Police ಕಾಯ್ದೆಗೆ ತಿದ್ದುಪಡಿ: ವರ್ಗಾವಣೆಗೆ 2 ವರ್ಷ ಕನಿಷ್ಠ
Team Udayavani, Feb 21, 2024, 10:56 PM IST
ಬೆಂಗಳೂರು: ಆರಕ್ಷಕ ನಿರೀಕ್ಷಕ (ಪೊಲೀಸ್ ಇನ್ಸ್ಪೆಕ್ಟರ್), ಎಸ್ಪಿ, ಡಿವೈಎಸ್ಪಿ, ಡಿಐಜಿಯಂತಹ ಹುದ್ದೆಗಳಲ್ಲಿರುವ ಅಧಿಕಾರಿಗಳನ್ನು ಕನಿಷ್ಠ 2 ವರ್ಷಗಳ ವರೆಗೆ ವರ್ಗಾವಣೆ ಮಾಡದಂತೆ ಕರ್ನಾಟಕ ಪೊಲೀಸರು ಅಧಿನಿಯಮ-1963ಕ್ಕೆ ತಿದ್ದುಪಡಿ ತಂದಿದ್ದು, ಕರ್ನಾಟಕ ಪೊಲೀಸು (ತಿದ್ದುಪಡಿ) ಮಸೂದೆ -2024ಕ್ಕೆ ವಿಧಾನಸಭೆ ಸರ್ವಾನುಮತದಿಂದ ಅಸ್ತು ಎಂದಿದೆ.
ಕಾರ್ಯಾಚರಣೆ ಕರ್ತವ್ಯದಲ್ಲಿರುವ ಪೊಲೀಸ್ ಅಧಿಕಾರಿಗಳ ಕನಿಷ್ಠ ಅವಧಿಯನ್ನು ಒಂದು ವರ್ಷದಿಂದ ಎರಡು ವರ್ಷಗಳಿಗೆ ವಿಸ್ತರಿಸಲು ಮಸೂದೆಯಲ್ಲಿ ಅವಕಾಶ ನೀಡಿದ್ದು, ಇದರಿಂದ ತಮ್ಮ ಅಧಿಕಾರ ವ್ಯಾಪ್ತಿಯನ್ನು ಉತ್ತಮ ರೀತಿಯಲ್ಲಿ ಅರ್ಥ ಮಾಡಿಕೊಂಡು ಸಾರ್ವಜನಿಕರೊಂದಿಗೆ ಉತ್ತಮ ಬಾಂಧವ್ಯ ನಿರ್ಮಿಸಲು, ಅಪರಾಧ ಪತ್ತೆ ಹಚ್ಚಲು ಸಹಾಯವಾಗಲಿದೆ.
ಉಳಿದಂತೆ ಉನ್ನತ ಹುದ್ದೆಗೆ ಭಡ್ತಿ ಹೊಂದಿ ಹುದ್ದೆ ಖಾಲಿಯಾದರೆ, ಕ್ರಿಮಿನಲ್ ಅಪರಾಧದಲ್ಲಿ ನ್ಯಾಯಾಲಯದಿಂದ ದೋಷಾರೋಪಣೆ ಸಾಬೀತಾಗಿದ್ದರೆ, ಸೇವೆಯಿಂದ ವಜಾ ಮಾಡುವ, ತೆಗೆದುಹಾಕುವ, ಬಿಡುಗಡೆ ಮಾಡುವ, ಕಡ್ಡಾಯ ನಿವೃತ್ತಗೊಳಿಸುವ ದಂಡನೆ ವಿಧಿಸಿದ್ದರೆ, ಕರ್ತವ್ಯ ನಿರ್ವಹಣೆಯಲ್ಲಿ ದೈಹಿಕ ಅಥವಾ ಮಾನಸಿಕ ಅಸಮರ್ಥತೆ ಹೊಂದಿದ್ದರೆ, ಲಿಖೀತ ರೂಪದ ಕೋರಿಕೆ ಮೇರೆಗೆ 2 ವರ್ಷಕ್ಕಿಂತ ಮೊದಲೇ ವರ್ಗಾವಣೆ ಮಾಡಬಹುದು. ಇಲ್ಲದಿದ್ದರೆ ಕನಿಷ್ಠ 2 ವರ್ಷ ಅದೇ ಸ್ಥಾನದಲ್ಲಿ ಕೆಲಸ ಮಾಡಬೇಕೆಂಬುದನ್ನು ಮಸೂದೆಯಲ್ಲಿ ಉಲ್ಲೇಖಿಸಿದೆ.
