ರಾಜ್ಯಕ್ಕೆ ನಾಲ್ವರು ಡಿಸಿಎಂ?, ಮಹತ್ವದ ಬದಲಾವಣೆಗೆ ವರಿಷ್ಠರ ಸಿದ್ಧತೆ‌

ರಾಜ್ಯ ಬಿಜೆಪಿಯಲ್ಲಿ ಶಾ ಕುತೂಹಲ

Team Udayavani, May 3, 2022, 7:00 AM IST

ರಾಜ್ಯ ಬಿಜೆಪಿಯಲ್ಲಿ ಶಾ ಕುತೂಹಲ; ಭೋಜನಕೂಟಕ್ಕೆ ಎಲ್ಲ ಶಾಸಕರು,ಪದಾಧಿಕಾರಿಗಳಿಗೆ ಸಿಎಂ ಆಹ್ವಾನ

ಬೆಂಗಳೂರು: ಕೇಂದ್ರ ಗೃಹ ಸಚಿವ ಅಮಿತ್‌ ಶಾ ಆಗಮನವು ಸರಕಾರದಲ್ಲಿ ದೊಡ್ಡ ಮಟ್ಟದ ಬದಲಾವಣೆಯ ಸುಳಿವು ನೀಡಿದೆ.

ಸಂಪುಟ ಪುನಾರಚನೆ ಹಾಗೂ ನಾಯಕತ್ವ ಬದಲಾವಣೆಯ ಕುರಿತು ಚರ್ಚೆಯಾಗುತ್ತಿರುವಂತೆಯೇ, ಹೊಸ ಬೆಳವಣಿಗೆ ಎಂಬಂತೆ ಮತ್ತೆ ಡಿಸಿಎಂ ಹುದ್ದೆ ಸೃಷ್ಟಿಸಲು ಬಿಜೆಪಿ ವರಿಷ್ಠರು ಚಿಂತನೆ ನಡೆಸಿದ್ದಾರೆ ಎಂದು ಹೇಳಲಾಗಿದೆ.

ಸೋಮವಾರ ರಾತ್ರಿಯೇ ಅಮಿತ್‌ ಶಾ ರಾಜ್ಯಕ್ಕೆ ಆಗಮಿಸಿದ್ದು, ಮಂಗಳವಾರ ಪಕ್ಷದ ನಾಯಕರ ಜತೆ ವಿವಿಧ ಹಂತದಲ್ಲಿ ಮಾತುಕತೆ ನಡೆಸಲಿದ್ದಾರೆ. ಮುಂದಿನ ವಿಧಾನಸಭೆ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು, ಸರಕಾರದಲ್ಲಿ ಮಹತ್ವದ ಬದಲಾವಣೆ ತರಲು ಬಿಜೆಪಿ ವರಿಷ್ಠರು ಸಿದ್ಧತೆ ನಡೆಸಿದ್ದಾರೆ.

ಮೂರು ಅಥವಾ ನಾಲ್ಕು ಡಿಸಿಎಂ ಹುದ್ದೆಗಳನ್ನು ಸೃಷ್ಟಿಸುವ ಕುರಿತು ಚಿಂತನೆ ನಡೆದಿದ್ದು, ಮಂಗಳವಾರ ಶಾ ನಡೆಸುವ ಸಭೆಯಲ್ಲಿ ಈ ಬಗ್ಗೆ ಚರ್ಚೆಯಾಗುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ.

