ದೇಶಕ್ಕೆ ಅಪಾಯವಿರುವುದು ಕುಟುಂಬವಾದಿ ಪಕ್ಷದಿಂದಲ್ಲ,ಬಿಜೆಪಿಯಂಥ ಕೋಮುವಾದಿ ಪಕ್ಷದಿಂದ:ಎಚ್ಡಿಕೆ

ಭಾರತವೆಂದರೆ ಬಿಜೆಪಿಯಷ್ಟೇ ಅಲ್ಲ, 140 ಕೋಟಿಗೂ ಹೆಚ್ಚು ಭಾರತೀಯರಿದ್ದಾರೆ: ಕುಮಾರಸ್ವಾಮಿ

Team Udayavani, May 27, 2022, 1:19 PM IST

ದೇಶಕ್ಕೆ ಅಪಾಯವಿರುವುದು ಕುಟುಂಬವಾದಿ ಪಕ್ಷದಿಂದಲ್ಲ,ಬಿಜೆಪಿಯಂಥ ಕೋಮುವಾದಿ ಪಕ್ಷದಿಂದ:ಎಚ್ಡಿಕೆ

ಬೆಂಗಳೂರು: “ಕುಟುಂಬ ಆಧರಿತ ಪಕ್ಷಗಳು ದೇಶಕ್ಕೆ ಮತ್ತು ಯುವಜನರ ಪಾಲಿಗೆ ದೊಡ್ಡ ಶತ್ರು. ಇದು ರಾಜಕಾರಣದ ದೊಡ್ಡ ಸಮಸ್ಯೆಯೂ ಹೌದು.” ಎಂಬ ಪ್ರಧಾನಿ ನರೇಂದ್ರ ಮೋದಿಯವರ ಭಾಷಣಕ್ಕೆ ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ ತಿರುಗೇಟು ನೀಡಿದ್ದಾರೆ. “ದೇಶಕ್ಕೆ ಅಪಾಯವಿರುವುದು ಕುಟುಂಬವಾದಿ ಪಕ್ಷಗಳಿಂದಲ್ಲ, ಬಿಜೆಪಿಯಂಥಹ ಕೋಮುವಾದಿ ಪಕ್ಷದಿಂದ” ಎಂದು ಕಿಡಿಕಾರಿದ್ದಾರೆ.

ಈ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಅವರು, ಕುಟುಂಬ ಪಕ್ಷಗಳ ಟೀಕೆ ನೆಪವಷ್ಟೇ. ಪ್ರಧಾನಿಯವರ ಮೂಲಗುರಿ ಪ್ರಾದೇಶಿಕ ಪಕ್ಷಗಳ ಮೂಲೋತ್ಪಾಟನೆ. ಕಾಂಗ್ರೆಸ್ ನೆಲಕಚ್ಚಿದ ಮೇಲೆ ಬಿಜೆಪಿಗೆ ಪ್ರತಿ ರಾಜ್ಯದಲ್ಲಿ ಎದುರಾಗುತ್ತಿರುವ ರಾಜಕೀಯ ವೈರಿಗಳೆಂದರೆ ಪ್ರಾದೇಶಿಕ ಪಕ್ಷಗಳೇ. ಇಂಥ ಬಲಿಷ್ಠ ಪಕ್ಷಗಳನ್ನು ಮುಗಿಸಲು ಬಿಜೆಪಿ ಏನೆಲ್ಲ ಅಡ್ಡದಾರಿ ಹಿಡಿಯಿತು ಎನ್ನುವುದು ಗುಟ್ಟೇನಲ್ಲ ಎಂದಿದ್ದಾರೆ.

