ಮುಂದಿನ ಅಧಿವೇಶನದಲ್ಲಿ ಮರಳು ನೀತಿಗೆ ತಿದ್ದುಪಡಿ: ಸಚಿವ ಹಾಲಪ್ಪ ಆಚಾರ್
ಮರಳು ಕೊರತೆ ನೀಗಿಸಲು ಎಂ ಸ್ಯಾಂಡ್ಗೆ ಉತ್ತೇಜನ
Team Udayavani, Aug 17, 2022, 6:50 AM IST
ಬೆಂಗಳೂರು: ರಾಜ್ಯದಲ್ಲಿ ಮರಳು ಕೊರತೆ ನೀಗಿಸಲು ಎಂ ಸ್ಯಾಂಡ್ಗೆ ಉತ್ತೇಜನ ನೀಡಲು ತೀರ್ಮಾನಿಸಲಾಗಿದ್ದು, ಘಟಕಗಳನ್ನು ತೆರೆಯಲು ಪ್ರೋತ್ಸಾಹ ನೀಡಲಾಗುವುದು. ಮುಂದಿನ ಅಧಿವೇಶನದಲ್ಲಿ ಮರಳು ನೀತಿಗೆ ತಿದ್ದುಪಡಿ ತರಲಾಗುವುದು ಎಂದು ಗಣಿ ಸಚಿವ ಹಾಲಪ್ಪ ಆಚಾರ್ ತಿಳಿಸಿದ್ದಾರೆ.ಸುದ್ದಿಗಾರರ ಜತೆ ಮಾತನಾಡಿದ ಅ, ಎಂ ಸ್ಯಾಂಡ್ಗೆ ಉತ್ತೇಜನ ನೀಡುವ ಸಂಬಂಧ ಎಂದು ಹೇಳಿದರು.
ರಾಜ್ಯದಲ್ಲಿ ವರ್ಷಕ್ಕೆ 45 ದಶಲಕ್ಷ ಟನ್ ಮರಳಿಗೆ ಬೇಡಿಕೆ ಇದೆ. 35 ದಶಲಕ್ಷ ಟನ್ ಮರಳು ಪೂರೈಕೆಯಾಗುತ್ತಿದ್ದು, ವ್ಯತ್ಯಾಸ ಸರಿತೂಗಿಸಲು ಎಂ ಸ್ಯಾಂಡ್ಗೆ ಉತ್ತೇಜನ ನೀಡಲಾಗುವುದು.ಕಾನೂನಿನ ವ್ಯಾಪ್ತಿಯಲ್ಲಿ ಜಲ್ಲಿ ಕ್ರಷರ್ ಸ್ಥಾಪನೆಗೆ ಅನುಮತಿ ನೀಡಲಾಗುವುದು ಎಂದು ತಿಳಿಸಿದರು.
ಎಂ ಸ್ಯಾಂಡ್ ಗುಣಮಟ್ಟದ ಆಧಾರದ ಮೇಲೆ ಪ್ರತಿಟನ್ಗೆ 700 ರೂ.ನಿಂದ 1000 ರೂ.ವರೆಗೆ ಲಭ್ಯವಾಗುತ್ತಿದೆ. ಇದರಿಂದಾಗಿ ಮರಳು ಕೊರತೆ ನಿವಾರಣೆ ಯಾಗುತ್ತದೆ ಎಂದು ಸಚಿವರು ಹೇಳಿದರು.
16 ಜಿಲ್ಲೆಗೆ ಹೊಣೆಗಾರಿಕೆ
ರಾಜ್ಯದಲ್ಲಿ ಮರಳು ಬ್ಲಾಕ್ಗಳಿಂದ ಮರಳು ತೆಗೆದು ಮಾರಾಟ ಮಾಡಲು ಹಟ್ಟಿ ಮೈನ್ಸ್ಗೆ 15 ಜಿಲ್ಲೆ ಹಾಗೂ ಮಿನರಲ್ಸ್ ಕಾರ್ಪೊರೇಷನ್ಗೆ 16 ಜಿಲ್ಲೆಗಳ ಹೊಣೆಗಾರಿಕೆ ವಹಿಸಲಾಗಿದೆ. ಪ್ರತೀಟನ್ ಮರಳು 800 ರೂಪಾಯಿಗೆ ಸಿಗುವಂತೆ ಮಾಡಲಾಗುತ್ತಿದೆ. ಮುಂದಿನ ಬೇಸಗೆ ವೇಳೆಗೆ ಮರಳು ಸಮಸ್ಯೆ ಸಂಪೂರ್ಣವಾಗಿ ನಿವಾರಣೆ ಯಾಗುತ್ತದೆ ಎಂದು ಹೇಳಿದರು.