ಭೋಜನಕೂಟದಲ್ಲಿ ಭಾಗಿ
ಶಾ ಮಂಗಳವಾರ ಸಿಎಂ ಬಸವರಾಜ ಬೊಮ್ಮಾಯಿ ಅವರ ಸರಕಾರಿ ನಿವಾಸದಲ್ಲಿ ಭೋಜನ ಕೂಟದಲ್ಲಿ ಪಾಲ್ಗೊಳ್ಳಲಿದ್ದಾರೆ. ಸಚಿವ ಸಂಪುಟದ ಸದಸ್ಯರು, ಶಾಸಕರು ಹಾಗೂ ಪಕ್ಷದ ಪದಾಧಿಕಾರಿಗಳಿಗೂ ಭೋಜನ ಕೂಟಕ್ಕೆ ಸಿಎಂ ಬೊಮ್ಮಾಯಿ ಆಹ್ವಾನ ನೀಡಿರುವುದು ಚರ್ಚೆಗೆ ಹಾಗೂ ಕುತೂಹಲಕ್ಕೆ ಗ್ರಾಸವಾಗಿದೆ. ಅನಂತರ ಖಾಸಗಿ ಹೊಟೇಲ್‌ನಲ್ಲಿ ಅಮಿತ್‌ ಶಾ ಪಕ್ಷದ ಪದಾಧಿಕಾರಿಗಳು ಹಾಗೂ ಕೋರ್‌ ಕಮಿಟಿ ಸದಸ್ಯರೊಂದಿಗೆ ವಿಶೇಷ ಸಭೆಯಲ್ಲಿ ಪಾಲ್ಗೊಳ್ಳಲಿದ್ದು, ಈ ಸಭೆಯಲ್ಲಿ ಪ್ರಮುಖವಾಗಿ ಚುನಾವಣೆಯ ಸಿದ್ಧತೆ, ಪಕ್ಷದ ಸಂಘಟನೆ ಹಾಗೂ ಸರಕಾರದ ಯೋಜನೆಗಳ ಅನುಷ್ಠಾನ ಮತ್ತು ಅವುಗಳನ್ನು ಜನರಿಗೆ ತಲುಪಿಸುವ ಕುರಿತು ಚರ್ಚೆಯಾಗಲಿದೆ ಎಂಬ ಮಾಹಿತಿ ಲಭ್ಯವಾಗಿದೆ.

ನಡ್ಡಾ ನಿವಾಸದಲ್ಲಿ ಸಭೆ
ಇನ್ನೊಂದೆಡೆ, ಶಾ ಆಗಮನಕ್ಕೂ ಮುನ್ನ ದಿಲ್ಲಿಯಲ್ಲಿ ಬಿಜೆಪಿಯ ಪ್ರಮುಖ ನಾಯಕರು ಹಾಗೂ ಆರೆಸ್ಸೆಸ್‌ನ ಪ್ರಮುಖರು ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ನಿವಾಸದಲ್ಲಿ ಸಭೆ ನಡೆಸಿದ್ದಾರೆ. ಸಂಘಟನಾತ್ಮಕ ವಿಚಾರಗಳು, ಪಕ್ಷ ಹಾಗೂ ಸರಕಾರದ ನಡುವಿನ ಸಮನ್ವಯತೆ, ಕರ್ನಾಟಕ ಸಹಿತ ಮುಂಬರುವ ವಿಧಾನಸಭೆ ಚುನಾವಣ ಕಾರ್ಯತಂತ್ರಗಳ ಕುರಿತೂ 3 ಗಂಟೆ ಕಾಲ ಚರ್ಚೆ ನಡೆದಿದೆ ಎನ್ನಲಾಗಿದೆ.

ಬಿಎಸ್‌ವೈ- ಬೊಮ್ಮಾಯಿ ಭೇಟಿ
ಮಹತ್ವದ ಬೆಳವಣಿಗೆಯೊಂದರಲ್ಲಿ ಸೋಮ ವಾರ ತಡರಾತ್ರಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮಾಜಿ ಸಿಎಂ ಬಿ.ಎಸ್‌. ಯಡಿಯೂರಪ್ಪ ಅವರನ್ನು ಭೇಟಿ ಯಾಗಿ ಮಾತುಕತೆ ನಡೆಸಿದ್ದಾರೆ.

ಕೇಂದ್ರ ಗೃಹ ಸಚಿವ ಅಮಿತ್‌ ಶಾ ರಾಜ್ಯ ಪ್ರವಾಸದ ವೇಳೆ ನಾಯಕತ್ವ ಬದಲಾವಣೆ ಬಗ್ಗೆ ಯಾವುದೇ ಚರ್ಚೆಯಾಗುವುದಿಲ್ಲ. ಸಚಿವ ಸಂಪುಟ ವಿಸ್ತರಣೆ ಅಥವಾ ಪುನಾರಚನೆ ಮುಖ್ಯಮಂತ್ರಿಗಳ ಪರಮಾಧಿಕಾರ. ಈ ಬಗ್ಗೆ ಅವರು ನಿರ್ಧಾರ ಕೈಗೊಳ್ಳಲಿದ್ದಾರೆ. ಇದರಲ್ಲಿ ಪಕ್ಷದ ವರಿಷ್ಠರು ಹಸ್ತಕ್ಷೇಪ ಮಾಡುವುದಿಲ್ಲ.
– ನಳಿನ್‌ ಕುಮಾರ್‌ ಕಟೀಲು, ಬಿಜೆಪಿ ರಾಜ್ಯಾಧ್ಯಕ್ಷ

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.