ಲೋಕನಾಯಕ ಜಯಪ್ರಕಾಶ ನಾರಾಯಣ ಅವರ ಹೋರಾಟದ ಫಲಗಳಲ್ಲಿ ಜನಸಂಘವೂ ಒಂದು. ತುರ್ತು ಪರಿಸ್ಥಿತಿ ಹೇರಿದಾಗ ತಮ್ಮ ಆರೋಗ್ಯವನ್ನೂ ಲೆಕ್ಕಿಸದೇ ನೂರಾರು ಸಣ್ಣಪುಟ್ಟ ಪಕ್ಷಗಳನ್ನು ಒಗ್ಗೂಡಿಸಿದ್ದು ಅವರೇ. ಇವೆಲ್ಲಾ ಒಟ್ಟಾಗಿ ʼಜನತಾ ಪರಿವಾರʼ ಉದಯ ಆಯಿತು. ಈ ಪರಿವಾರ ಹಂತಹಂತವಾಗಿ ಬೆಳೆದು ಹೆಮ್ಮರವಾಗಿ, ಕ್ರಮೇಣ ಅನೇಕ ಟಿಸಿಲುಗಳೊಡೆದು ಬೇರೆ ಬೇರೆಯಾಯಿತು. ಬಿಜೆಪಿಯೂ ಈ ಪರಿವಾರದ ಒಂದು ತುಣುಕಷ್ಟೇ. ಜೆಡಿಎಸ್‌, ಜೆಡಿಯು, ಆರ್ʼಜೆಡಿ, ಬಿಜೆಡಿ, ಸಮಾಜವಾದಿ ಪಕ್ಷಗಳೆಲ್ಲ ಈ ಮಹಾವೃಕ್ಷದ ರೆಂಬೆ-ಕೊಂಬೆಗಳೇ. ಜನತಾ ಪರಿವಾರದ ಟಿಸಿಲುಗಳು ದೇಶದ ಉದ್ದಗಲಕ್ಕೂ ‌ಬೃಹತ್‌ ವೃಕ್ಷಗಳಾಗಿ ಬೆಳೆದು ನಿಂತಿವೆ. ಅವುಗಳ ಬೇರುಗಳು ಆಳಕ್ಕಿಳಿದು ಬಲಿಷ್ಠವಾಗಿವೆ; ಕೀಳುವುದು, ಅಲ್ಲಾಡಿಸುವುದು ಸುಲಭವಲ್ಲ. ಮೋದಿ ಅವರಿಗೆ ಈ ವಿಷಯವೂ ತಿಳಿಯದ್ದೇನಲ್ಲ. ಜನಸಂಘ ಬಿಜೆಪಿಯಾಗಿ ರೂಪಾಂತರಗೊಂಡು ಕೇಂದ್ರದಲ್ಲಿ ಅಧಿಕಾರ ಹಿಡಿದಿದ್ದು ತನ್ನ ಸ್ವಂತ ಶಕ್ತಿಯಿಂದೇನಲ್ಲ. ಇದೇ ಕುಟುಂಬ ಕೇಂದ್ರಿತ ಪಕ್ಷಗಳ ಊರುಗೋಲಿನಿಂದ. ಎನ್ ಡಿಎ ಹುಟ್ಟಿದ್ದು ಹೇಗೆ? ಹುಟ್ಟಿದಾಗ ಎಷ್ಟು ಪಕ್ಷಗಳಿದ್ದವು? ಈಗೆಷ್ಟಿವೆ? ಈ ಮಾಹಿತಿ ಮೋದಿ ಅವರ ಮನದಲ್ಲಿ ಇರಬೇಕಿತ್ತು. ಲೊಕಸಭೆಯಲ್ಲಿ ಈಗ ಬಿಜೆಪಿಗೆ 303 ಸೀಟುಗಳಿವೆ. ಆದರೆ, ಎಷ್ಟು ಸೀಟುಗಳಿಂದ ಈ ಅಂಕಿ ಆರಂಭವಾಯಿತು? ಆ ಪಕ್ಷದ ಪ್ರಯಾಣ ಶುರುವಾಗಿದ್ದು ಎಲ್ಲಿಂದ? ಮೊದಲಿನದ್ದೆಲ್ಲವನ್ನೂ ಮೋದಿ ಮರೆತರೆ ಹೇಗೆ? ಈಗಲೂ ಅವರು ಟೀಕಿಸಿದ ಕುಟುಂಬ ಕೇಂದ್ರಿತ ಪಕ್ಷಗಳು ಎನ್ ಡಿಎ ಕೂಟದಲ್ಲಿವೆಯಲ್ಲಾ ಎಂದು ಕುಟುಕಿದ್ದಾರೆ.

