ಬಿಜೆಪಿಯಲ್ಲಿ ಭಾರಿ ಗೊಂದಲ :ಬಳ್ಳಾರಿ ರೋಡ್ ಶೋ ಕೈ ಬಿಟ್ಟ ಶಾ !
Team Udayavani, Apr 27, 2018, 9:59 AM IST
ಬೆಂಗಳೂರು: ಅಭ್ಯರ್ಥಿಗಳ ಆಯ್ಕೆ, ಯಡಿಯೂರಪ್ಪ ಪುತ್ರ ವಿಜೆಯೇಂದ್ರ ಟಿಕೆಟ್ ಕೈ ತಪ್ಪಿದ ವಿಚಾರ ಸೇರಿದಂತೆ ಹಲವು ಗೊಂದಲಗಳಿಂದಾಗಿ ಬಿಜೆಪಿಯಲ್ಲಿ ಭಿನ್ನಮತ ಭುಗಿಲೆದ್ದಿದ್ದು , ದಿಢೀರ್ ಬೆಳವಣಿಗೆಯಲ್ಲಿ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಅವರು ತಮ್ಮ ಪೂರ್ವ ನಿಯೋಜಿತ ಬಳ್ಳಾರಿ ಪ್ರವಾಸವನ್ನು ರದ್ದು ಮಾಡಿದ್ದಾರೆ.
ಸಿಎಂ ಸಿದ್ದರಾಮಯ್ಯ ಮತ್ತು ರಾಹುಲ್ ಗಾಂಧಿ ಅವರು ರೆಡ್ಡಿ ಅಕ್ರಮಗಳನ್ನು ಪ್ರಸ್ತಾವಿಸಿ ನಿರಂತರ ವಾಗ್ಧಾಳಿ ನಡೆಸುತ್ತಿರುವ ಹಿನ್ನಲೆಯಲ್ಲಿ ಅಂತರ ಕಾಯ್ದುಕೊಳ್ಳಲು ಶಾ ಪ್ರವಾಸ ಕೈ ಬಿಟ್ಟಿದ್ದಾರೆ ಎನ್ನಲಾಗಿದೆ.
ಶಾ ಅವರು ಮಧ್ಯಾಹ್ನದವರೆಗೆ ಬೆಂಗಳೂರಿನ ಚಾಲುಕ್ಯ ಸರ್ಕಲ್ನಲ್ಲಿರುವ ನಿವಾಸದಲ್ಲೆ ಇರಲಿದ್ದು, ಯಡಿಯೂರಪ್ಪ ಸೇರಿದಂತೆ ಪ್ರಮುಖ ನಾಯಕರೊಂದಿಗೆ ಮಾತುಕತೆ ನಡೆಸಲಿದ್ದಾರೆ. ಮಧ್ಯಾಹ್ನ ನಿಗದಿಯಾದ ಕೊಪ್ಪಳ ಪ್ರವಾಸಕ್ಕೆ ತೆರಳಲಿದ್ದಾರೆ ಎಂದು ತಿಳಿದು ಬಂದಿದೆ.
ಅಮಿತ್ ಶಾ ಬೆಳಗ್ಗೆ 10 ಗಂಟೆಯಿಂದ ನಗರ ಕ್ಷೇತ್ರ ವ್ಯಾಪ್ತಿಯ ಕನಕದುರ್ಗಮ್ಮ ದೇವಸ್ಥಾನದಿಂದ ರೋಡ್ ಶೋ ನಡೆಸಬೇಕಿತ್ತು.
ಅನಂತ್ ಕುಮಾರ್, ಸಂತೋಷ್ಗೆ ತರಾಟೆ?
ಬಿಜೆಪಿಯಲ್ಲಿನ ಗೊಂದಲಗಳಿಗೆ ಸಂಬಂಧಿಸಿ ಕಳೆದ ರಾತ್ರಿ ನಡೆದ ಸಭೆಯಲ್ಲಿ ಶಾ ಅವರು ಕೇಂದ್ರ ಸಚಿವ ಅನಂತ್ಕುಮಾರ್ ಮತ್ತು ಸಂಘಟನಾ ಕಾರ್ಯದರ್ಶಿ ಸಂತೋಷ್ ವಿರುದ್ಧ ತೀವ್ರ ಅಸಮಾದಾನ ವ್ಯಕ್ತಪಡಿಸಿದ್ದಾರೆ ಎಂದು ತಿಳಿದು ಬಂದಿದೆ.
ಕಳೆದ ರಾತ್ರಿ ನಡೆದ ಸಭೆಗೆ ಯಡಿಯೂರಪ್ಪ ಅವರು ಆಗಮಿಸದೆ ಅಸಮಾಧಾನವನ್ನು ಹೊರ ಹಾಕಿರುವುದಾಗಿ ವರದಿಯಾಗಿದೆ. ಶುಕ್ರವಾರ ಬೆಳಗ್ಗೆ ಶಾ ನಿವಾಸಕ್ಕೆ ದೌಡಾಯಿಸಿರುವ ಯಡಿಯೂರಪ್ಪ ಪ್ರಚಾರದ ಕುರಿತು ವಿವರಗಳನ್ನು ನೀಡುತ್ತಿದ್ದಾರೆ.
ಶಾ ಅವರೊಂದಿಗೆ ಪಿಯೂಷ್ ಗೋಯಲ್, ಮುರಳೀಧರ ರಾವ್ ಮತ್ತು ಪ್ರಕಾಶ್ ಜಾವ್ಡೇಕರ್ ಅವರು ಶಾ ಅವರೊಂದಿಗೆ ರಣ ತಂತ್ರ ನಡೆಸುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು
China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ
ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ
Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ
Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ
MUST WATCH
ಹೊಸ ಸೇರ್ಪಡೆ
Gujarat ಕರಾವಳಿಯಲ್ಲಿ ಪಾಕ್ ದೋಣಿಯಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ
Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !
Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು
RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ
Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