ರಾಜ್ಯಕ್ಕೆ ಇಂದು ಅಮಿತ್‌ ಶಾ :ಬಿಜೆಪಿಯಲ್ಲಿ ಸಂಚಲನ ನಿರೀಕ್ಷೆ


Team Udayavani, Feb 21, 2019, 12:53 AM IST

amit-shah-800.jpg

ಬೆಂಗಳೂರು: ಲೋಕಸಭಾ ಚುನಾವಣೆ ಸಮೀಪಿಸುತ್ತಿರುವ ಹೊತ್ತಿನಲ್ಲೇ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್‌ ಶಾ ಅವರು ಗುರುವಾರ ಬೆಂಗಳೂರಿಗೆ ಭೇಟಿ ನೀಡುತ್ತಿದ್ದು, ರಾಜ್ಯ ಬಿಜೆಪಿಯಲ್ಲಿ ಸಂಚಲನ ಮೂಡಿಸುವ ನಿರೀಕ್ಷೆ ಮೂಡಿದೆ.

ಲೋಕಸಭಾ ಚುನಾವಣೆಗೆ ರಾಜ್ಯ ಬಿಜೆಪಿಯ ಈವರೆಗಿನ ಪ್ರಯತ್ನ, ಕಾರ್ಯ ಕ್ರಮಗಳು, ರಾಷ್ಟ್ರೀಯ ಬಿಜೆಪಿ ನೀಡಿ ರುವ ಕಾರ್ಯಕ್ರಮಗಳ ಅನುಷ್ಠಾನ, ಪ್ರಗತಿ ಬಗ್ಗೆಯೂ ಅಮಿತ್‌ ಶಾ ಅವರು ಮಾಹಿತಿ ಪಡೆಯುವ ಸಂಭವವಿದೆ. ಜತೆಗೆ ಲೋಕಸಭಾ ಚುನಾವಣೆ ಸಿದ್ಧತೆ  ಹಾಗೂ ಮುಂದಿನ ಕಾರ್ಯತಂತ್ರಗಳ ಬಗ್ಗೆ ಸ್ಪಷ್ಟ ಸೂಚನೆ ನೀಡಿ ಚುನಾವಣೆ ಕಾರ್ಯಗಳಲ್ಲಿ ಸಕ್ರಿಯವಾಗಿ ತೊಡಿಗಿಸಿಕೊಳ್ಳುವಂತೆ ರಾಜ್ಯ ನಾಯಕರನ್ನು ಉತ್ತೇಜಿಸುವ ಸಾಧ್ಯತೆ ಇದೆ ಎನ್ನಲಾಗಿದೆ.

ಸಿಂಧನೂರು ಹಾಗೂ ಹೊಸಪೇಟೆಯಲ್ಲಿ ಈಗಾಗಲೇ ಸಮಾವೇಶ ನಡೆಸಿರುವ ಅಮಿಶ್‌ ಶಾ ಅವರು ಎರಡನೇ ಬಾರಿಗೆ ರಾಜ್ಯಕ್ಕೆ ಭೇಟಿ ನೀಡುತ್ತಿದ್ದಾರೆ. ದೇವನಹಳ್ಳಿ ಬಳಿಯ ಆವತಿಯಲ್ಲಿನ ಅನಂತ ವಿದ್ಯಾನಿಕೇತನದಲ್ಲಿ ಮಧ್ಯಾಹ್ನ 3.45ಕ್ಕೆ ಶಕ್ತಿಕೇಂದ್ರ ಪ್ರಮುಖರ ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ.

ಸಂಜೆ 5 ಗಂಟೆಗೆ ಯಲಹಂಕದ ರಾಯಲ್‌ ಆರ್ಕಿಡ್‌ ಹೋಟೆಲ್‌ನಲ್ಲಿ ಶಾಸಕರು, ವಿಧಾನ ಪರಿಷತ್‌ ಸದಸ್ಯರು, ಸಂಸದರ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ. 7.15ಕ್ಕೆ ಲೋಕಸಭಾ ಪ್ರಭಾರಿಗಳು, ಸಂಚಾಲಕರು, ವಿಸ್ತಾರಕರು, ರಾಜ್ಯ ಪದಾಧಿಕಾರಿಗಳು, ಜಿಲ್ಲಾ ಅಧ್ಯಕ್ಷರು, ವಿಭಾಗ ಸಂಘಟನಾ ಕಾರ್ಯದರ್ಶಿಗಳು, ಕ್ಲಸ್ಟರ್‌ ಉಸ್ತುವಾರಿಗಳ ಸಭೆಯಲ್ಲಿ ಮಾರ್ಗದರ್ಶನನೀಡಲಿದ್ದಾರೆ. ರಾತ್ರಿ 9ಕ್ಕೆ ಕೋರ್‌ ಕಮಿಟಿ ಸಭೆಯಲ್ಲೂ ಭಾಗವಹಿಸಿ, ಹೋಟೆಲ್‌ನಲ್ಲೇ ರಾತ್ರಿ ವಾಸ್ತವ್ಯ ಹೂಡಿ, ಶುಕ್ರವಾರ ಬೆಳಗ್ಗೆ ತೆರಳಲಿದ್ದಾರೆ.