ಇತ್ತೀಚೆಗೆ, ನಿತ್ಯವೂ ಕುಟುಂಬ ರಾಜಕಾರಣ-ಭ್ರಷ್ಟಾಚಾರದ ಬಗ್ಗೆ ಹೇಳುವ ಅವರ ಪಕ್ಷದಲ್ಲೇ ಇರುವ ʼವಂಶವೃಕ್ಷದ ಘೋಂಡಾರಣ್ಯ ಮತ್ತು ಭ್ರಷ್ಟಾಚಾರʼ ಕೂಪದ ಬಗ್ಗೆ ಅವರೇಕೆ ದಿವ್ಯಮೌನ ವಹಿಸುತ್ತಾರೆ! ಕರ್ನಾಟಕದಿಂದ ಹಿಡಿದು, ವಿಂಧ್ಯ ಪರ್ವತದ ಆಚೆಗೂ ಬಿಜೆಪಿಗರ ಕುಟುಂಬಗಳ ಕುಲಕಸುಬು ರಾಜಕೀಯವೇ ಆಗಿ, ಭ್ರಷ್ಟಾಚಾರವು ಅವರ ನಿತ್ಯ ಆಚಾರ ಆಗಿದೆ ಎಂದು ಎಚ್ ಡಿಕೆ ಟೀಕಿಸಿದ್ದಾರೆ.

