ಉಪ ಚುನಾವಣೆ ಬಳಿಕ ರಾಜಕೀಯದಲ್ಲಿ ತಲ್ಲಣ
Team Udayavani, Nov 13, 2019, 3:03 AM IST
ಬೆಳಗಾವಿ: ಉಪಚುನಾವಣೆ ನಂತರ ಮಹಾರಾಷ್ಟ್ರ ರೀತಿ ರಾಜ್ಯದಲ್ಲೂ ಮತ್ತೆ ರಾಜಕೀಯ ಅತಂತ್ರ ಸ್ಥಿತಿ ನಿರ್ಮಾಣವಾಗಲಿದ್ದು ಆಗ ಕೆಲ ಶಾಸಕರು ಪಕ್ಷ ಬದಲಾಯಿಸಲಿದ್ದಾರೆ ಎಂದು ಶಾಸಕ ಸತೀಶ ಜಾರಕಿಹೊಳಿ ಹೇಳಿದ್ದಾರೆ. ಮಂಗಳವಾರ ಸುದ್ದಿಗಾರರ ಜತೆ ಮಾತನಾಡಿ, ಉಪಚುನಾವಣೆ ಬಳಿಕ ಪಕ್ಷಾಂತರಿ ಶಾಸಕರಿಗೆ ಬಹಳ ಬೇಡಿಕೆ ಬರಲಿದೆ.
ಈ ನಿಟ್ಟಿನಲ್ಲಿ ರಾಜಕೀಯ ಚಟುವಟಿಕೆ ಹಾಗೂ ಚರ್ಚೆಗಳು ಸಹ ನಡೆದಿವೆ. ಉಪಚುನಾವಣೆಯಲ್ಲಿ ಕಾಂಗ್ರೆಸ್ ಹತ್ತು ಹಾಗೂ ಜೆಡಿಎಸ್ ಎರಡರಲ್ಲಿ ಜಯ ಗಳಿಸಲಿವೆ. ಈ ಫಲಿತಾಂಶ ರಾಜ್ಯದಲ್ಲಿ ಮತ್ತೆ ಅತಂತ್ರ ಸ್ಥಿತಿ ನಿರ್ಮಾಣವಾಗಲು ಕಾರಣವಾಗಲಿದೆ. ಫಲಿತಾಂಶ ನೋಡಿಕೊಂಡು ಒಂದಿಷ್ಟು ಶಾಸಕರು ಪಕ್ಷ ಬದಲಾಯಿಸಲು ಚಿಂತನೆ ನಡೆಸಿದ್ದಾರೆ ಎಂದರು.
ಯಾವುದೇ ಕಾರಣಕ್ಕೂ ಗೋಕಾಕ ಕ್ಷೇತ್ರದಿಂದ ಸ್ಪರ್ಧೆಮಾಡುವುದಿಲ್ಲ. ಯಮಕನಮರಡಿ ಕ್ಷೇತ್ರ ಬದಲಾಯಿಸುವ ಪ್ರಶ್ನೆಯೇ ಇಲ್ಲ. ಕಳೆದ ಚುನಾವಣೆಯಲ್ಲಿ ನಾನು ಯಾವುದೇ ಪ್ರಚಾರ ಮಾಡದೇ ಇದ್ದರೂ ಕ್ಷೇತ್ರದ ಜನರು ನನ್ನನ್ನು ಆಯ್ಕೆ ಮಾಡಿ ಕಳಿಸಿದ್ದಾರೆ. ಹೀಗಿರುವಾಗ ಯಮಕನಮರಡಿ ಕ್ಷೇತ್ರ ತೊರೆಯುವ ಆಲೋಚನೆಯನ್ನೂ ಮಾಡುವುದಿಲ್ಲ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್
ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳಿವಳಿಕೆಯಾಗಿದ್ದರೆ ಸರಿಪಡಿಸುವೆ: ಸಚಿವ ಪ್ರಹ್ಲಾದ ಜೋಶಿ
ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ
ಕಾಂಗ್ರೆಸ್ ನವರು ಕೇಸರಿ ಶಾಲು ಹಾಕಿದಾಕ್ಷಣ ಮನಸ್ಥಿತಿ ಬದಲಾಗಲ್ಲ… ಶೆಟ್ಟರ್ ಆರೋಪ
2014 ರಿಂದಲೇ ಜೆಡಿಎಸ್ ಬಿಜೆಪಿ ಮೈತ್ರಿಯಲ್ಲಿವೆ ಇದು ಹೊಸದೇನಲ್ಲ… HDK