ಮುಂಬರುವ ಲೋಕಸಭಾ ಚುನಾವಣೆಗೆ ಸಂಬಂಧಪಟ್ಟಂತೆ ಕೇಂದ್ರ ಬಿಜೆಪಿಯು 23 ಅಂಶಗಳ ಕಾರ್ಯಕ್ರಮವನ್ನು ರಾಜ್ಯ ಬಿಜೆಪಿಗೆ ನೀಡಿತ್ತು. ಅದರ ಅನುಷ್ಠಾನ, ಸ್ಥಿತಿಗತಿ ಬಗ್ಗೆ ರಾಜ್ಯ ನಾಯಕರು ಮಾಹಿತಿ ನೀಡಲು ಸಿದಟಛಿತೆ ನಡೆಸಿದ್ದಾರೆ. ಲೋಕಸಭಾ ಚುನಾವಣೆ ಸಿದಟಛಿತೆ ಬಗ್ಗೆ ತಮ್ಮ ಬಳಿಯಿರುವ ಮಾಹಿತಿಯನ್ನು ಅಮಿತ್‌ ಶಾ ಅವರು ರಾಜ್ಯ ನಾಯಕರು ಸಲ್ಲಿಸುವ ಮಾಹಿತಿಯೊಂದಿಗೆ ತಾಳೆ ಹಾಕಿ ಪರಿಶೀಲಿಸುವ ಸಾಧ್ಯತೆಯೂ ಇದೆ ಎಂದು ಹೇಳಲಾಗಿದೆ.

ಶಕ್ತಿ ಕೇಂದ್ರ ಪ್ರಮುಖರ ಸಮಾವೇಶದಲ್ಲಿ ಪಾಲ್ಗೊಂಡ ಬಳಿಕ ಶಾ ಅವರು, ಸಂಸದರು, ಶಾಸಕರು, ವಿಧಾನ ಪರಿಷತ್‌ ಸದಸ್ಯರ ಸಭೆ ಕರೆದಿದ್ದು, ಲೋಕಸಭಾ ಚುನಾವಣೆ ದೃಷ್ಟಿಯಿಂದ ನಿರ್ದಿಷ್ಟ ಸೂಚನೆಗಳನ್ನು ನೀಡುವ ನಿರೀಕ್ಷೆಯಿದೆ. ಹಾಗೆಯೇ ರಾಜ್ಯ ರಾಜಕೀಯ ಬೆಳವಣಿಗೆಗೆ ಪೂರಕವಾಗಿ ಅನುಸರಿಸಬೇಕಾದ ಕಾರ್ಯತಂತ್ರಗಳ ಬಗ್ಗೆಯೂ ಕೆಲ ನಿರ್ದೇಶನ ನೀಡುವ ಸಾಧ್ಯತೆ ಇದೆ ಎಂದು ರಾಜ್ಯ ಬಿಜೆಪಿ ನಾಯಕರೊಬ್ಬರು ತಿಳಿಸಿದರು.

ರಾತ್ರಿ 9 ಗಂಟೆಗೆ ಕೋರ್‌ ಕಮಿಟಿ ಸಭೆಯಲ್ಲೂ ಪಾಲ್ಗೊಂಡು ಅವರು ಚರ್ಚೆ ನಡೆಸಲಿದ್ದಾರೆ. ಇದೇ ವೇಳೆ, ರಾಜ್ಯ ಬಿಜೆಪಿಯಲ್ಲಿನ ಇತ್ತೀಚಿನ ಬೆಳವಣಿಗೆಗಳ ಬಗ್ಗೆಯೂ ಚರ್ಚೆ ನಡೆಸುವ ಸಾಧ್ಯತೆ ಇದೆ. ಹಾಗೆಯೇ ರಾಜ್ಯ ಲೋಕಸಭಾ ಕ್ಷೇತ್ರಗಳಿಗೆ ಅಭ್ಯರ್ಥಿಗಳ ಆಯ್ಕೆ ಬಗ್ಗೆಯೂ ಆಯ್ದ ನಾಯಕರೊಂದಿಗೆ
ಅನೌಪಚಾರಿಕವಾಗಿ ಚರ್ಚೆ ನಡೆಸಬಹುದು ಎನ್ನಲಾಗಿದೆ.

ಟಾಪ್ ನ್ಯೂಸ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

1-aaaaaa

BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ

1-weqwewqe

Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!

Exam

CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Minchu

Bidar; ಬಿರುಗಾಳಿ‌ ಸಹಿತ ಭಾರಿ ಮಳೆ :ಸಿಡಿಲು ಬಡಿದು‌ ರೈತ ಸಾವು

Exam

CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

1-aaaaaa

BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ

1-weqwewqe

Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!

Minchu

Bidar; ಬಿರುಗಾಳಿ‌ ಸಹಿತ ಭಾರಿ ಮಳೆ :ಸಿಡಿಲು ಬಡಿದು‌ ರೈತ ಸಾವು

1-wewqewqe

Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.