯ ಸ್ವಾಮೀಜಿ ಮಾತನಾಡಿ, ಹೆಣ್ಣು, ಹೊನ್ನು ಮತ್ತು ಮಣ್ಣಿಗಾಗಿ ಜಗತ್ತಿನಾದ್ಯಂತ ಕ್ರಾಂತಿ ನಡೆದಿದೆ ಎಂದು ತಿಳಿಸಿದರು. ಕಾರ್ಯ ಕ್ರಮಕ್ಕೂ ಮುನ್ನ, ಜಯಂತಿಯ ಅಂಗವಾಗಿ ಸ್ವಾತಂತ್ರ್ಯ ಉದ್ಯಾನವನದಿಂದ ರವೀಂದ್ರಕಲಾ ಕ್ಷೇತ್ರದ ವರೆಗೆ ಮೆರವಣಿಗೆ ನಡೆಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
LokSabha; ರಾಹುಲ್ ಗಾಂಧಿಯನ್ನು ರಾಜ್ಯಕ್ಕೆ ಹೆಚ್ಚೆಚ್ಚು ಕರೆಯಿಸಬೇಕು: ವಿಜಯೇಂದ್ರ ವ್ಯಂಗ್ಯ
Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ
Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್
ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು
Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