ಸಚಿವರ ಗೈರು ಹಾಜರಿಗೆ ಗರಂ!
Team Udayavani, Feb 20, 2020, 3:03 AM IST
ವಿಧಾನಸಭೆ: ಬೆಳಗ್ಗೆ ಕಲಾಪ ಆರಂಭವಾದಾಗ ಬೆರ ಳೆಣಿಕೆ ಸಚಿವರಷ್ಟೇ ಹಾಜರಿದ್ದು ಬಹಳಷ್ಟು ಮಂದಿ ಗೈರಾಗಿದ್ದಕ್ಕೆ ಪ್ರತಿಪಕ್ಷ ನಾಯಕ ಸಿದ್ದ ರಾಮಯ್ಯ ಸೇರಿದಂತೆ ಕಾಂಗ್ರೆಸ್ನ ಶಾಸಕರು ಗರಂ ಆದರು! ಬುಧವಾರ ಬೆಳಗ್ಗೆ 11.12ಕ್ಕೆ ಸದನ ಆರಂಭವಾದಾಗ ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ, ಸಚಿವರಾದ ಕೆ.ಎಸ್.ಈಶ್ವರಪ್ಪ, ಪ್ರಭು ಚೌಹಾಣ್, ಡಾ.ಕೆ.ಸುಧಾಕರ್ ಮಾತ್ರ ಇದ್ದರು.
ಸದನದಲ್ಲಿ ಸಚಿವರೇ ಇಲ್ಲ. ಈ ರೋಗ ಎಲ್ಲಾ ಕಾಲ ದಲ್ಲೂ ಇದೆ. ಈ ಕಾಲದಲ್ಲೂ ಮುಂದುವರಿದಿದೆ. ಹೊಸ ಸಚಿವರ ಪೈಕಿ ಡಾ.ಕೆ.ಸುಧಾಕರ್ ಮಾತ್ರ ಇದ್ದಾರೆ. ಹೊಸ ಸಚಿವರಾದವರು ಎರಡೇ ದಿನಕ್ಕೆ ಸದನದ ಬಗ್ಗೆ ಆಸಕ್ತಿ ಕಳೆದುಕೊಂಡರೆ ಹೇಗೆ. ಸಚಿವರು, ಅಧಿಕಾರಿಗಳು ಇಲ್ಲದಿದ್ದರೆ ನಮ್ಮ ಮಾತು ಅರಣ್ಯ ರೋದನವಾಗುತ್ತದೆ ಎಂದು ಸಿದ್ದರಾಮಯ್ಯ ಹೇಳಿದರು.ಮುಖ್ಯಮಂತ್ರಿ ಬಿ.ಎಸ್.ಯಡಿಯೂ ರಪ್ಪ, ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರು ಇಲ್ಲದಿರುವ ಬಗ್ಗೆಯೂ ಕಾಂಗ್ರೆಸ್ ಶಾಸಕರು ಆಕ್ಷೇಪ ವ್ಯಕ್ತಪಡಿಸಿದರು.
ಬಳಿಕ ಮಾತನಾಡಿದ ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ, ಸಚಿವರು, ಶಾಸಕರು ಸ್ವಯಂ ಜವಾಬ್ದಾರಿ ಅರಿತು ಸದನಕ್ಕೆ ಹಾಜರಾಗ ಬೇಕೆ ಹೊರತು ಪ್ರತಿ ಬಾರಿ ಹೇಳಿಸಿ ಕೊಳ್ಳ ಬಾರದು. ಮುಖ್ಯ ಸಚೇತ ಕರು ಈ ಬಗ್ಗೆ ಗಮನ ಹರಿಸಬೇಕು ಎಂದು ಸೂಚನೆ ನೀಡಿದರು. ತಕ್ಷ ಣಕ್ಕೆ ಸದನಕ್ಕೆ ಬಂದ ಗೃಹ ಸಚಿವ ಬಸವರಾಜ ಬೊಮ್ಮಾಯಿ, ತಡವಾಗಿದ್ದಕ್ಕೆ ಕ್ಷಮೆ ಕೋರಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
MUST WATCH
ಹೊಸ ಸೇರ್ಪಡೆ
Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ
Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