ದೇಶಕ್ಕೆ ಅಪಾಯ ಇರುವುದು ʼಕುಟುಂಬವಾದಿ ಪಕ್ಷಗಳಿಂದಲ್ಲ, ಬಿಜೆಪಿಯಂಥ ಕೋಮುವಾದಿ ಪಕ್ಷದಿಂದ.ʼ ಭಾವನಾತ್ಮಕವಾಗಿ ಜನರನ್ನು ಜಗಳಕ್ಕಿಳಿಸಿ ಜಾಗ ಹಿಡಿಯುವ ಪರಿಪಾಠ ಪ್ರಜಾಪ್ರಭುತ್ವದ ನಿಜವಾದ ದೊಡ್ಡ ಶತ್ರು. ಸಂವಿಧಾನಕ್ಕೆ ಗಂಡಾಂತರಕಾರಿ. ಮಾನ್ಯ ಮೋದಿ ಅವರಿಗೆ ಈ ವಿಷಯ ಗೊತ್ತಿಲ್ಲವೆಂದು ನಾನು ಭಾವಿಸುವುದಿಲ್ಲ. ಜಾತಿ, ಧರ್ಮ, ಸಂಸ್ಕೃತಿ, ಭಾಷೆ, ಆಹಾರ, ವ್ಯಾಪಾರ ಇತ್ಯಾದಿಗಳ ಮೂಲಕ ವಿವಿಧತೆಯಲ್ಲಿ ಏಕತೆ ಸಾಧಿಸಿದ್ದ ಭಾರತದ ಭಾವೈಕ್ಯತೆಯ ಬುಡಕ್ಕೆ ಕೊಡಲಿ ಹಾಕಿದವರು ಯಾರು? ಪ್ರಜಾಸತ್ತೆಯ ಅಖಂಡ ರಕ್ಷಕನಾದ ಸಂವಿಧಾನಕ್ಕೇ ಅಪಚಾರವೆಸಗಿ ʼಆಪರೇಷನ್ ಕಮಲʼವೆಂಬ ಅನೈತಿಕ ರಾಜಕಾರಣ ಆರಂಭ ಮಾಡಿದ್ದು ಯಾರು? ಕರ್ನಾಟಕದಲ್ಲಿ ಎರಡು ಸಲ ಬಿಜೆಪಿ ಸರಕಾರ ಬಂದಿದ್ದು ಹೇಗೆ? ರಾಜಮಾರ್ಗದಲ್ಲಿ ಬಂತಾ? ಇಲ್ಲ, ಶಾಸಕರನ್ನು ಸಂತೆಯಲ್ಲಿ ರಾಸುಗಳಂತೆ ನಿರ್ಲಜ್ಜವಾಗಿ ಖರೀದಿಸಿದ್ದರಿಂದಲೇ ಬಂದ ʼಅಕ್ರಮ ಸರಕಾರʼವಿದು! ಪ್ರಧಾನಿಯವರು ಇದನ್ನು ನಿರಾಕರಿಸುತ್ತಾರಾ? ಮೋದಿ ಅವರು ಈ ನೀತಿಹೀನ ಸರಕಾರಕ್ಕೆ ಅಧಿಕೃತ ಮುದ್ರೆ ಒತ್ತಿದ್ದು ಸುಳ್ಳಾ? ಕೋಟಿ ಕೋಟಿ ಲೂಟಿ ಹೊಡೆದು ಅಕ್ಕಪಕ್ಕದ ಪಕ್ಷಗಳ ಶಾಸಕರನ್ನು ಎಗರಿಸಿಕೊಂಡು ಹೋಗಿದ್ದು ದೇಶಕ್ಕೆ ಒಳ್ಳೆಯದಾ? ಯುವಜನರಿಗೆ ದಾರಿದೀಪವಾ? ಈ ಬಗ್ಗೆ ಮೋದಿ ಅವರ ಮನ್ ಕೀ ಬಾತ್ ಮೌನವಾಗಿದೆ! ಯಾಕೆ ಎಂದು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ:ದಾವೋಸ್ ಪ್ರವಾಸ ಯಶಸ್ವಿ, ರಾಜ್ಯದಲ್ಲಿ 5 ಲಕ್ಷ ಕೋಟಿ ರೂ ಬಂಡವಾಳ ಹೂಡಿಕೆ ನಿರೀಕ್ಷೆ: ನಿರಾಣಿ

‘ಆಪರೇಷನ್ ಕಮಲವನ್ನೇ ರಾಷ್ಟ್ರೀಕರಣʼ ಮಾಡಿದ ಕಿರಾತಕ ರಾಜಕಾರಣಕ್ಕೆ ಮೌನಸಮ್ಮತಿ ತೋರಿದವರು ಮೋದಿ ಅವರಲ್ಲವೇ? ಜನಾದೇಶದಂತೆ ರಚನೆಯಾಗಿದ್ದ ಮಧ್ಯಪ್ರದೇಶದ ಸರಕಾರವನ್ನು ಕೆಡವಿದ್ದು ಇವರ ಪಕ್ಷವೇ ಅಲ್ಲವೆ? ಒಂದೆಡೆ ಸಂಸತ್ತು-ಸಂವಿಧಾನಕ್ಕೆ ಶಿರಸಾಷ್ಟಾಂಗ ನಮಸ್ಕಾರ! ಇನ್ನೊಂದೆಡೆ; ಆಪರೇಷನ್ ಕಮಲದ ಮೂಲಕ ಸಂವಿಧಾನದ ಶಿರಚ್ಛೇಧ! ಇದೆಂಥಾ ರಾಜಕಾರಣ? ಇದು ರಾಷ್ಟ್ರೀಯವಾದಿ ಪಕ್ಷದ ಸೋಗಲಾಡಿತನ ಎಂದು ಎಚ್ ಡಿಕೆ ಕಟುಮಾತುಗಳಲ್ಲಿ ಜರಿದಿದ್ದಾರೆ.

