ಆನಂದ್ ಸಿಂಗ್ ಆಸ್ಪತ್ರೆಗೆ ದಾಖಲು :ಆಕ್ರೋಶ, ಉದ್ವಿಗ್ನ ಸ್ಥಿತಿ
Team Udayavani, Jan 20, 2019, 2:47 PM IST
ಬೆಂಗಳೂರು: ಕಾಂಗ್ರೆಸ್ ಶಾಸಕ ಆನಂದ್ ಸಿಂಗ್ ಅವರು ಹಲ್ಲೆಗೊಳಗಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ ಎನ್ನುವ ಸುದ್ದಿ ಕೇಳಿದೊಡನೆಯೇ ವಿಜಯನಗರ ಕ್ಷೇತ್ರದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದ್ದು ಬೆಂಬಲಿಗರು ಬೀದಿಗಿಳಿದು ಟಯರ್ಗೆ ಬೆಂಕಿ ಹಚ್ಚಿ ಆಕ್ರೋಶ ಹೊರ ಹಾಕಿದ್ದಾರೆ.
ಸಾಮಾಜಿಕ ತಾಣಗಳಲ್ಲೂ ಆಕ್ರೋಶ ಹೊರ ಹಾಕಿದ್ದು , ಹಲ್ಲೆ ನಡೆಸಿದ್ದಾರೆ ಎನ್ನಲಾದ ಕಂಪ್ಲಿ ಶಾಸಕ ಗಣೇಶ್ ವಿರುದ್ಧ ಆಕ್ರೋಶ ಹೊರ ಹಾಕಿದ್ದಾರೆ.
ಇನ್ನೂ ಕೆಲ ಬೆಂಬಲಿಗರು ಬೆಂಗಳೂರಿನತ್ತ ತೆರಳಿದ್ದು ತೀವ್ರ ಆತಂಕಕಾರಿ ಸ್ಥಿತಿ ನಿರ್ಮಾಣವಾಗಿದ್ದು , ಬಳ್ಳಾರಿ ಮತ್ತು ಬೆಂಗಳೂರಿನಲ್ಲಿ ಆನಂದ್ ಸಿಂಗ್ ಅವರು ದಾಖಲಾಗಿರುವ ಅಪೋಲೋ ಆಸ್ಪತ್ರಗೆ ಬಿಗಿ ಭದ್ರತೆ ಕೈಗೊಳ್ಳಲಾಗಿದೆ.
ಮೃತ್ಯುಂಜಯ ನಗರದಲ್ಲಿರುವ ಶಾಸಕ ಗಣೇಶ್ ನಿವಾಸಕ್ಕೂ ಬಿಗಿ ಭದ್ರತೆ ಕೈಗೊಳ್ಳಲಾಗಿದೆ.
ಈಗಲ್ಟನ್ ರೆಸಾರ್ಟ್ ನಲ್ಲಿ ಬಳ್ಳಾರಿ ಜಿಲ್ಲೆಯ ಕುರಿತಾಗಿನ ಚರ್ಚೆಯ ವೇಳೆ ಆನಂದ ಸಿಂಗ್ ಮತ್ತು ಜೆ.ಎನ್.ಗಣೇಶ್ ಜಗಳವಾಡಿದ್ದಾರೆಂದು ಹೇಳವಾಗಿದೆ. ಶಾಸಕ ಆನಂದ್ ಸಿಂಗ್ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ.
ಇದೊಂದು ಫ್ರೆಂಡ್ಲಿ ಫೈಟ್ ಎಂದು ಸಚಿವ ಬಿ.ಝಡ್.ಜಮೀರ್ ಅಹಮದ್ ಖಾನ್ ಅವರು ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದಾರೆ. ಅವರ ಈ ಹೇಳಿಕೆಯಿಂದ ಹೊಡೆದಾಟ ನಡೆದಿರುವುದು ಖಚಿತವಾಗಿದೆ.
ಅವರೆಲ್ಲಾ ಸ್ನೇಹಿತರು, ಇದು ಸಣ್ಣ ಪುಟ್ಟ ಹೊಡೆದಾಟ ಎಂದು ಜಮೀರ್ ಹೇಳಿದ್ದಾರೆ. ಆನಂದ ಸಿಂಗ್ , ಭೀಮಾ ನಾಯ್ಕ ಮತ್ತು ಗಣೇಶ್ ನಡುವೆ ಜಗಳ ನಡೆದಿದೆ ಎಂದು ತಿಳಿದು ಬಂದಿದೆ.
ಇದುವರೆಗೆ ಈ ಬಗ್ಗೆ ಯಾವುದೇ ದೂರು ದಾಖಲಾಗಿಲ್ಲ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು
Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ
ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ
90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ
LS Polls: ರಾಜ್ಯದ ಜನರಿಗೆ ಈಶ್ವರಪ್ಪ ಸ್ಪರ್ಧೆ ವಿಷಯ ಈಗ ಖಚಿತ: ಈಶ್ವರಪ್ಪ
MUST WATCH
ಹೊಸ ಸೇರ್ಪಡೆ
Subramanya ಏನೆಕಲ್ಲು: ಕಾರಿಗೆ ಗೂಡ್ಸ್ ಆಟೋ ಢಿಕ್ಕಿ
Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್ ಗಾಂಧಿ
Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು
Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ
ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