ಸುಬ್ರಹ್ಮಣ್ಯ ಸಮೀಪ ಗಾಯಗೊಂಡ ಕಾಡಾನೆ ಪತ್ತೆ
Team Udayavani, May 9, 2019, 3:00 AM IST
ಸುಬ್ರಹ್ಮಣ್ಯ: ಪಶ್ಚಿಮಘಟ್ಟ ಸಾಲಿನಲ್ಲಿ ಬರುವ ಸುಬ್ರಹ್ಮಣ್ಯ ಅರಣ್ಯ ಇಲಾಖೆಗೆ ಸೇರಿದ ಬಾಳುಗೋಡು ಮೀಸಲು ಅರಣ್ಯದಲ್ಲಿ ಗಾಯಗೊಂಡ ಸ್ಥಿತಿಯಲ್ಲಿ ಸಲಗವೊಂದು ಬುಧವಾರ ಕಂಡು ಬಂದಿದೆ.
ಬಾಳುಗೋಡು ಗ್ರಾಮದ ಪದಕ ಮಿತ್ತಡ್ಕ ನಿವಾಸಿಗಳಿಬ್ಬರು ಬುಧವಾರ ಕಾಡಿನಿಂದ ಪ್ರಾಕೃತಿಕವಾಗಿ ಹರಿದು ಬರುವ ನೀರಿನ ಸಂಪರ್ಕ ಸರಿಪಡಿಸಲೆಂದು ಕಾಡಿನತ್ತ ತೆರಳಿದ್ದರು. ಈ ವೇಳೆಗೆ ಮೀಸಲು ಅರಣ್ಯ ವ್ಯಾಪ್ತಿಯ ಜನವಸತಿ ಪ್ರದೇಶದಿಂದ ಸುಮಾರು 5 ಕಿ.ಮೀ.ದೂರದಲ್ಲಿ ಈ ಆನೆ ಗೋಚರಿಸಿತು.
ಅವರು ಮರಳಿ ಬಂದು ಸುಬ್ರಹ್ಮಣ್ಯ ಅರಣ್ಯ ಇಲಾಖೆ ಸಿಬ್ಬಂದಿಗೆ ಮಾಹಿತಿ ನೀಡಿದರು. ಅರಣ್ಯ ಸಿಬ್ಬಂದಿ ಕಾಡಿಗೆ ತೆರಳಿ, ಪರಿಶೀಲಿಸಿ, ಆನೆಗೆ ಗಾಯವಾಗಿರುವುದನ್ನು ದೃಢಪಡಿಸಿದ್ದಾರೆ. ಆನೆಯ ಮುಂಭಾಗದ ಕಾಲಿಗೆ ಏಟಾಗಿದ್ದು, ಊದಿಕೊಂಡಿದೆ. ಆನೆ ಕುಂಟುತ್ತ ಸಾಗುತ್ತಿದೆ.
ಬಾಳುಗೋಡಿನ ಪದಕ ಮಿತ್ತಡ್ಕ ಪರಿಸರದಲ್ಲಿ 10 ದಿನಗಳಿಂದ ಆನೆಯೊಂದು ಓಡಾಡುತ್ತಿತ್ತು. ತೋಟಗಳಿಗೂ ದಾಳಿ ನಡೆಸುತ್ತಿತ್ತು. ಈ ಆನೆಯೇ ಅದಾಗಿರಬಹುದು ಎಂದು ಮಿತ್ತಡ್ಕ ನಿವಾಸಿಗಳು ಶಂಕೆ ವ್ಯಕ್ತಪಡಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳಿವಳಿಕೆಯಾಗಿದ್ದರೆ ಸರಿಪಡಿಸುವೆ: ಸಚಿವ ಪ್ರಹ್ಲಾದ ಜೋಶಿ
ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ
ಕಾಂಗ್ರೆಸ್ ನವರು ಕೇಸರಿ ಶಾಲು ಹಾಕಿದಾಕ್ಷಣ ಮನಸ್ಥಿತಿ ಬದಲಾಗಲ್ಲ… ಶೆಟ್ಟರ್ ಆರೋಪ
2014 ರಿಂದಲೇ ಜೆಡಿಎಸ್ ಬಿಜೆಪಿ ಮೈತ್ರಿಯಲ್ಲಿವೆ ಇದು ಹೊಸದೇನಲ್ಲ… HDK
Raids: ಕೊಪ್ಪಳ ಕೃಷಿ ಇಲಾಖೆ ಉಪ ನಿರ್ದೇಶಕ ಸಹದೇವ ಯರಗುಪ್ಪಾ ಮನೆ ಮೇಲೆ ಲೋಕಾಯುಕ್ತ ದಾಳಿ
MUST WATCH
ಹೊಸ ಸೇರ್ಪಡೆ
Mollywood: “ಆಡುಜೀವಿತಂ” ಮೇಲೆ ಪೃಥ್ವಿರಾಜ್ ನಿರೀಕ್ಷೆ
ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳಿವಳಿಕೆಯಾಗಿದ್ದರೆ ಸರಿಪಡಿಸುವೆ: ಸಚಿವ ಪ್ರಹ್ಲಾದ ಜೋಶಿ
ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ
Sandalwood: ಪ್ರಕೃತಿಯ ಸುತ್ತ “ಕೃಷ್ಣಾವತಾರ’
Gadag: ಭ್ರಷ್ಟ ಅಧಿಕಾರಿಗೆ ಬಿಸಿ ಮುಟ್ಟಿಸಿದ ಲೋಕಾಯುಕ್ತ ಅಧಿಕಾರಿಗಳು