ಕೇಂದ್ರ ಸರಕಾರದಿಂದ 27 ಬ್ಲಾಕ್ಗೆ ಅನುಮತಿ
ಗ್ರಾಮೀಣ ಭಾಗದಲ್ಲಿ ಸ್ಥಳೀಯವಾಗಿ ಸಿಗುವ ಮರಳು ಟನ್ಗೆ 300 ರೂ.ನಂತೆ ಮಾರಾಟ ಮಾಡಲು ಅನುಮತಿ ನೀಡಲು ಪಂಚಾಯತ್ಗಳಿಗೆ ಅಧಿಕಾರ ನೀಡಲಾಗಿದೆ. ಕೆಲವೊಂದು ಅಡೆತಡೆಗಳ ಬಗ್ಗೆ ದೂರುಗಳಿದ್ದು, ಯಾವುದೇ ತೊಂದರೆ ನೀಡದಂತೆ ಸೂಚನೆ ನೀಡಲಾಗುವುದು. ರಾಜ್ಯದಲ್ಲಿ ಗಣಿಗಾರಿಕೆ ಸಂಬಂಧ ಕೇಂದ್ರ ಸರಕಾರ 27 ಬ್ಲಾಕ್ಗಳಿಗೆ ಅನುಮತಿ ನೀಡಿದ್ದು, ಈಗಾಗಲೇ 12 ಬ್ಲಾಕ್ ಹರಾಜು ಯಶಸ್ವಿಯಾಗಿ ಮಾಡಲಾಗಿದೆ. ಉಳಿದ ಬ್ಲಾಕ್ಗಳಿಗೆ ಮರು ಹರಾಜು ಪ್ರಕ್ರಿಯೆ ಸದ್ಯದಲ್ಲೇ ಪ್ರಾರಂಭಿಸಲಾಗುವುದು ಎಂದು ಹಾಲಪ್ಪ ಆಚಾರ್ ಅವರು ಹೇಳಿದರು.
6308.31 ಕೋಟಿ ರೂ. ಸಂಗ್ರಹ
ಗಣಿಗಾರಿಕೆಯಿಂದ 2021-22 ನೇ ಸಾಲಿನಲ್ಲಿ 4,357 ಕೋಟಿ ರೂ. ರಾಜಧನ ಸಂಗ್ರಹದ ಗುರಿಯಿದ್ದು, ಶೇ. 145ರಷ್ಟು ಅಂದರೆ 6308.31 ಕೋಟಿ ರೂ. ಸಂಗ್ರಹ ಮಾಡಲಾಗಿದೆ. ಸೋರಿಕೆ ತಡೆಗಟ್ಟಿ ಎಲ್ಲವನ್ನೂ ಕಾನೂನು ವ್ಯಾಪ್ತಿಗೆ ತರಲಾಗಿದೆ ಎಂದು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ
Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ
IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ; ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ
Paper leak case: ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ; 15 ಮಂದಿ ಆರೋಪಿಗಳು ಖುಲಾಸೆ
ಉಡುಪಿಯಲ್ಲಿ ಕೋಮು ಪ್ರಚೋದನೆಯ ಭಾಷಣ; ಕಾಜಲ್ ಹಿಂದುಸ್ತಾನಿ ವಿರುದ್ಧದ FIRಗೆ ಮಧ್ಯಂತರ ತಡೆ
MUST WATCH
ಹೊಸ ಸೇರ್ಪಡೆ
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್
Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ
IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ; ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