ಸ್ವಾಗತಿಸುತ್ತೇವೆ
ನಮ್ಮ ಸರಕಾರ ಅಧಿಕಾರದಲ್ಲಿದ್ದಾಗ ಪೊಲೀಸ್ ಅಧಿಕಾರಿಗಳನ್ನು ಕನಿಷ್ಠ 2 ವರ್ಷ ವರ್ಗಾವಣೆ ಮಾಡದಂತೆ ಕಾನೂನು ತಂದಿದ್ದೆವು. ಕೆ.ಜೆ. ಜಾರ್ಜ್ ಅವರು ಗೃಹ ಸಚಿವರಿದ್ದಾಗ ಶಾಸಕರ ಒತ್ತಡಕ್ಕೆ ಮಣಿದು 1 ವರ್ಷಕ್ಕೆ ಇಳಿಸಿದ್ದರು. ಈಗ ಮತ್ತೆ ನಮ್ಮ ಕಾನೂನನ್ನೇ ಜಾರಿಗೆ ತರುವುದಕ್ಕೆ ಸ್ವಾಗತಿಸುತ್ತೇನೆ.
– ಆರ್.ಅಶೋಕ, ವಿಪಕ್ಷ ನಾಯಕ
ಕಾನೂನು ತರಬೇಕು
ಪದೇಪದೆ ಪೊಲೀಸರನ್ನು ವರ್ಗಾಯಿಸುವುದರಿಂದ ಭ್ರಷ್ಟಾಚಾರಕ್ಕೆ ದಾರಿ ಮಾಡಿಕೊಟ್ಟಂತಾಗುತ್ತದೆ. ಕೆಲವು ಆಯ್ದ ಠಾಣೆಗಳಿಗೆ ವರ್ಗಾಯಿಸಿಕೊಳ್ಳಲು ಪೊಲೀಸರೂ ತಯಾರಿರುತ್ತಾರೆ. ಜ್ಯೇಷ್ಠತೆ ಆಧಾರದ ಮೇಲೆ ಕೌನ್ಸೆಲಿಂಗ್ ಮೂಲಕ ವರ್ಗಾವಣೆ ಮಾಡುವ ಕಾನೂನು ತರಬೇಕು.
-ಆರಗ ಜ್ಞಾನೇಂದ್ರ, ಮಾಜಿ ಸಚಿವ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್
LokSabha; ರಾಹುಲ್ ಗಾಂಧಿಯನ್ನು ರಾಜ್ಯಕ್ಕೆ ಹೆಚ್ಚೆಚ್ಚು ಕರೆಯಿಸಬೇಕು: ವಿಜಯೇಂದ್ರ ವ್ಯಂಗ್ಯ
Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ
Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್
Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ
MUST WATCH
ಹೊಸ ಸೇರ್ಪಡೆ
Kalaburagi; ಪ್ರಧಾನಿ ಮೋದಿ ಸುಳ್ಳು ಮಾರಾಟ ಮಾಡುವ ವ್ಯಾಪಾರಿ: ಸಿಎಂ ಸಿದ್ದರಾಮಯ್ಯ
ʼರಾಮಾಯಣʼ ಸೆಟ್ನಿಂದ ʼರಾಮ – ಸೀತೆʼಯಾದ ರಣ್ಬೀರ್- ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್
ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್
ಪ್ರಹ್ಲಾದ ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ ಹುಟ್ಟಿಕೊಂಡವರು: ದಿಂಗಾಲೇಶ್ವರ ಸ್ವಾಮೀಜಿ
April 28 ರಂದು ರಾಜ್ಯಮಟ್ಟದ ವಿದ್ಯಾರ್ಥಿ ಸಮಾವೇಶಕ್ಕೆ ಚಿತ್ರನಟ ಪ್ರಕಾಶ ರೈ ಆಗಮನ