ಮುಖ್ಯಮಂತ್ರಿ ಸ್ಥಾನವನ್ನು ಕರ್ನಾಟಕದಲ್ಲಿ ಮಾರಾಟಕ್ಕೆ ಇಟ್ಟಿದ್ದು ಯಾರು? ಕುಟುಂಬ ರಾಜಕಾರಣದ ಪಕ್ಷವೋ? ಬಿಜೆಪಿಯೋ? “ರೂ.2,500 ಕೋಟಿ ಕೊಡಿ, ನಿಮ್ಮನ್ನು ಸಿಎಂ ಮಾಡುತ್ತೇವೆ” ಎಂದು ಕೇಳಿದ ಪಾರ್ಟಿ ಬಿಜೆಪಿ. ಇದನ್ನು ಹೇಳಿದ್ದು ಸ್ವತಃ ಬಿಜೆಪಿ ಶಾಸಕರೇ! ಆ ಶಾಸಕರ ವಿರುದ್ಧ ಒಂದು ನೊಟೀಸನ್ನೂ ಕೊಡಲಿಲ್ಲ. ಮೋದಿ ಅವರೂ ಸಿಎಂ ಕರ್ಚಿ ಮಾರಾಟದ ಬಗ್ಗೆ ಮಾತನಾಡಲಿಲ್ಲ. ಈ ಘನಘೋರ ಆರೋಪದ ಬಗ್ಗೆಯೂ ಅವರದ್ದು ಮುಂದುವರಿದ ಮೌನ! ಅಲ್ಲಿಗೆ ಶಾಸಕರ ಹೇಳಿಕೆ ಸತ್ಯ ಎಂದಾಯಿತಲ್ಲ. ಪಿಎಸ್‌ʼಐ ಹುದ್ದೆಗಳಂತೆ ಸಿಎಂ ಪದವಿಯನ್ನೂ ಮಾರಿಕೊಳ್ಳುವುದು ದೇಶಕ್ಕೆ ಸೌಭಾಗ್ಯವಾ? ಯುವಕರಿಗೆ ಆದರ್ಶವಾ? ಕುಟುಂಬ ರಾಜಕಾರಣದ ನೆಪವೊಡ್ಡಿ ಪ್ರಾದೇಶಿಕ ಪಕ್ಷಗಳನ್ನು ಮುಗಿಸುವ ತಂತ್ರ ಫಲಿಸದು. ಭಾರತವೆಂದರೆ ಬಿಜೆಪಿಯಷ್ಟೇ ಅಲ್ಲ, 140 ಕೋಟಿಗೂ ಹೆಚ್ಚು ಭಾರತೀಯರು ಸೇರಿದರೆ ಮಾತ್ರ ಭಾರತ. ಪ್ರಧಾನಿಗಳು ಈ ಆಶಯವನ್ನು ಅರ್ಥ ಮಾಡಿಕೊಳ್ಳುತ್ತಾರೆ ಎಂದು ನಂಬಿದ್ದೇನೆ ಎಂದು ಎಚ್ ಡಿ ಕುಮಾರಸ್ವಾಮಿ ಹೇಳಿದ್ದಾರೆ.

ಟಾಪ್ ನ್ಯೂಸ್

23

ಹೂಡಿಕೆದಾರರಿಗೆ ಲಾಭಾಂಶ ನೀಡದ ಆರೋಪ ʼManjummel Boysʼ ನಿರ್ಮಾಪಕರ ವಿರುದ್ದ ದೂರು ದಾಖಲು

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

Bommai BJP

Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

23

ಹೂಡಿಕೆದಾರರಿಗೆ ಲಾಭಾಂಶ ನೀಡದ ಆರೋಪ ʼManjummel Boysʼ ನಿರ್ಮಾಪಕರ ವಿರುದ್ದ ದೂರು ದಾಖಲು

18-uv-fusion

Clay Pot: ಬಡವರ ಫ್ರಿಡ್ಜ್ ಮಣ್ಣಿನ ಮಡಕೆ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

17-uv-fusion

UV Fusion: ನಿನ್ನೊಳಗೆ ನೀ ಇರುವಾಗ…

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.